ಬ್ರೇಕಿಂಗ್ ನ್ಯೂಸ್
03-09-24 08:40 pm Udupi Correspondent ಕ್ರೈಂ
ಉಡುಪಿ, ಸೆ.3: ರಾಮಮಂದಿರ ಮತ್ತು ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಲ್ಲದೇ ಇಸ್ಲಾಂಗೆ ಮತಾಂತರವಾಗುವಂತೆ ಗೆಳತಿಗೆ ಕಿರುಕುಳ ನೀಡಿದ ಆರೋಪದಲ್ಲಿ ವೈದ್ಯಕೀಯ ವಿದ್ಯಾರ್ಥಿಯೊಬ್ಬನನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು 27 ವರ್ಷದ ಮಹಮ್ಮದ್ ಡ್ಯಾನಿಷ್ ಖಾನ್ ಎಂದು ಗುರುತಿಸಲಾಗಿದ್ದು ಆತನ ವಿರುದ್ಧ ಉಡುಪಿ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸಹಪಾಠಿ ಯುವತಿ ನೀಡಿದ ದೂರಿನ ಮೇರೆಗೆ ಡ್ಯಾನಿಷ್ ಖಾನ್ ನನ್ನು ಬಂಧಿಸಲಾಗಿದೆ. ಪೊಲೀಸರ ಪ್ರಕಾರ, ಡ್ಯಾನಿಶ್ ಖಾನ್ ಉಡುಪಿಯ ಪ್ರತಿಷ್ಠಿತ ವಿಶ್ವವಿದ್ಯಾನಿಲಯದಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿದ್ದ. ಅಲ್ಲಿ ತನ್ನ ಸಹಪಾಠಿಯೊಂದಿಗೆ ಸ್ನೇಹ ಬೆಳೆಸಿದ್ದು ಇಬ್ಬರೂ ಡೇಟಿಂಗ್ ಮಾಡಲು ಪ್ರಾರಂಭಿಸಿದ್ದರು.
ವಿದ್ಯಾರ್ಥಿನಿ ನೀಡಿದ ದೂರಿನ ಪ್ರಕಾರ, ಜನವರಿ 22ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆ ವೇಳೆ ಡ್ಯಾನಿಶ್ ಖಾನ್ ರಾಮಮಂದಿರ ಮತ್ತು ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಪದಗಳನ್ನು ಬಳಸಿದ್ದಾನೆ. ಅಷ್ಟೇ ಅಲ್ಲದೆ ಮಾರ್ಚ್ 11ರಂದು ಯುವತಿ ಇದ್ದ ರೂಮಿಗೆ ನುಗ್ಗಿ ಮದುವೆ ಆಗುವಂತೆ ಒತ್ತಾಯಿಸಿದ್ದಲ್ಲದೆ ಬಲವಂತವಾಗಿ ಇಸ್ಲಾಂಗೆ ಮತಾಂತರಗೊಳ್ಳುವಂತೆ ಒತ್ತಾಯಿಸಿದ್ದ ಎಂದು ಉಲ್ಲೇಖಿಸಲಾಗಿದೆ.
ಮದುವೆ ಪ್ರಸ್ತಾಪವನ್ನು ಯುವತಿ ತಿರಸ್ಕರಿಸಿದ್ದಕ್ಕೆ ಡ್ಯಾನಿಷ್ ಖಾನ್ ಗೆಳತಿಯ ಕಪಾಳಕ್ಕೆ ಹೊಡೆದಿದ್ದಾನೆ. ಅಲ್ಲದೆ ತನ್ನ ದೇಹವನ್ನು ಮುಟ್ಟುವ ಮೂಲಕ ಅನುಚಿತವಾಗಿ ವರ್ತಿಸಿದ್ದಾನೆ. ಪದೇ ಪದೇ ವಿರೋಧಿಸಿದರೂ ಆರೋಪಿ ತನ್ನ ಖಾಸಗಿ ಅಂಗಗಳನ್ನು ಮುಟ್ಟಿದ್ದಾನೆ ಎಂದು ಪೊಲೀಸರಿಗೆ ತಿಳಿಸಿದ್ದಾಳೆ. ಆ ಘಟನೆಯ ನಂತರ ಡ್ಯಾನಿಶ್ ಖಾನ್ ತನಗೆ ಫೋನ್ ಮಾಡಿ ಕಿರುಕುಳ ನೀಡಲಾರಂಭಿಸಿದ್ದ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಕೊನೆಗೆ ಒತ್ತಡ ತಡೆದುಕೊಳ್ಳಲಾಗದೆ ಆಗಸ್ಟ್ 31ರಂದು ಪೊಲೀಸರಿಗೆ ದೂರು ನೀಡಿದ್ದಾಳೆ.
ಮಹಿಳೆ ನೀಡಿದ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಡ್ಯಾನಿಷ್ ಖಾನ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Forced Conversion in Karnataka, Dr Mohammed Danish Khan arrested for forcing medical student to convert to Islam in Udupi.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
15-08-26 01:28 pm
HK News Staffer
ಕೋಟೆಕಾರಿನಲ್ಲಿ ಕಟ್ಟಡದಿಂದ ಬಿದ್ದು ಗಾಯಗೊಂಡ ವಲಸೆ ಕ...
14-08-26 09:09 pm
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm