ಬ್ರೇಕಿಂಗ್ ನ್ಯೂಸ್
04-09-24 06:33 pm Mangalore Correspondent ಕ್ರೈಂ
ಬೆಳ್ತಂಗಡಿ, ಸೆ.4: ನಡುರಾತ್ರಿಯಲ್ಲಿ ಗೆಳತಿ ಮನೆಗೆ ಹೋಗಿದ್ದ ವ್ಯಕ್ತಿಯೊಬ್ಬನನ್ನು ಅಡ್ಡಗಟ್ಟಿ ವಿಡಿಯೋ ಮಾಡಿ, ಎರಡು ಲಕ್ಷ ಹಣಕ್ಕಾಗಿ ಪೀಡಿಸಿದ ಘಟನೆ ನಡೆದಿದ್ದು ಪ್ರಕರಣದಲ್ಲಿ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.
ಬೆಳ್ತಂಗಡಿ ತಾಲೂಕು ಉರುವಾಲು ಗ್ರಾಮದ ಮುರಿಯಾಳ ಮನೆ ನಿವಾಸಿ ಸಂಶು ಯಾನೆ ಸಂಶುದ್ದೀನ್ (38) ಬಂಧಿತ ಆರೋಪಿ. ಪುತ್ತೂರಿನ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗಿ ಯುವಕನೊಬ್ಬ ಆಗಸ್ಟ್ 31 ರಂದು ಬೆಳ್ತಂಗಡಿಯ ಕರಾಯದ ಮಸೀದಿ ಬಳಿ ತನ್ನ ಬೈಕ್ ನಿಲ್ಲಿಸಿ ಗೆಳತಿ ಮನೆಗೆ ಹೋಗಿದ್ದರು. ನಸುಕಿನ ವೇಳೆ ತನ್ನ ಮನೆಗೆ ಹಿಂದಿರುಗುವ ಸಲುವಾಗಿ ಬೈಕಿನ ಬಳಿಗೆ ಬಂದಾಗ, ಸಂಶುದ್ದೀನ್ ಮತ್ತಾತನ ಸಂಗಡಿಗರು ವಿಡಿಯೋ ಚಿತ್ರೀಕರಣ ಮಾಡುತ್ತಾ ಪ್ರಶ್ನೆ ಮಾಡಿದ್ದಾರೆ.
ಬಳಿಕ ಸಮೀಪದ ಅಂಗಡಿ ಬಳಿಗೆ ಕರೆದೊಯ್ದು ನೀನು ಯಾರು ? ಯಾಕೆ ಇಲ್ಲಿಗೆ ಬಂದದ್ದು? ದರೋಡೆ ಮಾಡಲು ಬಂದಿದ್ದಾ? ಇಲ್ಲಿ ಮೊದಲು ಆಗಿದ್ದ ದರೋಡೆಯನ್ನು ನೀನೇ ಮಾಡಿದ್ದಾ ಎಂದೆಲ್ಲಾ ಪ್ರಶ್ನಿಸಿದ್ದಾರೆ. ತಾನು ದರೋಡೆಗೆ ಬಂದವನಲ್ಲ ಎಂದು ತಿಳಿಸಿದರೂ ಕೇಳದೆ, ನಾವು ಜನ ಮಾಡಿ ನಿನಗೆ ಹೊಡೆಯುತ್ತೇವೆ. ದರೋಡೆ ಮಾಡಲು ಯತ್ನಿಸಿದ್ದಾಗಿ ಪೊಲೀಸ್ ಇಲಾಖೆಗೆ ದೂರು ನೀಡುತ್ತೇವೆ ಎಂದೆಲ್ಲಾ ಬೆದರಿಸಿದ್ದಾರೆ. ನೀನು 2 ಲಕ್ಷ ಹಣ ಕೊಟ್ಟರೆ, ನಿನ್ನ ಮೇಲೆ ಕೇಸು ಇಲ್ಲದಾಗೆ ಮಾಡುತ್ತೇನೆ ಎಂದು ಹೇಳಿದ್ದು, ಭಯದಿಂದ ಹಣವನ್ನು ನಾಳೆ ಕೊಡುತ್ತೇನೆಂದು ಯುವಕ ತಿಳಿಸಿದ್ದ.
ಈ ವೇಳೆ ಆರೋಪಿತರು ಯುವಕನ ಕೈಯಲ್ಲಿದ್ದ ಬೈಕ್ ಕೀಯನ್ನು ಪಡೆದು ಹಣ ಕೊಟ್ಟ ಬಳಿಕ ಬೈಕ್ ತೆಗೆದುಕೊಂಡು ಹೋಗುವಂತೆ ತಿಳಿಸಿದ್ದಾರೆ. ಪೊಲೀಸರಿಗೆ ದೂರು ನೀಡಲು ಹೋದರೆ ನಿನ್ನ ಮೇಲೆ ಬೇರೆಯೇ ಕೇಸು ದಾಖಲಿಸಿ ಒಳಗೆ ಹಾಕಿಸುತ್ತೇವೆ ಎಂದು ಬೆದರಿಸಿದ್ದಾರೆ. ಆರೋಪಿ ತನ್ನ ಮೊಬೈಲ್ ನಂಬ್ರವನ್ನು ಯುವಕನಿಗೆ ನೀಡಿದ್ದು, ಆತ ನೀಡಿದ ನಂಬರಿಗೆ ಒಟ್ಟು 25 ಸಾವಿರ ರೂಪಾಯಿ ಹಣವನ್ನು ಗೂಗಲ್ ಪೇ ಮೂಲಕ ಜಮಾ ಮಾಡಿದ್ದರು. ಉಳಿಕೆ ಮೊತ್ತವಾದ 1,75,000 ರೂ.ವನ್ನು ಐದು ದಿನಗಳಲ್ಲಿ ಪಾವತಿಸಬೇಕು ಹಾಗೂ ಬೈಕ್ ದಾಖಲೆಗಳನ್ನು ಒದಗಿಸಬೇಕೆಂದು ಬೇಡಿಕೆ ಇಟ್ಟಿದ್ದ. ಇದರಿಂದ ಕಂಗೆಟ್ಟ ಸಂತ್ರಸ್ತ ಯುವಕ ಗೆಳೆಯರೊಡನೆ ಚರ್ಚಿಸಿ ಪ್ರಕರಣದ ಬಗ್ಗೆ ಉಪ್ಪಿನಂಗಡಿ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
Youth arrested for Blackmail of girl by making video in Uppinangady.
25-03-26 09:32 pm
HK News Staffer
13 ವರ್ಷಗಳ ಜೀವನ್ಮರಣ ಹೋರಾಟಕ್ಕೆ ಕೊನೆ ; ನಿಷ್ಕ್ರಿಯ...
25-03-26 03:25 pm
ಹಿಂದು, ಸಿಖ್, ಬೌದ್ಧರಲ್ಲಿ ಮಾತ್ರ ಪರಿಶಿಷ್ಟ ಮೀಸಲು,...
24-03-26 02:55 pm
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
25-03-26 06:15 pm
HK News Staffer
ಟ್ರಂಪ್ ಯುದ್ಧ ವಿರಾಮ ನಡುವೆಯೂ ಇಸ್ರೇಲ್ ದಾಳಿ ಮುಂದು...
24-03-26 04:43 pm
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
25-03-26 08:44 pm
HK News Staffer
ಭಾರತೀಯ ನೌಕಾಪಡೆ ರಕ್ಷಣೆ, ಆತಂಕದಿಂದ ಪಾರಾಗಿದ್ದೇವೆ...
25-03-26 05:23 pm
ಟೋಲ್ ಪ್ಲಾಜಾಗಳ ಮೇಲ್ಛಾವಣಿಯಲ್ಲಿ ಸೌರ ವಿದ್ಯುತ್ ಘಟಕ...
25-03-26 03:49 pm
ಗುಡ್ಡದಲ್ಲಿ ಹೊಳೆ ಬರುತ್ತಾ? ನಿವೇಶನ ರಹಿತರ ಜಮೀನು ಹ...
25-03-26 12:15 pm
ಹಣಕಾಸು ಮಸೂದೆ ಮೇಲಿನ ಚರ್ಚೆ ; ರಾಷ್ಟ್ರೀಯ ಭದ್ರತೆ,...
24-03-26 09:29 pm
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm