ಬ್ರೇಕಿಂಗ್ ನ್ಯೂಸ್
04-09-24 06:33 pm Mangalore Correspondent ಕ್ರೈಂ
ಬೆಳ್ತಂಗಡಿ, ಸೆ.4: ನಡುರಾತ್ರಿಯಲ್ಲಿ ಗೆಳತಿ ಮನೆಗೆ ಹೋಗಿದ್ದ ವ್ಯಕ್ತಿಯೊಬ್ಬನನ್ನು ಅಡ್ಡಗಟ್ಟಿ ವಿಡಿಯೋ ಮಾಡಿ, ಎರಡು ಲಕ್ಷ ಹಣಕ್ಕಾಗಿ ಪೀಡಿಸಿದ ಘಟನೆ ನಡೆದಿದ್ದು ಪ್ರಕರಣದಲ್ಲಿ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.
ಬೆಳ್ತಂಗಡಿ ತಾಲೂಕು ಉರುವಾಲು ಗ್ರಾಮದ ಮುರಿಯಾಳ ಮನೆ ನಿವಾಸಿ ಸಂಶು ಯಾನೆ ಸಂಶುದ್ದೀನ್ (38) ಬಂಧಿತ ಆರೋಪಿ. ಪುತ್ತೂರಿನ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗಿ ಯುವಕನೊಬ್ಬ ಆಗಸ್ಟ್ 31 ರಂದು ಬೆಳ್ತಂಗಡಿಯ ಕರಾಯದ ಮಸೀದಿ ಬಳಿ ತನ್ನ ಬೈಕ್ ನಿಲ್ಲಿಸಿ ಗೆಳತಿ ಮನೆಗೆ ಹೋಗಿದ್ದರು. ನಸುಕಿನ ವೇಳೆ ತನ್ನ ಮನೆಗೆ ಹಿಂದಿರುಗುವ ಸಲುವಾಗಿ ಬೈಕಿನ ಬಳಿಗೆ ಬಂದಾಗ, ಸಂಶುದ್ದೀನ್ ಮತ್ತಾತನ ಸಂಗಡಿಗರು ವಿಡಿಯೋ ಚಿತ್ರೀಕರಣ ಮಾಡುತ್ತಾ ಪ್ರಶ್ನೆ ಮಾಡಿದ್ದಾರೆ.
ಬಳಿಕ ಸಮೀಪದ ಅಂಗಡಿ ಬಳಿಗೆ ಕರೆದೊಯ್ದು ನೀನು ಯಾರು ? ಯಾಕೆ ಇಲ್ಲಿಗೆ ಬಂದದ್ದು? ದರೋಡೆ ಮಾಡಲು ಬಂದಿದ್ದಾ? ಇಲ್ಲಿ ಮೊದಲು ಆಗಿದ್ದ ದರೋಡೆಯನ್ನು ನೀನೇ ಮಾಡಿದ್ದಾ ಎಂದೆಲ್ಲಾ ಪ್ರಶ್ನಿಸಿದ್ದಾರೆ. ತಾನು ದರೋಡೆಗೆ ಬಂದವನಲ್ಲ ಎಂದು ತಿಳಿಸಿದರೂ ಕೇಳದೆ, ನಾವು ಜನ ಮಾಡಿ ನಿನಗೆ ಹೊಡೆಯುತ್ತೇವೆ. ದರೋಡೆ ಮಾಡಲು ಯತ್ನಿಸಿದ್ದಾಗಿ ಪೊಲೀಸ್ ಇಲಾಖೆಗೆ ದೂರು ನೀಡುತ್ತೇವೆ ಎಂದೆಲ್ಲಾ ಬೆದರಿಸಿದ್ದಾರೆ. ನೀನು 2 ಲಕ್ಷ ಹಣ ಕೊಟ್ಟರೆ, ನಿನ್ನ ಮೇಲೆ ಕೇಸು ಇಲ್ಲದಾಗೆ ಮಾಡುತ್ತೇನೆ ಎಂದು ಹೇಳಿದ್ದು, ಭಯದಿಂದ ಹಣವನ್ನು ನಾಳೆ ಕೊಡುತ್ತೇನೆಂದು ಯುವಕ ತಿಳಿಸಿದ್ದ.
ಈ ವೇಳೆ ಆರೋಪಿತರು ಯುವಕನ ಕೈಯಲ್ಲಿದ್ದ ಬೈಕ್ ಕೀಯನ್ನು ಪಡೆದು ಹಣ ಕೊಟ್ಟ ಬಳಿಕ ಬೈಕ್ ತೆಗೆದುಕೊಂಡು ಹೋಗುವಂತೆ ತಿಳಿಸಿದ್ದಾರೆ. ಪೊಲೀಸರಿಗೆ ದೂರು ನೀಡಲು ಹೋದರೆ ನಿನ್ನ ಮೇಲೆ ಬೇರೆಯೇ ಕೇಸು ದಾಖಲಿಸಿ ಒಳಗೆ ಹಾಕಿಸುತ್ತೇವೆ ಎಂದು ಬೆದರಿಸಿದ್ದಾರೆ. ಆರೋಪಿ ತನ್ನ ಮೊಬೈಲ್ ನಂಬ್ರವನ್ನು ಯುವಕನಿಗೆ ನೀಡಿದ್ದು, ಆತ ನೀಡಿದ ನಂಬರಿಗೆ ಒಟ್ಟು 25 ಸಾವಿರ ರೂಪಾಯಿ ಹಣವನ್ನು ಗೂಗಲ್ ಪೇ ಮೂಲಕ ಜಮಾ ಮಾಡಿದ್ದರು. ಉಳಿಕೆ ಮೊತ್ತವಾದ 1,75,000 ರೂ.ವನ್ನು ಐದು ದಿನಗಳಲ್ಲಿ ಪಾವತಿಸಬೇಕು ಹಾಗೂ ಬೈಕ್ ದಾಖಲೆಗಳನ್ನು ಒದಗಿಸಬೇಕೆಂದು ಬೇಡಿಕೆ ಇಟ್ಟಿದ್ದ. ಇದರಿಂದ ಕಂಗೆಟ್ಟ ಸಂತ್ರಸ್ತ ಯುವಕ ಗೆಳೆಯರೊಡನೆ ಚರ್ಚಿಸಿ ಪ್ರಕರಣದ ಬಗ್ಗೆ ಉಪ್ಪಿನಂಗಡಿ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
Youth arrested for Blackmail of girl by making video in Uppinangady.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
15-08-26 01:28 pm
HK News Staffer
ಕೋಟೆಕಾರಿನಲ್ಲಿ ಕಟ್ಟಡದಿಂದ ಬಿದ್ದು ಗಾಯಗೊಂಡ ವಲಸೆ ಕ...
14-08-26 09:09 pm
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm