ಬ್ರೇಕಿಂಗ್ ನ್ಯೂಸ್
09-12-20 05:48 pm Headline Karnataka News Network ಕ್ರೈಂ
ಕಲಬುರಗಿ, ಡಿ.9 : ಲಂಚ ಸ್ವೀಕಾರ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಕಲಬುರಗಿಯ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ (ಸಿಆರ್ ಇ ಸೆಲ್)ದಲ್ಲಿ ಡಿವೈಎಸ್ಪಿ ಆಗಿರುವ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರಿಗೆ ನಾಲ್ಕು ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಜಿಲ್ಲಾ ಪ್ರಧಾನ ಹಾಗೂ ವಿಶೇಷ ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
ವಿಜಯಲಕ್ಷ್ಮೀ ಶಿಕ್ಷೆಗೆ ಗುರಿಯಾದವರು. ಇವರಿಗೆ 4 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ತೀರ್ಪು ಜಿಲ್ಲಾ ವಿಶೇಷ ಸತ್ರ ನ್ಯಾಯಾಧೀಶ ಸತೀಶ್ ಸಿಂಗ್ ಆದೇಶ ಮಾಡಿದ್ದಾರೆ.
ವಿಜಯಲಕ್ಷ್ಮಿ ಶಹಾಬಾದ್ ಠಾಣೆ ಇನ್ಸ್ ಪೆಕ್ಟರ್ ಆಗಿದ್ದ ವೇಳೆ ಲಂಚ ಸ್ವೀಕಾರ ವಿಚಾರದಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಅವರು ಕಲಬುರಗಿಯ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ (ಸಿಆರ್ಇ ಸೆಲ್)ದಲ್ಲಿ ಡಿವೈಎಸ್ಪಿಯಾಗಿದ್ದಾರೆ.
2015ರ ಡಿಸೆಂಬರ್ ತಿಂಗಳಲ್ಲಿ ಪೆಟ್ರೋಲ್ ಬಂಕ್ ಒಂದರಲ್ಲಿ ವಾಹನಕ್ಕೆ ಡೀಸೆಲ್ ಹಾಕಿಸಲು ತೆರಳಿದಾಗ ಸಿಬ್ಬಂದಿ ಜತೆ ಜಗಳವಾಡಿದ್ದ ಆರೋಪದಲ್ಲಿ ರಾಜು ಎಂಬುವರ ವಿರುದ್ಧ ಶಹಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ರಾಜುನನ್ನು ಬಂಧಿಸಿ ಅವರ ವಾಹನವನ್ನು ಜಪ್ತಿ ಮಾಡಲಾಗಿತ್ತು. ನ್ಯಾಯಾಲಯದಿಂದ ಜಾಮೀನು ಪಡೆದು ವಾಹನ ಬಿಡಿಸಿಕೊಳ್ಳಲು ಶಹಾಬಾದ್ ಠಾಣೆಗೆ ರಾಜು ಬಂದಿದ್ದರು. ಈ ವೇಳೆ, ವಿಜಯಲಕ್ಷ್ಮೀ 25 ಸಾವಿರ ರೂ. ಬೇಡಿಕೆ ಇಟ್ಟಿದ್ದರೆನ್ನಲಾಗಿತ್ತು. ರಾಜು ಲೋಕಾಯುಕ್ತರಿಗೆ ದೂರು ನೀಡಿದ್ದರಿಂದ ದಾಳಿ ನಡೆಸಿದ್ದು ಹಣದ ಸಮೇತ ವಿಜಯಲಕ್ಷ್ಮೀ ಸಿಕ್ಕಿಬಿದ್ದಿದ್ದರು.
ಕಲಬುರಗಿ ಲೋಕಾಯುಕ್ತ ಕಚೇರಿಯಲ್ಲಿ ಪ್ರಕರಣದ ತನಿಖೆ ನಡೆಸಿ ದೋಷಾರೋಪಣ ಪಟ್ಟಿ ಸಲ್ಲಿಸಲಾಗಿತ್ತು. ನ್ಯಾಯಾಧೀಶರು ತೀರ್ಪು ಪ್ರಕಟಿಸಿದ ಬೆನ್ನಲ್ಲೇ ಲೋಕಾಯುಕ್ತ ಪೊಲೀಸರು ಡಿವೈಎಸ್ಪಿ ವಿಜಯಲಕ್ಷ್ಮೀ ಅವರನ್ನು ವಶಕ್ಕೆ ಪಡೆದು, ಕೇಂದ್ರ ಕಾರಾಗೃಹಕ್ಕೆ ಕಳುಹಿಸಿಕೊಟ್ಟಿದ್ದಾರೆ.
The District Principal and Special Session Court here on Tuesday sentenced a Deputy Superintendent of Police to four years' imprisonment and slapped a fine of Rs 10,000 for accepting a bribe.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am