ಬ್ರೇಕಿಂಗ್ ನ್ಯೂಸ್
05-09-24 02:55 pm Mangalore Correspondent ಕ್ರೈಂ
ಪುತ್ತೂರು, ಸೆ.5: ತನ್ನನ್ನು ಸಿಆರ್ ಪಿಎಫ್ ಯೋಧನೆಂದು ಫೇಸ್ಬುಕ್ ನಲ್ಲಿ ಪರಿಚಯಿಸಿಕೊಂಡ ವ್ಯಕ್ತಿಯೊಬ್ಬ, ತನಗೆ ಕಾಶ್ಮೀರಕ್ಕೆ ವರ್ಗಾವಣೆಯಾಗಿದೆ, ಫರ್ನಿಚರ್ ಗಳನ್ನು ಮಾರಾಟ ಮಾಡುತ್ತೇನೆಂದು ಹೇಳಿ ಅಡ್ವಾನ್ಸ್ ಹಣ ಪಡೆದು ಪುತ್ತೂರಿನ ವ್ಯಕ್ತಿಗೆ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ.
ಪುತ್ತೂರು ತಾಲೂಕು ಪಂಚಾಯಿತಿ ನರೇಗಾ ಸಂಯೋಜಕ ಭರತ್ ಕುಮಾರ್ ಹಣ ಕಳಕೊಂಡವರು. ಇವರಿಗೆ ಫೇಸ್ಬುಕ್ ಮೆಸೆಂಜರ್ ನಲ್ಲಿ ಗೆಳೆಯ ರಾಧಾಕೃಷ್ಣ ಹೆಸರಿನಲ್ಲಿ ಮೆಸೇಜ್ ಬಂದಿತ್ತು. ನನ್ನ ಗೆಳೆಯ ಸಂತೋಷ್ ಸಿಆರ್ ಪಿಎಫ್ ಯೋಧನಾಗಿದ್ದು, ಕಾಶ್ಮೀರಕ್ಕೆ ವರ್ಗಾವಣೆಯಾಗುತ್ತಿದ್ದಾನೆ. ಆತನ ಮನೆಯಲ್ಲಿರುವ ಪೀಠೋಪಕರಣ, ಇಲೆಕ್ಟ್ರಾನಿಕ್ ವಸ್ತುಗಳನ್ನು ಕಡಿಮೆ ದರದಲ್ಲಿ ಮಾರಾಟ ಮಾಡುತ್ತಿದ್ದಾನೆ ಎಂದು ಸಂದೇಶ ಬಂದಿತ್ತು.
ಬಳಿಕ ಸಂತೋಷ್ ಎಂದು ಹೇಳಿಕೊಂಡ ವ್ಯಕ್ತಿಯೊಬ್ಬ ಭರತ್ ಗೆ ಕರೆ ಮಾಡಿದ್ದು ಮನೆ ಸಾಮಗ್ರಿಗಳನ್ನು ಕಳಿಸಿಕೊಡುವುದಾಗಿ ಹೇಳಿ ಫೋಟೋ ಕಳಿಸಿದ್ದಾನೆ. ಸಾಮಗ್ರಿಗೆ 95 ಸಾವಿರ ರೂ. ಎಂದು ಹೇಳಿದ ಆ ವ್ಯಕ್ತಿಯ ಜೊತೆಗೆ ಭರತ್ ಚೌಕಾಶಿ ಮಾಡಿದ್ದು, ಹತ್ತು ಸಾವಿರ ರೂ. ಅಡ್ವಾನ್ಸ್ ಮಾಡಿದ್ದಾರೆ. ಬಳಿಕ ಬೆಂಗಳೂರಿನಿಂದ ಸಿಆರ್ ಪಿಎಫ್ ಲಾರಿಯಲ್ಲಿ ಸಾಮಗ್ರಿ ಕಳಿಸಿಕೊಡುತ್ತಿದ್ದೇನೆ, ಕೂಡಲೇ ಉಳಿಕೆ ಹಣ ಕಳಿಸುವಂತೆ ವ್ಯಕ್ತಿ ಒತ್ತಡ ಹೇರಿದ್ದ. ಈ ಹಂತದಲ್ಲಿ ಸಂಶಯಕ್ಕೀಡಾದ ಭರತ್, ಫೇಸ್ಬುಕ್ ಗೆಳೆಯ ರಾಧಾಕೃಷ್ಣ ಅವರಿಗೆ ಕರೆ ಮಾಡಿದಾಗ, ತಾನೇನೂ ಮೆಸೇಜ್ ಹಾಕಿಲ್ಲ ಎಂದುತ್ತರ ಬಂದಿದೆ. ಇದರಿಂದ ಮೋಸ ಹೋಗಿದ್ದು ಅರಿವಾಗುತ್ತಲೇ ಭರತ್ ಪೊಲೀಸರಿಗೆ ದೂರು ನೀಡಿದ್ದಾರೆ.
ಮೆಸೇಜ್ ಕಳಿಸಿದ್ದ ಫೇಸ್ಬುಕ್ ಖಾತೆ ಬ್ಲಾಕ್ ಆಗಿದೆ. ಹಣ ಕಳಿಸಿದ್ದ ಫೋನ್ ಪೇ ನಂಬರ್ ಚಾಲ್ತಿಯಲ್ಲಿದ್ದು, ಫೋನ್ ಮಾಡಿದರೆ ರಿಂಗ್ ಆಗುತ್ತಿದೆ. ಫೋನ್ ಪೇ ಮಾಡಿದಾಗ ಬಾಬುಲಾಲ್ ಎಂದು ಆ ಹೆಸರನ್ನು ತೋರಿಸಿತ್ತು. ಅವರಲ್ಲಿ ಕೇಳಿದಾಗ, ಅದು ತನ್ನ ತಂದೆಯದೆಂದು ಸಂತೋಷ್ ಹೇಳಿದ್ದ ಎಂದು ಭರತ್ ಕುಮಾರ್ ತಿಳಿಸಿದ್ದಾರೆ.
Online fraud in the name of CRSF solider, puttur man cheated of 10 thousand rs.
25-03-26 09:32 pm
HK News Staffer
13 ವರ್ಷಗಳ ಜೀವನ್ಮರಣ ಹೋರಾಟಕ್ಕೆ ಕೊನೆ ; ನಿಷ್ಕ್ರಿಯ...
25-03-26 03:25 pm
ಹಿಂದು, ಸಿಖ್, ಬೌದ್ಧರಲ್ಲಿ ಮಾತ್ರ ಪರಿಶಿಷ್ಟ ಮೀಸಲು,...
24-03-26 02:55 pm
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
25-03-26 06:15 pm
HK News Staffer
ಟ್ರಂಪ್ ಯುದ್ಧ ವಿರಾಮ ನಡುವೆಯೂ ಇಸ್ರೇಲ್ ದಾಳಿ ಮುಂದು...
24-03-26 04:43 pm
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
25-03-26 08:44 pm
HK News Staffer
ಭಾರತೀಯ ನೌಕಾಪಡೆ ರಕ್ಷಣೆ, ಆತಂಕದಿಂದ ಪಾರಾಗಿದ್ದೇವೆ...
25-03-26 05:23 pm
ಟೋಲ್ ಪ್ಲಾಜಾಗಳ ಮೇಲ್ಛಾವಣಿಯಲ್ಲಿ ಸೌರ ವಿದ್ಯುತ್ ಘಟಕ...
25-03-26 03:49 pm
ಗುಡ್ಡದಲ್ಲಿ ಹೊಳೆ ಬರುತ್ತಾ? ನಿವೇಶನ ರಹಿತರ ಜಮೀನು ಹ...
25-03-26 12:15 pm
ಹಣಕಾಸು ಮಸೂದೆ ಮೇಲಿನ ಚರ್ಚೆ ; ರಾಷ್ಟ್ರೀಯ ಭದ್ರತೆ,...
24-03-26 09:29 pm
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm