ಬ್ರೇಕಿಂಗ್ ನ್ಯೂಸ್
05-09-24 02:55 pm Mangalore Correspondent ಕ್ರೈಂ
ಪುತ್ತೂರು, ಸೆ.5: ತನ್ನನ್ನು ಸಿಆರ್ ಪಿಎಫ್ ಯೋಧನೆಂದು ಫೇಸ್ಬುಕ್ ನಲ್ಲಿ ಪರಿಚಯಿಸಿಕೊಂಡ ವ್ಯಕ್ತಿಯೊಬ್ಬ, ತನಗೆ ಕಾಶ್ಮೀರಕ್ಕೆ ವರ್ಗಾವಣೆಯಾಗಿದೆ, ಫರ್ನಿಚರ್ ಗಳನ್ನು ಮಾರಾಟ ಮಾಡುತ್ತೇನೆಂದು ಹೇಳಿ ಅಡ್ವಾನ್ಸ್ ಹಣ ಪಡೆದು ಪುತ್ತೂರಿನ ವ್ಯಕ್ತಿಗೆ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ.
ಪುತ್ತೂರು ತಾಲೂಕು ಪಂಚಾಯಿತಿ ನರೇಗಾ ಸಂಯೋಜಕ ಭರತ್ ಕುಮಾರ್ ಹಣ ಕಳಕೊಂಡವರು. ಇವರಿಗೆ ಫೇಸ್ಬುಕ್ ಮೆಸೆಂಜರ್ ನಲ್ಲಿ ಗೆಳೆಯ ರಾಧಾಕೃಷ್ಣ ಹೆಸರಿನಲ್ಲಿ ಮೆಸೇಜ್ ಬಂದಿತ್ತು. ನನ್ನ ಗೆಳೆಯ ಸಂತೋಷ್ ಸಿಆರ್ ಪಿಎಫ್ ಯೋಧನಾಗಿದ್ದು, ಕಾಶ್ಮೀರಕ್ಕೆ ವರ್ಗಾವಣೆಯಾಗುತ್ತಿದ್ದಾನೆ. ಆತನ ಮನೆಯಲ್ಲಿರುವ ಪೀಠೋಪಕರಣ, ಇಲೆಕ್ಟ್ರಾನಿಕ್ ವಸ್ತುಗಳನ್ನು ಕಡಿಮೆ ದರದಲ್ಲಿ ಮಾರಾಟ ಮಾಡುತ್ತಿದ್ದಾನೆ ಎಂದು ಸಂದೇಶ ಬಂದಿತ್ತು.
ಬಳಿಕ ಸಂತೋಷ್ ಎಂದು ಹೇಳಿಕೊಂಡ ವ್ಯಕ್ತಿಯೊಬ್ಬ ಭರತ್ ಗೆ ಕರೆ ಮಾಡಿದ್ದು ಮನೆ ಸಾಮಗ್ರಿಗಳನ್ನು ಕಳಿಸಿಕೊಡುವುದಾಗಿ ಹೇಳಿ ಫೋಟೋ ಕಳಿಸಿದ್ದಾನೆ. ಸಾಮಗ್ರಿಗೆ 95 ಸಾವಿರ ರೂ. ಎಂದು ಹೇಳಿದ ಆ ವ್ಯಕ್ತಿಯ ಜೊತೆಗೆ ಭರತ್ ಚೌಕಾಶಿ ಮಾಡಿದ್ದು, ಹತ್ತು ಸಾವಿರ ರೂ. ಅಡ್ವಾನ್ಸ್ ಮಾಡಿದ್ದಾರೆ. ಬಳಿಕ ಬೆಂಗಳೂರಿನಿಂದ ಸಿಆರ್ ಪಿಎಫ್ ಲಾರಿಯಲ್ಲಿ ಸಾಮಗ್ರಿ ಕಳಿಸಿಕೊಡುತ್ತಿದ್ದೇನೆ, ಕೂಡಲೇ ಉಳಿಕೆ ಹಣ ಕಳಿಸುವಂತೆ ವ್ಯಕ್ತಿ ಒತ್ತಡ ಹೇರಿದ್ದ. ಈ ಹಂತದಲ್ಲಿ ಸಂಶಯಕ್ಕೀಡಾದ ಭರತ್, ಫೇಸ್ಬುಕ್ ಗೆಳೆಯ ರಾಧಾಕೃಷ್ಣ ಅವರಿಗೆ ಕರೆ ಮಾಡಿದಾಗ, ತಾನೇನೂ ಮೆಸೇಜ್ ಹಾಕಿಲ್ಲ ಎಂದುತ್ತರ ಬಂದಿದೆ. ಇದರಿಂದ ಮೋಸ ಹೋಗಿದ್ದು ಅರಿವಾಗುತ್ತಲೇ ಭರತ್ ಪೊಲೀಸರಿಗೆ ದೂರು ನೀಡಿದ್ದಾರೆ.
ಮೆಸೇಜ್ ಕಳಿಸಿದ್ದ ಫೇಸ್ಬುಕ್ ಖಾತೆ ಬ್ಲಾಕ್ ಆಗಿದೆ. ಹಣ ಕಳಿಸಿದ್ದ ಫೋನ್ ಪೇ ನಂಬರ್ ಚಾಲ್ತಿಯಲ್ಲಿದ್ದು, ಫೋನ್ ಮಾಡಿದರೆ ರಿಂಗ್ ಆಗುತ್ತಿದೆ. ಫೋನ್ ಪೇ ಮಾಡಿದಾಗ ಬಾಬುಲಾಲ್ ಎಂದು ಆ ಹೆಸರನ್ನು ತೋರಿಸಿತ್ತು. ಅವರಲ್ಲಿ ಕೇಳಿದಾಗ, ಅದು ತನ್ನ ತಂದೆಯದೆಂದು ಸಂತೋಷ್ ಹೇಳಿದ್ದ ಎಂದು ಭರತ್ ಕುಮಾರ್ ತಿಳಿಸಿದ್ದಾರೆ.
Online fraud in the name of CRSF solider, puttur man cheated of 10 thousand rs.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
15-08-26 02:06 pm
HK News Staffer
Belthangady Couple Suicide, Bangalore: ಬೆಂಗಳೂ...
15-08-26 01:28 pm
ಕೋಟೆಕಾರಿನಲ್ಲಿ ಕಟ್ಟಡದಿಂದ ಬಿದ್ದು ಗಾಯಗೊಂಡ ವಲಸೆ ಕ...
14-08-26 09:09 pm
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am