ಬ್ರೇಕಿಂಗ್ ನ್ಯೂಸ್
05-09-24 02:55 pm Mangalore Correspondent ಕ್ರೈಂ
ಪುತ್ತೂರು, ಸೆ.5: ತನ್ನನ್ನು ಸಿಆರ್ ಪಿಎಫ್ ಯೋಧನೆಂದು ಫೇಸ್ಬುಕ್ ನಲ್ಲಿ ಪರಿಚಯಿಸಿಕೊಂಡ ವ್ಯಕ್ತಿಯೊಬ್ಬ, ತನಗೆ ಕಾಶ್ಮೀರಕ್ಕೆ ವರ್ಗಾವಣೆಯಾಗಿದೆ, ಫರ್ನಿಚರ್ ಗಳನ್ನು ಮಾರಾಟ ಮಾಡುತ್ತೇನೆಂದು ಹೇಳಿ ಅಡ್ವಾನ್ಸ್ ಹಣ ಪಡೆದು ಪುತ್ತೂರಿನ ವ್ಯಕ್ತಿಗೆ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ.
ಪುತ್ತೂರು ತಾಲೂಕು ಪಂಚಾಯಿತಿ ನರೇಗಾ ಸಂಯೋಜಕ ಭರತ್ ಕುಮಾರ್ ಹಣ ಕಳಕೊಂಡವರು. ಇವರಿಗೆ ಫೇಸ್ಬುಕ್ ಮೆಸೆಂಜರ್ ನಲ್ಲಿ ಗೆಳೆಯ ರಾಧಾಕೃಷ್ಣ ಹೆಸರಿನಲ್ಲಿ ಮೆಸೇಜ್ ಬಂದಿತ್ತು. ನನ್ನ ಗೆಳೆಯ ಸಂತೋಷ್ ಸಿಆರ್ ಪಿಎಫ್ ಯೋಧನಾಗಿದ್ದು, ಕಾಶ್ಮೀರಕ್ಕೆ ವರ್ಗಾವಣೆಯಾಗುತ್ತಿದ್ದಾನೆ. ಆತನ ಮನೆಯಲ್ಲಿರುವ ಪೀಠೋಪಕರಣ, ಇಲೆಕ್ಟ್ರಾನಿಕ್ ವಸ್ತುಗಳನ್ನು ಕಡಿಮೆ ದರದಲ್ಲಿ ಮಾರಾಟ ಮಾಡುತ್ತಿದ್ದಾನೆ ಎಂದು ಸಂದೇಶ ಬಂದಿತ್ತು.
ಬಳಿಕ ಸಂತೋಷ್ ಎಂದು ಹೇಳಿಕೊಂಡ ವ್ಯಕ್ತಿಯೊಬ್ಬ ಭರತ್ ಗೆ ಕರೆ ಮಾಡಿದ್ದು ಮನೆ ಸಾಮಗ್ರಿಗಳನ್ನು ಕಳಿಸಿಕೊಡುವುದಾಗಿ ಹೇಳಿ ಫೋಟೋ ಕಳಿಸಿದ್ದಾನೆ. ಸಾಮಗ್ರಿಗೆ 95 ಸಾವಿರ ರೂ. ಎಂದು ಹೇಳಿದ ಆ ವ್ಯಕ್ತಿಯ ಜೊತೆಗೆ ಭರತ್ ಚೌಕಾಶಿ ಮಾಡಿದ್ದು, ಹತ್ತು ಸಾವಿರ ರೂ. ಅಡ್ವಾನ್ಸ್ ಮಾಡಿದ್ದಾರೆ. ಬಳಿಕ ಬೆಂಗಳೂರಿನಿಂದ ಸಿಆರ್ ಪಿಎಫ್ ಲಾರಿಯಲ್ಲಿ ಸಾಮಗ್ರಿ ಕಳಿಸಿಕೊಡುತ್ತಿದ್ದೇನೆ, ಕೂಡಲೇ ಉಳಿಕೆ ಹಣ ಕಳಿಸುವಂತೆ ವ್ಯಕ್ತಿ ಒತ್ತಡ ಹೇರಿದ್ದ. ಈ ಹಂತದಲ್ಲಿ ಸಂಶಯಕ್ಕೀಡಾದ ಭರತ್, ಫೇಸ್ಬುಕ್ ಗೆಳೆಯ ರಾಧಾಕೃಷ್ಣ ಅವರಿಗೆ ಕರೆ ಮಾಡಿದಾಗ, ತಾನೇನೂ ಮೆಸೇಜ್ ಹಾಕಿಲ್ಲ ಎಂದುತ್ತರ ಬಂದಿದೆ. ಇದರಿಂದ ಮೋಸ ಹೋಗಿದ್ದು ಅರಿವಾಗುತ್ತಲೇ ಭರತ್ ಪೊಲೀಸರಿಗೆ ದೂರು ನೀಡಿದ್ದಾರೆ.
ಮೆಸೇಜ್ ಕಳಿಸಿದ್ದ ಫೇಸ್ಬುಕ್ ಖಾತೆ ಬ್ಲಾಕ್ ಆಗಿದೆ. ಹಣ ಕಳಿಸಿದ್ದ ಫೋನ್ ಪೇ ನಂಬರ್ ಚಾಲ್ತಿಯಲ್ಲಿದ್ದು, ಫೋನ್ ಮಾಡಿದರೆ ರಿಂಗ್ ಆಗುತ್ತಿದೆ. ಫೋನ್ ಪೇ ಮಾಡಿದಾಗ ಬಾಬುಲಾಲ್ ಎಂದು ಆ ಹೆಸರನ್ನು ತೋರಿಸಿತ್ತು. ಅವರಲ್ಲಿ ಕೇಳಿದಾಗ, ಅದು ತನ್ನ ತಂದೆಯದೆಂದು ಸಂತೋಷ್ ಹೇಳಿದ್ದ ಎಂದು ಭರತ್ ಕುಮಾರ್ ತಿಳಿಸಿದ್ದಾರೆ.
Online fraud in the name of CRSF solider, puttur man cheated of 10 thousand rs.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm