ಬ್ರೇಕಿಂಗ್ ನ್ಯೂಸ್
07-09-24 03:06 pm HK News Desk ಕ್ರೈಂ
ಹೈದರಾಬಾದ್, ಸೆ.7: ಅಪರಿಚಿತರೊಂದಿಗೆ ಸ್ನೇಹ ಬೆಳೆಸಿಕೊಂಡು ಅವರಿಗೆ ಸೈನೈಡ್ ಬೆರೆಸಿದ ಪಾನೀಯ ಕೊಟ್ಟು ನೆಲಕ್ಕೆ ಉರುಳುತ್ತಲೇ ಅವರ ಬಳಿಯಿರುವ ಚಿನ್ನ, ನಗದು, ಇನ್ನಿತರ ವಸ್ತುಗಳನ್ನು ದೋಚುತ್ತಿದ್ದ ಮೂವರು ಕಂತ್ರಿ ಮಹಿಳೆಯರನ್ನು ಆಂಧ್ರಪ್ರದೇಶದಲ್ಲಿ ಬಂಧಿಸಲಾಗಿದೆ.
ತೆನಾಲಿ ಮೂಲದ "ಸರಣಿ ಹಂತಕಿಯರು" ಮೂವರು ಮಹಿಳೆಯರು ಸೇರಿದಂತೆ ನಾಲ್ವರನ್ನು ಹತ್ಯೆ ಮಾಡಿದ್ದಾರೆ ಎಂದು ಆಂಧ್ರ ಪೊಲೀಸರು ತಿಳಿಸಿದ್ದಾರೆ. ಸೀರಿಯಲ್ ಕೊಲೆಗಳಿಗೆ ಸಂಬಂಧಿಸಿದಂತೆ ಮುನಗಪ್ಪ ರಜಿನಿ, ಮಡಿಯಾಲ ವೆಂಕಟೇಶ್ವರಿ ಮತ್ತು ಗುಲ್ರ ರಮಣಮ್ಮ ಎಂಬವರನ್ನು ಆಂಧ್ರಪ್ರದೇಶ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಇವರು ಸೈನೈಡ್ ಮಿಶ್ರಿತ ಪಾನೀಯಗಳನ್ನು ಸೇವಿಸಿದ ನಂತರ ಸಾಯುತ್ತಿದ್ದರು. ಬಳಿಕ ಹಂತಕಿಯರು ಅವರ ಬೆಲೆಬಾಳುವ ವಸ್ತುಗಳನ್ನು ಕದಿಯುತ್ತಿದ್ದರು. ಇದೇ ಜೂನ್ನಲ್ಲಿ ನಾಗೂರ್ ಎಂಬ ಮಹಿಳೆಯನ್ನು ಹತ್ಯೆಗೈಯಲಾಗಿತ್ತು. ಈ ಘಟನೆ ಬಳಿಕ ಅವರು ಇನ್ನೂ ಇಬ್ಬರನ್ನು ಕೊಲ್ಲಲು ಪ್ರಯತ್ನಿಸಿದ್ದರು. ಆದರೆ ಅದೃಷ್ಟವಶಾತ್ ಅವರು ಬದುಕುಳಿದಿದ್ದರು.
ಮೂವರು ಹಂತಕಿಯರ ಬಳಿಯಿಂದ ಸೈನೈಡ್ ಹಾಗೂ ಸಾಕ್ಷಿಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಅವರಿಗೆ ಸೈನೈಡ್ ಪೂರೈಕೆ ಮಾಡುತ್ತಿದ್ದ ಎನ್ನಲಾದ ವ್ಯಕ್ತಿಯನ್ನು ಕೂಡ ಪೊಲೀಸರು ಬಂಧಿಸಿದ್ದಾರೆ. ಮೂವರೂ ಮಹಿಳೆಯರು ತಮ್ಮ ಅಪರಾಧಗಳನ್ನು ಒಪ್ಪಿಕೊಂಡಿದ್ದಾರೆ ಎಂದು ತೆನಾಲಿ ಪೊಲೀಸ್ ವರಿಷ್ಠಾಧಿಕಾರಿ ಸತೀಶ್ ಕುಮಾರ್ ತಿಳಿಸಿದ್ದಾರೆ.
ತೆನಾಲಿಯ ಈ ಕೃತ್ಯ ಕೇರಳದ ಜಾಲಿ ಜೋಸೆಫ್ ಎಂಬ ಸರಣಿ ಹಂತಕಿಯ ಕೃತ್ಯಗಳನ್ನು ನೆನಪಿಸಿದೆ. ಈಕೆ 14 ವರ್ಷಗಳಲ್ಲಿ ಆರು ಮಂದಿಯನ್ನು ಸೈನೈಡ್ ನೀಡಿ ಕೊಂದಿದ್ದಳು. ಭಾರತದ ಮೊದಲ ಮಹಿಳಾ ಸರಣಿ ಹಂತಕಿ ಎಂಬ ಕುಖ್ಯಾತಿ ಕರ್ನಾಟಕದ ಸೈನೈಡ್ ಮಲ್ಲಿಕಾ ಅಲಿಯಾಸ್ ಕೆಂಪಮ್ಮ ಹೆಸರಲ್ಲಿದೆ. 2007ರಲ್ಲಿ ಬೆಂಗಳೂರಿನ ಹೊರವಲಯದಲ್ಲಿ ನಿಗೂಢ ರೀತಿಯಲ್ಲಿ ಅನೇಕ ಮಹಿಳೆಯರು ಹತ್ಯೆಯಾಗಿದ್ದರು. ಆರು ಮಂದಿಯನ್ನು ಈಕೆ ಸೈನೇಡ್ ಮಿಶ್ರಿತ ಆಹಾರ ತಿನ್ನಿಸಿ ಕೊಂದಿದ್ದಳು ಎಂಬುದು ತನಿಖೆಯಲ್ಲಿ ಬಯಲಾಗಿತ್ತು.
They befriended strangers and offered them drinks which were mixed with cyanide to steal gold, cash and other valuables in Andhra Pradesh's Tenali district. Three women, the "serial killers" of Tenali, as claimed by the police, have murdered four people including three women.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm