ಬ್ರೇಕಿಂಗ್ ನ್ಯೂಸ್
07-09-24 05:45 pm HK News Desk ಕ್ರೈಂ
ಬೆಂಗಳೂರು, ಸೆ.7: ನಿತ್ಯ ಅಶ್ಲೀಲ ವೀಡಿಯೋ ತೋರಿಸಿ ಕಿರುಕುಳ ನೀಡುತ್ತಿದ್ದ ಗಂಡನ ನಡೆಗೆ ಬೇಸತ್ತ ಮಹಿಳೆಯೊಬ್ಬರು ಪೆಟ್ರೋಲ್ ಸುರಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಹುಳಿಮಾವು ಅಕ್ಷಯನಗರದಲ್ಲಿ ನಡೆದಿದೆ.
ಅನುಷಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಈಕೆಯ ಪತಿ ಶ್ರೀಹರಿ ಮೊಬೈಲ್ನಲ್ಲಿ ಅಶ್ಲೀಲ ವೀಡಿಯೋ ತೋರಿಸಿ ಹೀಗೆ ಸಹಕರಿಸು ಎಂದು ಟಾರ್ಚರ್ ಕೊಡುತ್ತಿದ್ದ. ಅಲ್ಲದೇ ಆಕೆಯ ಮುಂದೆಯೇ ಇನ್ನೊಂದು ಹುಡುಗಿಯ ಜೊತೆ ಸಲುಗೆ ಬೆಳೆಸಿದ್ದು, ಇದನ್ನು ಪ್ರಶ್ನಿಸಿದ್ದಕ್ಕೆ ಹೆಂಡತಿಗೆ ಕಿರುಕುಳ ನೀಡಲು ಆರಂಭಿಸಿದ್ದಾನೆ. ಎರಡು ತಿಂಗಳಿಂದ ಡೈವರ್ಸ್ ಕೊಡುವಂತೆ ಪೀಡಿಸುತ್ತಿದ್ದ. ಇದರಿಂದ ಬೇಸತ್ತು ಅನುಷಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶ್ರೀಹರಿ ಹಾಗೂ ಅನುಷಾಗೆ ಮದುವೆಯಾಗಿ 5 ವರ್ಷ ಆಗಿತ್ತು. ಒಂದು ಮಗು ಕೂಡ ಇತ್ತು. ಇದರ ನಡುವೆ, ಪತಿ ಶ್ರೀಹರಿ ಬೇರೆ ಹುಡುಗಿಯರ ಜೊತೆ ಸಹವಾಸ ಮಾಡಿದ್ದ. ಮನೆಯ ವಾಶ್ ರೂಂನಿಂದ ಗಂಡನಿಗೆ ವೀಡಿಯೋ ಕಾಲ್ ಮಾಡಿ ಪೆಟ್ರೋಲ್ ಸುರಿದುಕೊಳ್ಳುತ್ತೇನೆ ಎಂದು ಹೆಂಡತಿ ಹೇಳಿದ್ದಾಳೆ. ಈ ವೇಳೆ ರಕ್ಷಣೆ ಮಾಡದೇ ನಿರ್ಲಕ್ಷ್ಯ ಮಾಡಿರುವುದಾಗಿ ಮೃತ ಅನುಷಾ ಕುಟುಂಬಸ್ಥರು ಆರೋಪಿಸಿದ್ದಾರೆ.
ಎರಡು ದಿನಗಳ ಹಿಂದೆಯೇ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅನುಶಾರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೆ ಆಕೆ ಸಾವು ಕಂಡಿದ್ದಾರೆ.
ನಡತೆ ಸರಿಯಿಲ್ಲ ಎಂದು ಹೇಳಿ ಆತನನ್ನು ಕೆಲಸದಿಂದ ತೆಗೆದು ಹಾಕಿದ್ದರು. ಕಚೇರಿಯಲ್ಲಿ ಟೀಮ್ ಲೀಡರ್ ಆಗಿದ್ದ. ಅದಾದಮೇಲೆ ಹೆಂಡ್ತಿ ಮೇಲೆ ಟಾರ್ಚರ್ ಮತ್ತೂ ಜಾಸ್ತಿ ಮಾಡಿದ್ದ. ಸಾಯೋದಿನ ಪಕ್ಕದಲ್ಲೇ ಇದ್ದ. ಆಕೆ ಸಾಯ್ತಿದಾಳೆ ಅಂತಾ ಗೊತ್ತಿದ್ರೂ ನಮಗೆ ಹೇಳಲಿಲ್ಲ. ಎಲ್ಲರೂ ಒಂದೇ ಮನೆಯಲ್ಲೇ ಇದ್ದೆವು. ಮಾಸ್ಟರ್ ಬೆಡ್ ರೂಮ್ ನಲ್ಲಿ ಅವರು ಇದ್ದರು. ಅವ್ಳು ಸಾಯ್ಲಿ ಅಂತಾ ಸಾಯೋ ಟೈಮಲ್ಲಿ ಬಂದು ನಮಗೆ ಹೇಳ್ದ. ಹತ್ತು ನಿಮಿಷ ಮುಂಚೆ ಹೇಳಿದ್ರೆ ನಾವು ಡೋರ್ ಒಡೆದು ಮಗಳನ್ನ ಬದುಕಿಸಿಕೊಳ್ತಿದ್ವಿ. 2 ವರ್ಷದ ಮಗು ಅನಾಥವಾಗಿದೆ. ಅಮ್ಮ ಎಲ್ಲಿ ಅಂತಾ ಕೇಳುತ್ತೆ. ನಿಮ್ಮಮ್ಮ ಬರಲ್ಲ ಅಂತಾ ಹೇಗೆ ಹೇಳೋದು. ನನ್ನ ಮಗಳ ಜೀವನ ಹಾಳ್ಮಾಡಿಬಿಟ್ಟ ಎಂದು ಯುವತಿ ತಾಯಿ ರೇಣುಕಾ ಕಣ್ಣೀರಿಟ್ಟಿದ್ದಾರೆ.
Wife commits suicide over husbands sex torture in Bangalore. The deceased has been identified as Anusha. Husband was showing her sex videos and forcing her to have such sex.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm