ಬ್ರೇಕಿಂಗ್ ನ್ಯೂಸ್
07-09-24 05:45 pm HK News Desk ಕ್ರೈಂ
ಬೆಂಗಳೂರು, ಸೆ.7: ನಿತ್ಯ ಅಶ್ಲೀಲ ವೀಡಿಯೋ ತೋರಿಸಿ ಕಿರುಕುಳ ನೀಡುತ್ತಿದ್ದ ಗಂಡನ ನಡೆಗೆ ಬೇಸತ್ತ ಮಹಿಳೆಯೊಬ್ಬರು ಪೆಟ್ರೋಲ್ ಸುರಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಹುಳಿಮಾವು ಅಕ್ಷಯನಗರದಲ್ಲಿ ನಡೆದಿದೆ.
ಅನುಷಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಈಕೆಯ ಪತಿ ಶ್ರೀಹರಿ ಮೊಬೈಲ್ನಲ್ಲಿ ಅಶ್ಲೀಲ ವೀಡಿಯೋ ತೋರಿಸಿ ಹೀಗೆ ಸಹಕರಿಸು ಎಂದು ಟಾರ್ಚರ್ ಕೊಡುತ್ತಿದ್ದ. ಅಲ್ಲದೇ ಆಕೆಯ ಮುಂದೆಯೇ ಇನ್ನೊಂದು ಹುಡುಗಿಯ ಜೊತೆ ಸಲುಗೆ ಬೆಳೆಸಿದ್ದು, ಇದನ್ನು ಪ್ರಶ್ನಿಸಿದ್ದಕ್ಕೆ ಹೆಂಡತಿಗೆ ಕಿರುಕುಳ ನೀಡಲು ಆರಂಭಿಸಿದ್ದಾನೆ. ಎರಡು ತಿಂಗಳಿಂದ ಡೈವರ್ಸ್ ಕೊಡುವಂತೆ ಪೀಡಿಸುತ್ತಿದ್ದ. ಇದರಿಂದ ಬೇಸತ್ತು ಅನುಷಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶ್ರೀಹರಿ ಹಾಗೂ ಅನುಷಾಗೆ ಮದುವೆಯಾಗಿ 5 ವರ್ಷ ಆಗಿತ್ತು. ಒಂದು ಮಗು ಕೂಡ ಇತ್ತು. ಇದರ ನಡುವೆ, ಪತಿ ಶ್ರೀಹರಿ ಬೇರೆ ಹುಡುಗಿಯರ ಜೊತೆ ಸಹವಾಸ ಮಾಡಿದ್ದ. ಮನೆಯ ವಾಶ್ ರೂಂನಿಂದ ಗಂಡನಿಗೆ ವೀಡಿಯೋ ಕಾಲ್ ಮಾಡಿ ಪೆಟ್ರೋಲ್ ಸುರಿದುಕೊಳ್ಳುತ್ತೇನೆ ಎಂದು ಹೆಂಡತಿ ಹೇಳಿದ್ದಾಳೆ. ಈ ವೇಳೆ ರಕ್ಷಣೆ ಮಾಡದೇ ನಿರ್ಲಕ್ಷ್ಯ ಮಾಡಿರುವುದಾಗಿ ಮೃತ ಅನುಷಾ ಕುಟುಂಬಸ್ಥರು ಆರೋಪಿಸಿದ್ದಾರೆ.
ಎರಡು ದಿನಗಳ ಹಿಂದೆಯೇ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅನುಶಾರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೆ ಆಕೆ ಸಾವು ಕಂಡಿದ್ದಾರೆ.
ನಡತೆ ಸರಿಯಿಲ್ಲ ಎಂದು ಹೇಳಿ ಆತನನ್ನು ಕೆಲಸದಿಂದ ತೆಗೆದು ಹಾಕಿದ್ದರು. ಕಚೇರಿಯಲ್ಲಿ ಟೀಮ್ ಲೀಡರ್ ಆಗಿದ್ದ. ಅದಾದಮೇಲೆ ಹೆಂಡ್ತಿ ಮೇಲೆ ಟಾರ್ಚರ್ ಮತ್ತೂ ಜಾಸ್ತಿ ಮಾಡಿದ್ದ. ಸಾಯೋದಿನ ಪಕ್ಕದಲ್ಲೇ ಇದ್ದ. ಆಕೆ ಸಾಯ್ತಿದಾಳೆ ಅಂತಾ ಗೊತ್ತಿದ್ರೂ ನಮಗೆ ಹೇಳಲಿಲ್ಲ. ಎಲ್ಲರೂ ಒಂದೇ ಮನೆಯಲ್ಲೇ ಇದ್ದೆವು. ಮಾಸ್ಟರ್ ಬೆಡ್ ರೂಮ್ ನಲ್ಲಿ ಅವರು ಇದ್ದರು. ಅವ್ಳು ಸಾಯ್ಲಿ ಅಂತಾ ಸಾಯೋ ಟೈಮಲ್ಲಿ ಬಂದು ನಮಗೆ ಹೇಳ್ದ. ಹತ್ತು ನಿಮಿಷ ಮುಂಚೆ ಹೇಳಿದ್ರೆ ನಾವು ಡೋರ್ ಒಡೆದು ಮಗಳನ್ನ ಬದುಕಿಸಿಕೊಳ್ತಿದ್ವಿ. 2 ವರ್ಷದ ಮಗು ಅನಾಥವಾಗಿದೆ. ಅಮ್ಮ ಎಲ್ಲಿ ಅಂತಾ ಕೇಳುತ್ತೆ. ನಿಮ್ಮಮ್ಮ ಬರಲ್ಲ ಅಂತಾ ಹೇಗೆ ಹೇಳೋದು. ನನ್ನ ಮಗಳ ಜೀವನ ಹಾಳ್ಮಾಡಿಬಿಟ್ಟ ಎಂದು ಯುವತಿ ತಾಯಿ ರೇಣುಕಾ ಕಣ್ಣೀರಿಟ್ಟಿದ್ದಾರೆ.
Wife commits suicide over husbands sex torture in Bangalore. The deceased has been identified as Anusha. Husband was showing her sex videos and forcing her to have such sex.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
15-08-26 02:06 pm
HK News Staffer
Belthangady Couple Suicide, Bangalore: ಬೆಂಗಳೂ...
15-08-26 01:28 pm
ಕೋಟೆಕಾರಿನಲ್ಲಿ ಕಟ್ಟಡದಿಂದ ಬಿದ್ದು ಗಾಯಗೊಂಡ ವಲಸೆ ಕ...
14-08-26 09:09 pm
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am