ಬ್ರೇಕಿಂಗ್ ನ್ಯೂಸ್
10-12-20 10:38 am Headline Karnataka News Network ಕ್ರೈಂ
ನಾಗಪುರ, ಡಿ.9: ಭಾರತದ ಮುಖ್ಯ ನ್ಯಾಯಮೂರ್ತಿ ಶರದ್ ಅರವಿಂದ್ ಬೋಬ್ಡೆ ಅವರ ತಾಯಿಗೆ, 2.5 ಕೋಟಿ ರೂ. ಹಣವನ್ನು ವಂಚಿಸಿದ ಆರೋಪದಲ್ಲಿ ಅವರ ಕುಟುಂಬದ ಆಸ್ತಿಯ ಉಸ್ತುವಾರಿದಾರನೊಬ್ಬನನ್ನು ಬಂಧಿಸಲಾಗಿದೆಯೆಂದು ಪೊಲೀಸ್ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.
ಆರೋಪಿ ತಪಸ್ ಘೋಷ್ (49) ನನ್ನು ಮಂಗಳವಾರ ರಾತ್ರಿ ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಡಿಸಿಪಿ ವಿನಿತಾ ಸಾಹು ಮೇಲ್ವಿಚಾರಣೆಯಲ್ಲಿ ನಾಗಪುರ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
ಬೋಬ್ಡೆ ಅವರ ಕುಟುಂಬವು ಆಕಾಶವಾಣಿ ಚೌಕದ ಸಮೀಪದ ತಮ್ಮ ನಿವಾಸಕ್ಕೆ ತಾಗಿಕೊಂಡಿರುವ ಜಾಗದಲ್ಲಿ ಸೇಡನ್ ಲಾನ್ ಎಂಬ ಭವನವನ್ನು ಹೊಂದಿದ್ದು, ಅದನ್ನು ವಿವಿಧ ಕಾರ್ಯಕ್ರಮಗಳಿಗೆ ಬಾಡಿಗೆಗೆ ನೀಡಲಾಗುತ್ತಿತ್ತು.
ಸಿಜೆಐ ಅವರ ವಯೋವೃದ್ಧ ತಾಯಿ ಮುಕ್ತಾ ಬೋಬ್ಡೆ ಅವರು ಈ ಆಸ್ತಿಯ ಮಾಲಕಿಯಾಗಿದ್ದು, ಅವರ ಕುಟುಂಬವು ಸ್ಥಳೀಯ ಫ್ರೆಂಡ್ಸ್ ಕಾಲನಿಯ ನಿವಾಸಿ ತಪಸ್ ಘೋಷ್ ಎಂಬಾತನನ್ನು ಅದರ ಉಸ್ತುವಾರಿಗೆ ನೇಮಿಸಿತ್ತು. ಕಳೆದ 10 ವರ್ಷಗಳಿಂದ ಘೋಷ್ ಆ ಕಟ್ಟಡ ನಿವೇಶನದ ಆಡಳಿತ ನಿರ್ವಹಣೆ ಮಾಡುತ್ತಿದ್ದ ಮತ್ತು ಹಣಕಾಸು ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಮುಕ್ತಾ ಬೋಬ್ಡೆ ಅವರ ವೃದ್ಧಾಪ್ಯ ಹಾಗೂ ಅನಾರೋಗ್ಯವನ್ನು ದುರುಪಯೋಗಪಡಿಸಿಕೊಂಡ ಘೋಷ್, ಸೇಡನ್ ಲಾನ್ನ ಬಾಡಿಗೆ ಪಾವತಿಗಳ ರಸೀತಿಗಳನ್ನು ಫೋರ್ಜರಿ ಮಾಡಿ, 2.5 ಕೋಟಿ ರೂ. ವಂಚಿಸಿದ್ದಾನೆ ಎಂದು ಆರೋಪಿಸಲಾಗಿದೆ.
ವಂಚನೆ ಬೆಳಕಿಗೆ ಬಂದ ಬಳಿಕ ಪೊಲೀಸರು ಅರ್ಥಿಕ ಅಪರಾಧ ದಳದ ಸಿಬ್ಬಂದಿ ಒಳಗೊಂಡಿರುವ ವಿಶೇಷ ತನಿಖಾ ತಂಡ ರಚಿಸಿ ತನಿಖೆ ಆರಂಭಿಸಿದ್ದರು. ಪೊಲೀಸರು ಎಫ್ಐಆರ್ ದಾಖಲಿಸಿದ್ದು, ಆರೋಪಿ ಘೋಷ್ನನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.
Chief Justice of India Sharad Arvind Bobde's mother has allegedly been duped to the tune of Rs 2.5 crore by the caretaker of family property.
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm