ಬ್ರೇಕಿಂಗ್ ನ್ಯೂಸ್
13-09-24 03:51 pm HK News Desk ಕ್ರೈಂ
ಪಾಟ್ನಾ, ಸೆ.13: ಕೊಲ್ಕತ್ತಾ ರೇಪ್ ಪ್ರಕರಣದ ಕಾವು ಮಾಸುವ ಮುನ್ನವೇ ಬಿಹಾರದಲ್ಲಿ ಮತ್ತೊಂದು ಆಸ್ಪತ್ರೆಯಲ್ಲಿ ನರ್ಸ್ ಒಬ್ಬರನ್ನು ವೈದ್ಯರು ಮತ್ತು ಇತರ ಇಬ್ಬರು ಸಿಬಂದಿ ಸೇರಿ ಗ್ಯಾಂಗ್ ರೇಪ್ ಮಾಡಲು ಯತ್ನಿಸಿದ ಘಟನೆ ನಡೆದಿದೆ. ಘಟನೆ ಸಂದರ್ಭದಲ್ಲಿ ಪ್ರತಿರೋಧ ತೋರಿದ ನರ್ಸ್, ಅತ್ಯಾಚಾರಕ್ಕೆ ಬಂದ ವೈದ್ಯನ ಮರ್ಮಾಂಗವನ್ನೇ ಬ್ಲೇಡ್ ನಲ್ಲಿ ಕತ್ತರಿಸಿ ಕೃತ್ಯದಿಂದ ಪಾರಾಗಿದ್ದಾಳೆ.
ಬಿಹಾರದ ಸಮಸ್ತಿಪುರ್ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ವೈದ್ಯ ಸೇರಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಡಾ.ಸಂಜಯ್ ಕುಮಾರ್, ಅವಧೇಶ್ ಕುಮಾರ್ ಮತ್ತು ಸುನಿಲ್ ಕುಮಾರ್ ಗುಪ್ತಾ ಬಂಧಿತರು. ಆಸ್ಪತ್ರೆಯಲ್ಲಿ ರಾತ್ರಿ ಪಾಳಿಯ ಕೆಲಸ ಮುಗಿಸಿ ಮನೆಗೆ ಹಿಂತಿರುಗಲು ತಯಾರಿ ನಡೆಸುತ್ತಿದ್ದ ನರ್ಸ್ ಯುವತಿಯ ಅತ್ಯಾಚಾರಕ್ಕೆ ಡಾ.ಸಂಜಯ್ ಕುಮಾರ್ ಯತ್ನಿಸಿದ್ದಾನೆ. ಆತನಿಗೆ ಇನ್ನಿಬ್ಬರು ಸಿಬಂದಿಗಳಾದ ಅವಧೇಶ್ ಮತ್ತು ಸುನಿಲ್ ಕುಮಾರ್ ಸಹಕರಿಸಿದ್ದಾರೆ. ಮೂವರೊಳಗೆ ಜಟಾಪಟಿ ನಡೆಯುತ್ತಿದ್ದಾಗಲೇ ನರ್ಸ್ ಕೈಗೆ ಸಿಕ್ಕ ಬ್ಲೇಡ್ ನಿಂದ ಸಂಜಯ್ ಕುಮಾರ್ ಶಿಶ್ನವನ್ನು ಕತ್ತರಿಸಿದ್ದಾಳೆ. ಆನಂತರ, ಅವರ ಕೈಯಿಂದ ಪಾರಾಗಿ ಬಂದು ಪೊಲೀಸರಿಗೆ ಫೋನ್ ಮಾಡಿದ್ದಾಳೆ. ಕೂಡಲೇ ಪೊಲೀಸರು ಬಂದು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.
ಆರೋಪಿಗಳು ಕುಡಿದ ಮತ್ತಿನಲ್ಲಿ ಕೃತ್ಯಕ್ಕೆ ಯತ್ನಿಸಿದ್ದಾರೆ. ಆದರೆ ಅದಕ್ಕೂ ಮುನ್ನ ಆಸ್ಪತ್ರೆ ಒಳಗಿನ ಸಿಸಿಟಿವಿ ಸಂಪರ್ಕವನ್ನು ಕಟ್ ಮಾಡಿದ್ದು, ಒಳಗಿನಿಂದ ಬಾಗಿಲು ಹಾಕಿಕೊಂಡಿದ್ದರು. ಆದರೆ, ನರ್ಸ್ ಪ್ರತಿರೋಧ ತೋರುತ್ತಲೇ ಧೈರ್ಯದಿಂದ ಪರಿಸ್ಥಿತಿಯನ್ನು ಎದುರಿಸಿದ್ದು ಕೃತ್ಯದಿಂದ ಪಾರಾಗುವಂತಾಗಿದೆ. ಸ್ಥಳದಿಂದ ಮರ್ಮಾಂಗ ಕತ್ತರಿಸಿದ ಬ್ಲೇಡ್, ಒಂದು ಮದ್ಯದ ಬಾಟಲಿ, ರಕ್ತಸಿಕ್ತ ಬಟ್ಟೆಗಳು ಮತ್ತು ಮೂರು ಮೊಬೈಲ್ ಫೋನ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಒಂದು ತಿಂಗಳ ಹಿಂದಷ್ಟೇ ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ವೈದ್ಯ ವಿದ್ಯಾರ್ಥಿನಿಯನ್ನು ಅತ್ಯಾಚಾರಗೈದು ಕೊಲೆ ಮಾಡಲಾಗಿತ್ತು. ಆಸ್ಪತ್ರೆ ಸಿಬಂದಿಯೇ ಕೃತ್ಯ ನಡೆಸಿದ್ದು, ಆನಂತರ ಘಟನೆಯನ್ನು ಖಂಡಿಸಿ ದೇಶಾದ್ಯಂತ ಪ್ರತಿಭಟನೆ ನಡೆಸಲಾಗಿತ್ತು.
A gang-rape attempt was made on a nurse at a private hospital in Bihar, said the police on Thursday, adding that she escaped the crime scene after inflicting a cut on the private parts of an assaulter with a blade. It comes one month after a trainee doctor was raped and murdered at RG Kar Medical College and Hospital in Kolkata, triggering nationwide protest and indefinite strike of junior doctors in West Bengal.
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
19-08-25 06:59 pm
HK News Desk
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
19-08-25 11:07 pm
Mangalore Correspondent
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm