ಬ್ರೇಕಿಂಗ್ ನ್ಯೂಸ್
13-09-24 09:08 pm Mangalore Correspondent ಕ್ರೈಂ
ಬಂಟ್ವಾಳ, ಸೆ.13: ನಿವೃತ್ತ ಸೈನಿಕರೊಬ್ಬರು ಕಾರ್ಯ ನಿಮಿತ್ತ ಬ್ಯಾಂಕಿನಿಂದ ಹಣ ಡ್ರಾ ಮಾಡಿ ನಗದು ಇದ್ದ ಬ್ಯಾಗನ್ನು ಇರಿಸಿ ಪಾಸ್ ಬುಕ್ ಎಂಟ್ರಿ ಮಾಡುತ್ತಿದ್ದಾಗಲೇ 1.30 ಲಕ್ಷ ರೂ. ಇದ್ದ ಬ್ಯಾಗನ್ನು ಕಳ್ಳರು ಎಗರಿಸಿದ ಘಟನೆ ಬಂಟ್ವಾಳದಲ್ಲಿ ನಡೆದಿದೆ.
ಈ ಬಗ್ಗೆ ಹಣ ಕಳಕೊಂಡ ಅಡ್ಯಾರ್ ನಿವಾಸಿ ಅಂಬ್ರೋಸ್ ಡಿ’ಸೋಜ( 72) ಬಂಟ್ವಾಳ ನಗರ ಠಾಣೆಗೆ ದೂರು ನೀಡಿದ್ದಾರೆ. ಸೆ.4ರಂದು ಬೆಳಗ್ಗೆ 30,000 ನಗದು ಹಾಗೂ ರೂ. 20,000 ನಗದು ಹಣವಿದ್ದ ತನ್ನ ಪರ್ಸನ್ನು ಹ್ಯಾಂಡ್ ಬ್ಯಾಗ್ ನಲ್ಲಿರಿಸಿ ಮನೆಯಿಂದ ಹೊರಟಿದ್ದು, ಬಿ.ಸಿ ರೋಡ್ ನಲ್ಲಿ ಸದ್ರಿಯವರ ಖಾತೆಯಿರುವ ಬ್ಯಾಂಕ್ ಗೆ ತೆರಳಿ, ಬ್ಯಾಂಕ್ ನಿಂದ ರೂ. 80,000/- ಹಣವನ್ನು ಡ್ರಾ ಮಾಡಿದ್ದು, ಅದೇ ಹ್ಯಾಂಡ್ ಬ್ಯಾಗ್ ನಲ್ಲಿ ಇರಿಸಿದ್ದರು. ಬಳಿಕ ಸದ್ರಿ ಹ್ಯಾಂಡ್ ಬ್ಯಾಗ್ ಅನ್ನು ಬ್ಯಾಂಕಿನ ಟೇಬಲ್ ಮೇಲೆ ಇರಿಸಿ, ಪಾಸ್ ಬುಕ್ ಎಂಟ್ರಿ ಮಾಡಿಸಿ ಮರಳಿ ಹ್ಯಾಂಡ್ ಬ್ಯಾಗ್ ತೆಗೆದುಕೊಳ್ಳಲು ಬಂದಾಗ, ಅವರು ಇರಿಸಿದ್ದ ಸ್ಥಳದಲ್ಲಿ ಹ್ಯಾಂಡ್ ಬ್ಯಾಗ್ ಕಾಣದಾಗಿತ್ತು.
ಬ್ಯಾಂಕ್ ಕಚೇರಿಯ ಒಳಗಡೆ ಎಲ್ಲ ಕಡೆ ಹುಡುಕಾಡಿ ವಿಚಾರಿಸಿದ್ದು ಬ್ಯಾಗ್ ಸಿಕ್ಕಿರುವುದಿಲ್ಲ. ಅವರ ಬಾಬ್ತು ಹಣ ಇದ್ದ ಹ್ಯಾಂಡ್ ಬ್ಯಾಗ್ ಅನ್ನು ಯಾರಾದರೂ ಕೈ ತಪ್ಪಿನಿಂದ ಹಿಡಿದುಕೊಂಡು ಹೋಗಿರಬಹುದು, ಅದನ್ನು ಮರಳಿ ಕೊಡಬಹುದೆಂದು ಭಾವಿಸಿ ಮನೆಗೆ ಹಿಂತಿರುಗಿದ್ದರು. ಈ ನಡುವೆ ಹಣ, ಪಾಸ್ ಬುಕ್ ಹಾಗೂ ಇತರೆ ದಾಖಲೆಗಳಿದ್ದ ಹ್ಯಾಂಡ್ ಬ್ಯಾಗ್ ಬಿ.ಸಿ ರೋಡು ಕೈಕುಂಜೆಗೆ ಹೋಗುವ ರಸ್ತೆ ಬದಿಯಲ್ಲಿ ಪತ್ತೆಯಾಗಿದೆ. ಆದರೆ ಅದರಲ್ಲಿದ್ದ ನಗದು ಹಣ ಸಿಕ್ಕಿರುವುದಿಲ್ಲ. ಪಿರ್ಯಾದಿದಾರರ ಬಾಬ್ತು ಒಟ್ಟು ರೂ. 1,30,000/- ನಗದು ಹಣವಿದ್ದ ಹ್ಯಾಂಡ್ ಬ್ಯಾಗ್ ಅನ್ನು ಯಾರೋ ಕಳ್ಳರು ಕಳವು ಮಾಡಿದ್ದು ಅದರಲ್ಲಿದ್ದ ಹಣವನ್ನು ಕಳವು ಮಾಡಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ, ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Thieves flee with 1lakh 30 thousand bag from bank from customer at Bantwal in Mangalore.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm