ಬ್ರೇಕಿಂಗ್ ನ್ಯೂಸ್
14-09-24 06:54 pm Bengaluru correspondent ಕ್ರೈಂ
ಬೆಂಗಳೂರು, ಸೆ.14: ತಿಂಗಳಿಗೆ 30 ಲಕ್ಷ ಲಂಚ ಕೇಳಿದ್ದಲ್ಲದೆ, ಪತ್ನಿಯನ್ನು ತನ್ನ ಜೊತೆಗೆ ಮಲಗಲು ಕಳಿಸು ಎಂದು ಅವಾಚ್ಯವಾಗಿ ನಿಂದಿಸಿ ಎಫ್ಐಆರ್ ದಾಖಲಾಗುತ್ತಿದ್ದಂತೆ ಆಂಧ್ರಕ್ಕೆ ಎಸ್ಕೇಪ್ ಆಗಲು ಯತ್ನಿಸಿದ ಬೆಂಗಳೂರಿನ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಕೋಲಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಎಂಬವರ ಜೊತೆಗೆ ಅವಾಚ್ಯ ಪದಗಳಿಂದ ನಿಂದಿಸಿ ಮಾತನಾಡಿದ್ದ ಆಡಿಯೋ ವೈರಲ್ ಆಗಿತ್ತು.
ಇದರ ಬೆನ್ನಲ್ಲೇ ಮುನಿರತ್ನ ವಿರುದ್ಧ ಕೊಲೆ ಬೆದರಿಕೆ, ಜಾತಿ ನಿಂದನೆ ಆರೋಪದಡಿ ವಯಾಲಿಕಾವಲ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಬಂಧನ ಭೀತಿ ಎದುರಿಸುತ್ತಿದ್ದ ಶಾಸಕ ಮುನಿರತ್ನ ಕೋಲಾರ ಮೂಲಕ ಆಂಧ್ರಪ್ರದೇಶಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದರು. ಕೋಲಾರ ಮೂಲಕ ಕಾರಿನಲ್ಲಿ ತೆರಳುತ್ತಿದ್ದಾಗಲೇ ಖಚಿತ ಮಾಹಿತಿ ಪಡೆದು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೊಬೈಲ್ ಟವರ್ ಲೊಕೇಶನ್ ಟ್ರೇಸ್ ಮಾಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರು ಸಿಟಿ ಪೊಲೀಸ್ ಕಮೀಷನರ್ ಸೂಚನೆ ಮೇರೆಗೆ ಮುನಿರತ್ನ ಅವರನ್ನು ವಶಕ್ಕೆ ಪಡೆಯಲಾಗಿದೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದು, ಅವರನ್ನು ಬೆಂಗಳೂರಿಗೆ ಕರೆತರುತ್ತಿದ್ದಾರೆ.
ಘನತ್ಯಾಜ್ಯ ಗುತ್ತಿಗೆ ನೀಡುವ ವಿಚಾರದಲ್ಲಿ ತಿಂಗಳಿಗೆ 36 ಲಕ್ಷ ನೀಡಬೇಕೆಂದು ಶಾಸಕ ಮುನಿರತ್ನ ಡಿಮ್ಯಾಂಡ್ ಇಟ್ಟಿದ್ದು ಅಷ್ಟು ಹಣ ಇಲ್ಲವೆಂದು ಗುತ್ತಿಗೆದಾರ ಬೇಡಿಕೊಳ್ಳುವ ಆಡಿಯೋ ವೈರಲ್ ಆಗಿತ್ತು. ಇದು ಮಾಧ್ಯಮದಲ್ಲಿ ಬರುತ್ತಿದ್ದಂತೆ ಮುನಿರತ್ನ ವಿರುದ್ಧ ಆಕ್ರೋಶ ಕೇಳಿಬಂದಿತ್ತು. ಆನಂತರ, ಸ್ವತಃ ಗುತ್ತಿಗೆದಾರನೇ ಶಾಸಕ ಮುನಿರತ್ನ, ಸರ್ಕಾರಿ ಅಧಿಕಾರಿ ವಿಜಯಕುಮಾರ್, ಕಾರ್ಯದರ್ಶಿ ಅಭಿಷೇಕ್, ಶಾಸಕರ ಆಪ್ತ ವಸಂತ ಕುಮಾರ್ ವಿರುದ್ಧ ವಯ್ಯಾಲಿಕಾವಲ್ ಠಾಣೆಯಲ್ಲಿ ಕೇಸು ದಾಖಲಾಗಿತ್ತು. ಹೊಲೆಯನ ರೀತಿ ಮಾಡ್ತಿದ್ದೀಯಲ್ಲಾ ಎಂದು ಜಾತಿ ನಿಂದನೆ ಮಾಡಿರುವುದೂ ಆಡಿಯೋದಲ್ಲಿತ್ತು. ಈ ಬಗ್ಗೆ ಅದೇ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿ ಶಾಸಕನನ್ನು ಬಂಧಿಸಿದ್ದಾರೆ.
Karnataka BJP MLA Munirathna was arrested in Kolar on Saturday on charges of making a death threat to a contractor and using casteist slurs against him. Two FIRs were filed against Munirathna, an MLA from Rajarajeshwari Nagar in Bengaluru, based on complaints filed by Chelvaraju, who accused the BJP leader of harassing and threatening him
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
15-08-26 02:06 pm
HK News Staffer
Belthangady Couple Suicide, Bangalore: ಬೆಂಗಳೂ...
15-08-26 01:28 pm
ಕೋಟೆಕಾರಿನಲ್ಲಿ ಕಟ್ಟಡದಿಂದ ಬಿದ್ದು ಗಾಯಗೊಂಡ ವಲಸೆ ಕ...
14-08-26 09:09 pm
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am