ಬ್ರೇಕಿಂಗ್ ನ್ಯೂಸ್
21-09-24 10:56 pm Mangalore Correspondent ಕ್ರೈಂ
ಮಂಗಳೂರು, ಸೆ.21: ಮೂಡುಬಿದ್ರೆ ಠಾಣೆ ವ್ಯಾಪ್ತಿಯ ಮಾರ್ಪಾಡಿ ಹಾಗೂ ಮೂಡು ಮಾರ್ನಾಡಿನಲ್ಲಿ ವೃದ್ಧ ಮಹಿಳೆಯರಿಬ್ಬರ ಚಿನ್ನದ ಸರವನ್ನು ಕಿತ್ತುಕೊಂಡು ಸ್ಕೂಟರಿನಲ್ಲಿ ಪರಾರಿಯಾಗಿದ್ದ ಇಬ್ಬರು ಅಂತಾರಾಜ್ಯ ಕಳ್ಳರನ್ನು ಮೂಡುಬಿದ್ರೆ ಪೊಲೀಸರು ಬಂಧಿಸಿದ್ದಾರೆ.
ಉಳ್ಳಾಲ ಚೆಂಬುಗುಡ್ಡೆ ನಿವಾಸಿ ಹಬೀಬ್ ಹಸನ್ (42) ಮತ್ತು ಬಂಟ್ವಾಳ ಜೋಡುಮಾರ್ಗ ನಿವಾಸಿ ಉಮ್ಮರ್ ಸಿಯಾಫ್ ಅಲಿಯಾಸ್ ಚಿಯಾ (29) ಬಂಧಿತರು. ಇವರು ಕಳೆದ ಆಗಸ್ಟ್ 15ರಂದು ಮಾರ್ಪಾಡಿ ಗ್ರಾಮದ ನಿರ್ಮಲ ಪಂಡಿತ್ (70) ಎಂಬವರ ಕುತ್ತಿಗೆಯಿಂದ 24 ಗ್ರಾಮ್ ತೂಕದ ಚಿನ್ನದ ಸರವನ್ನು ಕಿತ್ತು ಎಸ್ಕೇಪ್ ಆಗಿದ್ದರು. ಮೂಡು ಮಾರ್ನಾಡು ಗ್ರಾಮದ ಬಸದಿ ಬಳಿ ಸೆ.2ರಂದು 82 ವರ್ಷದ ಪ್ರೇಮಾ ಎಂಬವರ ಕುತ್ತಿಗೆಯಿಂದ ಮೂರು ಪವನ್ ತೂಕದ ಚಿನ್ನದ ಸರವನ್ನು ಸ್ಕೂಟರಿನಲ್ಲಿ ಬಂದಿದ್ದ ಇಬ್ಬರು ವ್ಯಕ್ತಿಗಳು ಎಗರಿಸಿ ಪರಾರಿಯಾಗಿದ್ದರು. ಎರಡೂ ಘಟನೆ ಬಗ್ಗೆ ಮೂಡುಬಿದ್ರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಹಬೀಬ್ ಹಸನ್ ಈ ಹಿಂದೆ ಹಲವಾರು ದರೋಡೆ, ಕಳ್ಳತನ, ಸುಲಿಗೆ ಪ್ರಕರಣಗಳಲ್ಲಿ ಭಾಗಿಯಾಗಿದ್ದು ಕೇಸು ಎದುರಿಸುತ್ತಿದ್ದಾನೆ. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಟಿವಿಎಸ್ ಜುಪಿಟರ್ ಸ್ಕೂಟರ್ ವಶಕ್ಕೆ ಪಡೆದಿದ್ದು ಅದು ಕದ್ರಿ ಪೊಲೀಸ್ ಠಾಣೆಯಿಂದ ಕಳವಾಗಿರುವ ಸ್ಕೂಟರ್ ಆಗಿರುತ್ತದೆ. ಸ್ಕೂಟರ್ ಮತ್ತು ಚಿನ್ನದ ಸರಗಳನ್ನು ವಶಕ್ಕೆ ಪಡೆದಿದ್ದು ಒಟ್ಟು 2.50 ಲಕ್ಷ ಮೌಲ್ಯದ ಸೊತ್ತು ವಶಕ್ಕೆ ಪಡೆಯಲಾಗಿದೆ. ಮೂಡುಬಿದ್ರೆ ಇನ್ಸ್ ಪೆಕ್ಟರ್ ಸಂದೇಶ್ ಪಿ.ಜಿ., ಎಎಸ್ಐ ಮೋಹನದಾಸ್ ಕೋಟ್ಯಾನ್, ಎಎಸ್ಐ ಪ್ರಶಾಂತ್, ಅಪರಾಧ ವಿಭಾಗದ ಮೊಹಮ್ಮದ್ ಇಕ್ಬಾಲ್, ಮೊಹಮ್ಮದ್ ಹುಸೇನ್, ಅಕೀಲ್ ಅಹ್ಮದ್, ನಾಗರಾಜ್, ವೆಂಕಟೇಶ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
Gold jewellery theft of old women, natorious thief arrested from ullal in Mangalore by Moodbidri police.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am