ಬ್ರೇಕಿಂಗ್ ನ್ಯೂಸ್
22-09-24 02:37 pm HK News Desk ಕ್ರೈಂ
ಕಾರವಾರ, ಸೆ 22: ತಾಲ್ಲೂಕಿನ ಹಣಕೋಣ ಗ್ರಾಮದಲ್ಲಿ ಭಾನುವಾರ ನಸುಕಿನ ಜಾವ ಉದ್ಯಮಿ ವಿನಾಯಕ ನಾಯ್ಕ ಯಾನೆ ರಾಜು ನಾಯ್ಕ (58) ಎಂಬುವವರನ್ನು ದುಷ್ಕರ್ಮಿಗಳ ಗುಂಪೊಂದು ತಲ್ವಾರ್ನಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದೆ.
ಮಹಾರಾಷ್ಟ್ರದ ಪುಣೆಯಲ್ಲಿ ಎಲೆಕ್ಟ್ರಾನಿಕ್ ವಸ್ತುಗಳ ಆಮದು, ರಫ್ತು ವಹಿವಾಟು ನಡೆಸುತ್ತಿರುವ ಉದ್ಯಮಿ ತನ್ನ ಊರಾದ ಹಣಕೋಣಕ್ಕೆ ವಾರದ ಹಿಂದೆ ಬಂದಿದ್ದರು. ಭಾನುವಾರ ಪುಣೆಗೆ ಹೊರಡಲು ಸಿದ್ದರಾಗಿದ್ದರು. ನಸುಕಿನ ಜಾವ 5.30ರ ಸುಮಾರಿಗೆ ಅವರ ಹತ್ಯೆ ಮಾಡಲಾಗಿದೆ.
ನಾಲ್ಕರಿಂದ ಐದು ಜನರಿದ್ದ ಗುಂಪೊಂದು ಮನೆಗೆ ನುಗ್ಗಿ ಕೃತ್ಯ ನಡೆಸಿದೆ. ವಿನಾಯಕ ಅವರ ಪತ್ನಿ ವೃಶಾಲಿ ಅವರ ಮೇಲೆಯೂ ಹಲ್ಲೆ ನಡೆಸಲಾಗಿದೆ. ಇವರಿಬ್ಬರೇ ಮನೆಯಲ್ಲಿದ್ದರು ಎಂದು ಚಿತ್ತಾಕುಲ ಠಾಣೆ ಪೊಲೀಸರು ತಿಳಿಸಿದ್ದಾರೆ.
ಹತ್ಯೆಗೆ ಕಾರಣ ಏನು ಎಂಬುದು ತಿಳಿದಿಲ್ಲ. ಆರೋಪಿಗಳ ಬಂಧನಕ್ಕೆ ವಿಶೇಷ ತಂಡ ರಚಿಸಲಾಗಿದೆ.
ಸಾತೇರಿ ಜಾತ್ರೆಗೆ ಬಂದ ಇವರು ಭಾನುವಾರ ಬೆಳಗ್ಗೆ ಮರಳಿ ಹೊರಡಲು ಸಿದ್ದರಾಗಿದ್ದರು. ಈ ವೇಳೆ ಬೆಳಗಿನಜಾವ 5.30ರ ಸುಮಾರಿಗೆ ಐದು ಜನ ಅಪರಿಚಿತರು ಮನಗೆ ನುಗ್ಗಿ ಅಡುಗೆ ಮನೆಯಲ್ಲಿದ್ದ ವಿನಾಯಕನನ್ನು ಮನ ಬಂದಂತೆ ಚಾಕು ಹಾಗೂ ತಲ್ವಾರ್ನಿಂದ ಕಡಿದು ಹತ್ಯೆ ಮಾಡಲಾಗಿದೆ. ಮನೆಯಲ್ಲಿ ಆತನ ಪತ್ನಿ ಕೂಡ ಇದ್ದು ಅವರಿಗೂ ತಲೆಗೆ ಹೊಡೆಯಲಾಗಿದೆ. ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮನೆಯಂಗಳದಲ್ಲಿ ಚಾಕು ಹಾಗೂ ರಾಡ್ ಬಿದ್ದಿದ್ದು, ತನಿಖೆಯ ಬಳಿಕವೇ ನಿಜಾಂಶ ಹೊರಬರಬೇಕಿದೆ. ಸದ್ಯ ವಿನಾಯಕ ಅವರ ಪತ್ನಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಪ್ರಕರಣ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಕಳೆದ 10 ದಿನಗಳಿಂದ ಹಣಕೋಣ ಗ್ರಾಮದಲ್ಲಿ ಉದ್ಯಮಿ ಕುಟುಂಬ ಉಳಿದುಕೊಂಡಿತ್ತು. ಗ್ರಾಮದ ಸಾತೇರಿದೇವಿ ಜಾತ್ರೆಗೆಂದು ಪತ್ನಿಯೊಂದಿಗೆ ಉದ್ಯಮಿ ವಿನಾಯಕ ಊರಿಗೆ ಬಂದಿದ್ದರು. ಜಾತ್ರೆ ಮುಗಿಸಿ ಭಾನುವಾರ ಬೆಳಗ್ಗೆ ಪುಣೆಗೆ ವಾಪಸ್ಸಾಗಲು ಸಿದ್ಧವಾಗಿದ್ದರು. ಉದ್ಯಮಿ ವಿನಾಯಕ ನಾಯ್ಕ ಕಾರಿನಲ್ಲಿ ಬ್ಯಾಗ್ ಇರಿಸಲು ಬಾಗಿಲು ತೆರೆದಿದ್ದರು. ಈ ವೇಳೆ ಏಕಾಏಕಿ ರಾಡ್ನಿಂದ ಹಲ್ಲೆ ನಡೆಸಿ ಐವರು ಆಗಂತುಕರು ಒಳನುಗ್ಗಿದ್ದರು.
ರಾಡ್ ಸೇರಿ ಮಾರಕಾಸ್ತ್ರಗಳಿಂದ ಉದ್ಯಮಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಉದ್ಯಮಿ ವಿನಾಯಕ ಭುಜಕ್ಕೆ ತೀವ್ರ ಹಲ್ಲೆ ಮಾಡಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ವೇಳೆ ತಪ್ಪಿಸಲು ಅಡ್ಡಬಂದ ಪತ್ನಿ ವೃಷಾಲಿ ಮೇಲೂ ಹಲ್ಲೆ ಮಾಡಿದ್ದಾರೆ. ಚಿಕಿತ್ಸೆ ಪಡೆದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳಗಿನ ಜಾವ 5:30 ರಿಂದ 6 ಗಂಟೆ ವೇಳೆಗೆ ಘಟನೆ ನಡೆದಿದೆ. ಪೂಣಾದಲ್ಲಿ ಆಮದು ರಫ್ತು ಉದ್ಯಮ ನಡೆಸುತ್ತಿದ್ದರು. ತನಿಖೆ ಬಳಿಕ ಹಲ್ಲೆಗೆ ನಿಖರ ಕಾರಣ ತಿಳಿದುಬರಬೇಕಿದೆ. ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಹತ್ಯೆ, ಹತ್ಯೆ ಯತ್ನ ಪ್ರಕರಣ ದಾಖಲಾಗಿದೆ ಎಂದು ಉತ್ತರಕನ್ನಡ ಎಸ್ಪಿ ಎಂ.ನಾರಾಯಣ ತಿಳಿಸಿದರು.
Karwar Pune based businessman brutal murder, wife too attacked. The deceased has been identified as Raju Naik. He had come to Karwar to attend som religious program in the temple.
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
19-08-25 06:59 pm
HK News Desk
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
19-08-25 11:07 pm
Mangalore Correspondent
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm