ಬ್ರೇಕಿಂಗ್ ನ್ಯೂಸ್
10-12-20 02:13 pm Mangalore Correspondent ಕ್ರೈಂ
ಮಂಗಳೂರು, ಡಿ.10: ಪ್ರಚೋದನಾತ್ಮಕ ಗೋಡೆ ಬರಹ ಬರೆದು ಸಿಕ್ಕಿಬಿದ್ದ ಇಬ್ಬರಿಗೆ ನ್ಯಾಯಾಲಯ ಮತ್ತೆ ಹತ್ತು ದಿನಗಳ ಕಾಲ ಪೊಲೀಸ್ ಕಸ್ಟಡಿ ವಿಧಿಸಿದೆ. ಕೊರೊನಾ ಪರೀಕ್ಷೆಯಲ್ಲಿ ವರದಿ ನೆಗೆಟಿವ್ ಬಂದ ಬಳಿಕ ಬುಧವಾರ ಸಂಜೆ ಅವರನ್ನು ಜೆಎಂಎಫ್ ಕೋರ್ಟಿಗೆ ಹಾಜರುಪಡಿಸಲಾಗಿತ್ತು. ಪೊಲೀಸರು ಮತ್ತಷ್ಟು ವಿಚಾರಣೆ ಅಗತ್ಯವಿದೆ ಎಂದು ಹೇಳಿದ ಕಾರಣ ಕೋರ್ಟ್ ಕಸ್ಟಡಿ ಅವಧಿಯನ್ನು ವಿಸ್ತರಣೆ ಮಾಡಿದೆ.
ತೀರ್ಥಹಳ್ಳಿ ಮೂಲದ ಮೊಹಮ್ಮದ್ ಶಾರೀಕ್ ಮತ್ತು ಮಾಝ್ ಮುನೀರ್ ಅಹ್ಮದ್ ಅವರನ್ನು ಪ್ರಕರಣಕ್ಕೆ ಸಂಬಂಧಿಸಿ ಕಳೆದ ಶನಿವಾರ ಪೊಲೀಸರು ಬಂಧಿಸಿದ್ದರು. ಇಬ್ಬರು ಬಳಕೆ ಮಾಡುತ್ತಿದ್ದ ಮೊಬೈಲ್ ಫೋನ್ ಮತ್ತು ಲ್ಯಾಪ್ ಟಾಪ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಅದರಲ್ಲಿನ ಡಾಟಾಗಳನ್ನು ರಿಟ್ರೀವ್ ಮಾಡಲು ತಜ್ಞರು ಪ್ರಯತ್ನಿಸುತ್ತಿದ್ದಾರೆ. ಮೊಬೈಲ್ ಮತ್ತು ಲ್ಯಾಪ್ ಟಾಪ್ ನಲ್ಲಿರುವ ಮಾಹಿತಿಗಳು ಹೊರಬಿದ್ದರೆ ತನಿಖೆಗೆ ಸಹಕಾರಿಯಾಗಲಿದೆ.
ಆರೋಪಿಗಳ ಪೈಕಿ, ಮೊಹಮ್ಮದ್ ಶಾರೀಕ್ ವಿದೇಶದಿಂದ ಕರೆ ಮಾಡಿದಾತನ ಸೂಚನೆಯಂತೆ ಈ ಕೃತ್ಯ ಮಾಡಿದ್ದ. ಹೇಗೆ ಬರೆಯಬೇಕು ಎನ್ನುವುದನ್ನೂ ವಿದೇಶಿ ವ್ಯಕ್ತಿಯೇ ಸೂಚಿಸಿದ್ದ. ಇಂಟರ್ನೆಟ್ ಮತ್ತು ವಾಟ್ಸಪ್ ಕರೆಗಳ ಮೂಲಕ ಶಾರೀಕ್ ಜೊತೆಗೆ ಒಡನಾಟ ಇಟ್ಟುಕೊಂಡಿದ್ದ. ಶಾರೀಕ್, ಉಗ್ರರ ಪರ ಒಲವುಳ್ಳ ವಾಟ್ಸಪ್ ಗ್ರೂಪ್ ಗಳಲ್ಲಿ ಆಕ್ಟಿವ್ ಆಗಿದ್ದ. ಇವೆಲ್ಲ ವಿಚಾರವನ್ನು ಪೊಲೀಸರು ದೃಢಪಡಿಸಲು ಆತನ ಮೊಬೈಲ್ ಮಾಹಿತಿಗಳನ್ನು ರಿಟ್ರೀವ್ ಮಾಡಲೇಬೇಕು.
ಇದೇ ವೇಳೆ, ಮೊಹಮ್ಮದ್ ಶಾರೀಕ್ ಸಂಬಂಧಿಯಾಗಿರುವ ತೀರ್ಥಹಳ್ಳಿ ಮೂಲದ ಸಾದತ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಗಳು ವಿಚಾರಣೆ ಸಂದರ್ಭ ಸಂಭಾವಿತರಂತೆ ಪೋಸು ನೀಡುತ್ತಿದ್ದಾರೆ. ಅವರ ಹಿನ್ನೆಲೆ ಬಗ್ಗೆ ಕೇಳಿದರೆ, ಯಾವುದಕ್ಕೂ ಪ್ರತಿಕ್ರಿಯೆ ನೀಡುತ್ತಿಲ್ಲ. ಆದರೆ, ಬಂಧಿತ ಇಬ್ಬರು ಕೂಡ ಇಂಗ್ಲಿಷ್, ಹಿಂದಿ, ಕನ್ನಡ, ಉರ್ದು ಭಾಷೆಯಲ್ಲಿ ಹಿಡಿತ ಹೊಂದಿದ್ದು, ಆಧುನಿಕ ತಂತ್ರಜ್ಞಾನದ ಮಾಹಿತಿ ಹೊಂದಿದ್ದಾರೆ. ಹೀಗಾಗಿ ಇವರ ಹಿಂದೆ ಪ್ರಬಲ ಸಂಚು ಇರುವ ಬಗ್ಗೆ ಗುಮಾನಿಯಿದ್ದು, ಪೊಲೀಸರು ಸಮಗ್ರವಾಗಿ ವಿಚಾರಣೆ ನಡೆಸುತ್ತಿದ್ದಾರೆ.
In connection with the pro-graffiti slogans which appeared at two places in the city, the two persons who were arrested in the case, were remanded to ten days of police custody.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
19-06-25 10:58 pm
HK News Desk
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
19-06-25 10:08 pm
Mangalore Correspondent
ಜಪ್ಪಿನಮೊಗರು ಕಾರು ಅಪಘಾತಕ್ಕೆ ಮದ್ಯ ಸೇವನೆ, ಅತಿ ವೇ...
19-06-25 07:48 pm
Mangalore Police, Sudheer Kumar Reddy: ಕೋಮು ಸ...
19-06-25 01:05 pm
Udupi Bus Driver: ಅಡ್ಡಾದಿಡ್ಡಿ ಬಸ್ ಚಲಾಯಿಸಿ ರಂಪ...
18-06-25 10:57 pm
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
19-06-25 04:37 pm
Mangalore Correspondent
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm