ಬ್ರೇಕಿಂಗ್ ನ್ಯೂಸ್
22-09-24 10:40 pm Mangalore Correspondent ಕ್ರೈಂ
ಮಂಗಳೂರು, ಸೆ.22: ಮಹಿಳೆಯೊಬ್ಬರು ಪಾರ್ಟ್ ಟೈಮ್ ಉದ್ಯೋಗದ ಹೆಸರಲ್ಲಿ ಹಣ ಹೂಡಿಕೆ ಮಾಡಿ 28 ಲಕ್ಷ ರೂಪಾಯಿ ಕಳಕೊಂಡಿದ್ದು ಕೊಣಾಜೆ ಠಾಣೆಗೆ ದೂರು ನೀಡಿದ್ದಾರೆ.
ಜುಲೈ 21ರಂದು ಮಹಿಳೆಗೆ ವಾಟ್ಸಪ್ ನಲ್ಲಿ ಪಾರ್ಟ್ ಟೈಮ್ ಉದ್ಯೋಗದ ಬಗ್ಗೆ ಮೆಸೇಜ್ ಬಂದಿತ್ತು. ಟೆಲಿಗ್ರಾಮ್ ಏಪ್ ಡೌನ್ಲೋಡ್ ಮಾಡುವಂತೆ ಮೋಸಗಾರರು ಸೂಚನೆ ನೀಡಿದ್ದರು. ಅದರಂತೆ, ಏಪ್ ನಲ್ಲಿ ವಿಡಿಯೋ ಲಿಂಕ್ ಷೇರ್ ಮಾಡಿದ್ದು, ಉದ್ಯೋಗದ ಬಗ್ಗೆ ಮಾಹಿತಿ ನೀಡಲು 123 ರೂ. ಪಾವತಿ ಮಾಡುವಂತೆ ಹೇಳಿದ್ದರು. ಆನಂತರ, ವಿಡಿಯೋ ಒಂದನ್ನು ಕಳಿಸಿದ್ದು, ಅದನ್ನು ನೋಡಿ ಸ್ಕ್ರೀನ್ ಶಾಟ್ ಶೇರ್ ಮಾಡುವಂತೆ ಕೇಳಿಕೊಂಡಿದ್ದರು. ಮತ್ತೆ 130 ರೂ. ಕಳಿಸುವುದಕ್ಕೆ ಹೇಳಿದ್ದು ಹಾಗೆಯೇ ಮಹಿಳೆ ಅನುಸರಿಸಿದ್ದರು.
ಜುಲೈ 23ರಂದು ಮತ್ತೊಂದು ಲಿಂಕ್ ಕಳಿಸಿದ್ದು, ಮತ್ತೆ ಒಂದು ಸಾವಿರ ರೂ. ಪಾವತಿಸುವಂತೆ ಹೇಳಿದ್ದರು. ಮಹಿಳೆ ಒಂದು ಸಾವಿರ ಪಾವತಿಸಿದ್ದು, ಅವರು ಹೇಳಿದ ಹಾಗೇ ಮಾಡಿದ್ದಕ್ಕಾಗಿ ಈಕೆಗೆ 1300 ರೂ. ಕಳಿಸಿಕೊಟ್ಟು ನಂಬಿಕೆ ಬರುವಂತೆ ಮಾಡಿದ್ದರು.
ಆನಂತರ, ಮತ್ತಷ್ಟು ಲಿಂಕ್ ಗಳನ್ನು ಕಳಿಸಿಕೊಟ್ಟು ವಿಶ್ವಾಸ ಹುಟ್ಟಿಸಿದ್ದರು. ಇದೇ ನಂಬಿಕೆಯಿಂದ ಮಹಿಳೆ 2.85 ಲಕ್ಷ ರೂ.ವನ್ನು ಅವರು ನೀಡಿದ್ದ ಖಾತೆಗೆ ಕಳಿಸಿಕೊಟ್ಟಿದ್ದಾರೆ. ಇನ್ನೊಂದು ಖಾತೆಗೆ 25.32 ಲಕ್ಷ ರೂ.ವನ್ನು ರವಾನೆ ಮಾಡಿದ್ದಾರೆ. ವಂಚಕರು 28.18 ಲಕ್ಷ ರೂ.ಗೆ ಪ್ರತಿಯಾಗಿ ದೊಡ್ಡ ಮೊತ್ತದ ಲಾಭಾಂಶವನ್ನು ನೀಡುವುದಾಗಿ ನಂಬಿಸಿದ್ದರು. ಹಣ ಹಿಂತಿರುಗಿ ಬರುತ್ತೆ ಎಂಬ ನಂಬಿಕೆಯಿಂದ ಮನೆಯಲ್ಲಿ ಯಾರಿಗೂ ಹೇಳದೆ ಮಹಿಳೆ ಕೆಲವು ದಿನಗಳನ್ನು ಕಳೆದಿದ್ದಾರೆ. ಆದರೆ ವಂಚಕರು ಸಂಪರ್ಕವನ್ನು ಕಡಿದುಕೊಂಡಿದ್ದು, ಮಹಿಳೆಗೆ ಪಂಗನಾಮ ಹಾಕಿದ್ದಾರೆ. ಆನಂತರ, ಹಣ ಕಳಕೊಂಡ ಬಗ್ಗೆ ಮನೆಯವರಲ್ಲಿ ಹೇಳಿಕೊಂಡಿದ್ದು ಕೊಣಾಜೆ ಪೊಲೀಸ್ ಠಾಣೆಗೆ ಬಂದು ಮಾಹಿತಿ ನೀಡಿದ್ದಾರೆ.
A woman was allegedly duped of Rs 28.18 lakh in a part-time job scam here, said the police on Sunday. In a complaint to Konaje police, the victim of the job fraud scam said that she received a WhatsApp message offering her a part-time job on July 21. She was asked to download the Telegram app, where she received a link from the fraudsters.
29-04-25 10:45 pm
Bangalore Correspondent
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
Praveen Nettaru, Mohsin Shukur, Karwar Police...
29-04-25 01:04 pm
30-04-25 03:14 pm
HK News Desk
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಎದುರೇ ಬಾಂಬ್ ಸ್ಫೋ...
28-04-25 05:53 pm
30-04-25 04:06 pm
Mangalore Correspondent
ಗುಂಪು ಥಳಿತಕ್ಕೆ ಸಾವು ಪ್ರಕರಣ ; ಕೇರಳ ಮೂಲದ ಯುವಕನೆ...
30-04-25 11:26 am
Puttur Elephant Attack: ಕಾಡಾನೆ ತಿವಿತಕ್ಕೆ ಪುತ್...
29-04-25 11:00 pm
Mangalore, Ullal Nethravathi Bridge: ಉಳ್ಳಾಲ ನ...
29-04-25 05:45 pm
Mangalore, Dr Kalladka Bhat: ಹೆಣ್ಣು ಮಕ್ಕಳು ವ್...
29-04-25 12:40 pm
30-04-25 04:09 pm
Mangalore Correspondent
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am