ಬ್ರೇಕಿಂಗ್ ನ್ಯೂಸ್
26-09-24 02:41 pm Bangalore Correspondent ಕ್ರೈಂ
ಬೆಂಗಳೂರು, ಸೆ.26: ನೇಪಾಳ ಮೂಲದ ಮಹಾಲಕ್ಷ್ಮಿ ಕೊಲೆ ಪ್ರಕರಣದಲ್ಲಿ ಆರೋಪಿ ಎಂದು ಗುರುತಿಸಲ್ಪಟ್ಟ ಮುಕ್ತಿರಂಜನ್ ರಾಯ್ ಒಡಿಶಾದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತ ಸಾಯುವುದಕ್ಕೂ ಮುನ್ನ ಬರೆದಿಟ್ಟಿದ್ದ ಡೆತ್ನೋಟ್ ಪಕ್ಕದಲ್ಲೇ ಪತ್ತೆಯಾಗಿದ್ದು ಕೊಲೆಯ ಹಿಂದಿನ ಕಾರಣವನ್ನು ತಿಳಿಸಿದ್ದಾನೆ. ಆರೋಪಿ ಆಕ್ಸೋ ಬ್ಲೇಡ್ ಬಳಸಿ ಆಕೆಯ ದೇಹವನ್ನು ಸುಮಾರು 50ಕ್ಕೂ ಅಧಿಕ ತುಂಡುಗಳನ್ನಾಗಿ ಕತ್ತರಿಸಿದ್ದ ಎಂದು ತನಿಖೆಯಲ್ಲಿ ತಿಳಿದುಬಂದಿದೆ.
ಬೆಂಗಳೂರಿನ ವಯ್ಯಾಲಿಕಾವಲ್ ನಲ್ಲಿ ಮಹಾಲಕ್ಷ್ಮಿಯನ್ನು ಕೊಲೆ ಮಾಡಿದ ನಂತರ ಒಡಿಶಾ ರಾಜ್ಯದ ತನ್ನ ಊರು ಭುಯಿನ್ ಪುರ ಗ್ರಾಮಕ್ಕೆ ತೆರಳಿದ್ದ ಮುಕ್ತಿ ರಂಜನ್ ರಾಯ್ ಪೊಲೀಸರು ಬೆನ್ನು ಬಿದ್ದಿದ್ದಾರೆಂದು ತಿಳಿದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆದರೆ ಶವದ ಪಕ್ಕದಲ್ಲಿಯೇ ಡೈರಿ ಸಿಕ್ಕಿದ್ದು ಅದರಲ್ಲಿ ವಿವರವಾದ ಮಾಹಿತಿ ಬರೆದಿಟ್ಟಿದ್ದಾನೆ. ತಾನು ಕೆಲಸ ಮಾಡುತ್ತಿದ್ದ ಮಾಲ್ನಲ್ಲಿ ಸ್ಟೋರ್ ಮ್ಯಾನೇಜರ್ ಆಗಿದ್ದ ಮಹಾಲಕ್ಷ್ಮಿ, ತನ್ನನ್ನು ಮದುವೆಯಾಗುವಂತೆ ಒತ್ತಾಯಿಸುತ್ತಿದ್ದಳು. ಇದರಿಂದ ಇಬ್ಬರ ನಡುವೆ ಆಗಾಗ್ಗೆ ಜಗಳ ನಡೆದಿತ್ತು. ಅಲ್ಲದೆ, ಕೆಲಸದ ಸ್ಥಳದಲ್ಲಿ ಇತರ ಯುವತಿಯರೊಂದಿಗೆ ಮಾತನಾಡಬೇಡ ಎಂದು ಮಹಾಲಕ್ಷ್ಮಿ ತಾಕೀತು ಮಾಡುತ್ತಿದ್ದಳು. ಅವಳ ನಡವಳಿಕೆ ಮತ್ತು ಬಯಕೆಗಳಿಂದ ಬೇಸತ್ತಿದ್ದೆ ಎಂದು ಬರೆದಿದ್ದಾನೆ.


ಅಲ್ಲದೆ, ಡೆತ್ ನೋಟ್ನಲ್ಲಿ ತಾನೇ ಮಹಾಲಕ್ಷ್ಮಿಯನ್ನು ಕೊಂದಿದ್ದಾಗಿ ಒಪ್ಪಿಕೊಂಡಿದ್ದಾನೆ. ಸೆ.3ರಂದು ನಡೆದ ತೀವ್ರ ವಾಗ್ವಾದದ ಸಮಯದಲ್ಲಿ ಮಹಾಲಕ್ಷ್ಮಿ ಮುಕ್ತಿ ರಂಜನ್ನನ್ನು ಅಪಮಾನ ಮಾಡಿದ್ದಳು. ಇದರಿಂದ ಕೋಪಗೊಂಡು ಕೊಲೆ ಮಾಡಿದ್ದಾಗಿ ತಿಳಿಸಿದ್ದಾನೆ. ಮಹಾಲಕ್ಷ್ಮಿ ಜೊತೆಗಿನ ತನ್ನ ಆತ್ಮೀಯ ಸಂಬಂಧದ ಬಗ್ಗೆ ವಿವರಿಸಿ, ಅಪರಾಧಕ್ಕೆ ವಿಷಾದ ವ್ಯಕ್ತಪಡಿಸಿದ್ದಾನೆ. ಕೊಲೆಗೆ ಹರಿತವಾದ ಬ್ಲೇಡ್ ಬಳಸಿದ್ದಾಗಿ ಡೆತ್ ನೋಟ್ನಲ್ಲಿ ತಿಳಿಸಿದ್ದಾನೆ.
ಮಹಾಲಕ್ಷ್ಮಿ ಕೊಲೆಯ ನಂತರ, ಮುಕ್ತಿ ರಂಜನ್ ಬೆಂಗಳೂರಿನಿಂದ ಪರಾರಿಯಾಗಿದ್ದ. ಸೆ.3ರಿಂದಲೇ ತನ್ನ ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದ. ಕೊಲೆ ವಿಷಯ ತಿಳಿಯುತ್ತಲೇ ಪೊಲೀಸರು ಶಂಕಿತ ಆರೋಪಿಗಳ ಬೆನ್ನು ಬಿದ್ದಿದ್ದು ಮುಕ್ತಿರಂಜನ್ ಪಶ್ಚಿಮ ಬಂಗಾಳಕ್ಕೆ ತೆರಳಿ, ಅಲ್ಲಿಂದ ಮತ್ತೆ ಒಡಿಶಾಗೆ ಹೋಗಿರುವುದನ್ನು ಪತ್ತೆಹಚ್ಚಿದರು. ಪೊಲೀಸರು ಆತನಿದ್ದ ಸ್ಥಳಕ್ಕೆ ಹೋಗುವ ವೇಳೆಗೆ ಆತ್ಮಹತ್ಯೆ ಮಾಡಿಕೊಂಡಿದ್ದ. ಹೀಗಾಗಿ ಹತ್ತಾರು ಅನುಮಾನ, ಪ್ರಶ್ನೆಗಳಿಗೆ ಉತ್ತರ ಸಿಗದಂತಾಗಿದೆ.
The man suspected of murdering a woman whose chopped-up body was found inside a fridge at her home in Bengaluru was found dead in Odisha. A suicide note was found near the body of Mukti Ranjan Roy who had fled Bengaluru days ago, eluding investigators who had been closing in on him.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am