ಬ್ರೇಕಿಂಗ್ ನ್ಯೂಸ್
01-10-24 11:18 pm Mangalore Correspondent ಕ್ರೈಂ
ಮಂಗಳೂರು, ಅ.1: ನೀವು ಕಳಿಸಿದ್ದ ಪಾರ್ಸೇಲ್ ನಲ್ಲಿ ಡ್ರಗ್ಸ್ ಇದೆ ಎಂದು ಹೇಳಿ ವ್ಯಕ್ತಿಯೊಬ್ಬರನ್ನು ಡಿಜಿಟಲ್ ಅರೆಸ್ಟ್ ಮಾಡಿ ಅವರಿಂದ 39.30 ಲಕ್ಷ ರೂ. ಕಿತ್ತುಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದ್ದು ಈ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೆಪ್ಟೆಂಬರ 23 ರಂದು ತನ್ನ ಮೊಬೈಲ್ಗೆ ಕರೆ ಬಂದಿದ್ದು ಡಿಎಚ್ಎಲ್ ಕೊರಿಯರ್ ಸಂಸ್ಥೆಯ ಕಚೇರಿಯಿಂದ ಶ್ರೇಯಾ ಶರ್ಮಾ ಮಾತನಾಡುತ್ತಿದ್ದೇನೆ ಎಂದು ತಿಳಿಸಿದ್ದರು. ನಿಮ್ಮ ಹೆಸರಿನಲ್ಲಿ ಚೀನಾಕ್ಕೆ ಕಳುಹಿಸಿದ್ದ ಪಾರ್ಸೆಲ್ ರವಾನೆಯಾಗದೇ ಕಚೇರಿಯಲ್ಲೇ ಉಳಿದಿದೆ. ಅದರಲ್ಲಿ 5 ಪಾಸ್ಪೋರ್ಟ್, ಒಂದು ಲ್ಯಾಪ್ಟಾಪ್, 400 ಗ್ರಾಂ ಎಂಡಿಎಂಎ ಡ್ರಗ್ ಹಾಗೂ ಕೆಲವು ಬ್ಯಾಂಕ್ ದಾಖಲೆಗಳು ಹಾಗೂ ಮೂರೂವರೆ ಕೆ.ಜಿ. ಬಟ್ಟೆ ಇದೆ ಎಂದು ಆಕೆ ತಿಳಿಸಿದ್ದರು. ಆ ಪಾರ್ಸೆಲ್ ತನ್ನದಲ್ಲ ಎಂದರೂ ಕೇಳಲಿಲ್ಲ.
ಕಸ್ಟಮ್ಸ್ ಅಧಿಕಾರಿಗಳು ನಿಮ್ಮನ್ನು ಬಂಧಿಸುತ್ತಾರೆ ಎಂದು ಹೇಳಿ ಯಾಮಾರಿಸಿದ್ದಾರೆ ಎಂದು ವ್ಯಕ್ತಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ಸೆ.24ರಂದು ಬೆಳಗ್ಗೆ 9ರಿಂದ ವಿಡಿಯೋ ಕಾಲ್ ಮೂಲಕ ವಿಚಾರಣೆ ನಡೆಸುತ್ತೇವೆ ಎಂದು ಹೇಳಿದ ಕಸ್ಟಮ್ಸ್ ಸೋಗಿನಲ್ಲಿದ್ದ ಅಪರಿಚಿತರು, ನನ್ನನ್ನು ಯಾರ ಜೊತೆಗೂ ಮಾತನಾಡದಂತೆ (ಡಿಜಿಟಲ್ ಅರೆಸ್ಟ್) ನಿರ್ಬಂಧಿಸಿದ್ದರು. ನಿಷೇಧಿತ ಎಂಡಿಎಂಎ ಸಾಗಾಟ ಪ್ರಕರಣದಲ್ಲಿ ಬಂಧನ ಮಾಡಬೇಕಾಗುತ್ತದೆ. ಅಷ್ಟು ದೊಡ್ಡ ಪ್ರಮಾಣದಲ್ಲಿ ಡ್ರಗ್ಸ್ ಸಿಕ್ಕಿದೆ ಎಂದಿದ್ದರು. ಬಂಧನ ಮಾಡದೇ ಇರಬೇಕಾದರೆ ನಾವು ಕೇಳಿದಷ್ಟು ಹಣ ನೀಡುವಂತೆ ಕೇಳಿದ್ದರು. ಮೊದಲು ರು. 37 ಲಕ್ಷ ಪಾವತಿಸಿದ್ದು ಮರುದಿನ ನನ್ನ ಸೊತ್ತುಗಳ ವಿಚಾರಣೆಯನ್ನು ಆಡಿಟರ್ ಒಬ್ಬರು ನಡೆಸುತ್ತಾರೆ ಎಂದು ನಂಬಿಸಿ ಅದಕ್ಕೂ ರೂ. 2.30 ಲಕ್ಷವನ್ನು ಪಡೆದಿದ್ದಾರೆ.
ವಿಚಾರಣೆ ಪೂರ್ಣಗೊಂಡ ಬಳಿಕ ಪಡೆದ ಅಷ್ಟೂ ಹಣವನ್ನು ಸೆ.28 ರಂದು ಮರಳಿಸುವುದಾಗಿ ಭರವಸೆ ನೀಡಿದ್ದರು. ಆದರೆ ನಂತರ ಕರೆ ಮಾಡಿದರೆ ಅವರು ಸ್ವೀಕರಿಸುತ್ತಿಲ್ಲ. ನನಗೆ ಅಪರಿಚಿತರ ಮೋಸ ಮಾಡಿದ್ದಾರೆ ಎಂದು ಹಣ ಕಳಕೊಂಡ ವ್ಯಕ್ತಿ ದೂರು ನೀಡಿದ್ದಾರೆ.
Digital arrest scam in the name of drugs parcel, Mangalore man looses 39 lakhs rs.
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
19-08-25 06:59 pm
HK News Desk
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
19-08-25 11:07 pm
Mangalore Correspondent
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm