ಬ್ರೇಕಿಂಗ್ ನ್ಯೂಸ್
01-10-24 11:18 pm Mangalore Correspondent ಕ್ರೈಂ
ಮಂಗಳೂರು, ಅ.1: ನೀವು ಕಳಿಸಿದ್ದ ಪಾರ್ಸೇಲ್ ನಲ್ಲಿ ಡ್ರಗ್ಸ್ ಇದೆ ಎಂದು ಹೇಳಿ ವ್ಯಕ್ತಿಯೊಬ್ಬರನ್ನು ಡಿಜಿಟಲ್ ಅರೆಸ್ಟ್ ಮಾಡಿ ಅವರಿಂದ 39.30 ಲಕ್ಷ ರೂ. ಕಿತ್ತುಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದ್ದು ಈ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೆಪ್ಟೆಂಬರ 23 ರಂದು ತನ್ನ ಮೊಬೈಲ್ಗೆ ಕರೆ ಬಂದಿದ್ದು ಡಿಎಚ್ಎಲ್ ಕೊರಿಯರ್ ಸಂಸ್ಥೆಯ ಕಚೇರಿಯಿಂದ ಶ್ರೇಯಾ ಶರ್ಮಾ ಮಾತನಾಡುತ್ತಿದ್ದೇನೆ ಎಂದು ತಿಳಿಸಿದ್ದರು. ನಿಮ್ಮ ಹೆಸರಿನಲ್ಲಿ ಚೀನಾಕ್ಕೆ ಕಳುಹಿಸಿದ್ದ ಪಾರ್ಸೆಲ್ ರವಾನೆಯಾಗದೇ ಕಚೇರಿಯಲ್ಲೇ ಉಳಿದಿದೆ. ಅದರಲ್ಲಿ 5 ಪಾಸ್ಪೋರ್ಟ್, ಒಂದು ಲ್ಯಾಪ್ಟಾಪ್, 400 ಗ್ರಾಂ ಎಂಡಿಎಂಎ ಡ್ರಗ್ ಹಾಗೂ ಕೆಲವು ಬ್ಯಾಂಕ್ ದಾಖಲೆಗಳು ಹಾಗೂ ಮೂರೂವರೆ ಕೆ.ಜಿ. ಬಟ್ಟೆ ಇದೆ ಎಂದು ಆಕೆ ತಿಳಿಸಿದ್ದರು. ಆ ಪಾರ್ಸೆಲ್ ತನ್ನದಲ್ಲ ಎಂದರೂ ಕೇಳಲಿಲ್ಲ.
ಕಸ್ಟಮ್ಸ್ ಅಧಿಕಾರಿಗಳು ನಿಮ್ಮನ್ನು ಬಂಧಿಸುತ್ತಾರೆ ಎಂದು ಹೇಳಿ ಯಾಮಾರಿಸಿದ್ದಾರೆ ಎಂದು ವ್ಯಕ್ತಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ಸೆ.24ರಂದು ಬೆಳಗ್ಗೆ 9ರಿಂದ ವಿಡಿಯೋ ಕಾಲ್ ಮೂಲಕ ವಿಚಾರಣೆ ನಡೆಸುತ್ತೇವೆ ಎಂದು ಹೇಳಿದ ಕಸ್ಟಮ್ಸ್ ಸೋಗಿನಲ್ಲಿದ್ದ ಅಪರಿಚಿತರು, ನನ್ನನ್ನು ಯಾರ ಜೊತೆಗೂ ಮಾತನಾಡದಂತೆ (ಡಿಜಿಟಲ್ ಅರೆಸ್ಟ್) ನಿರ್ಬಂಧಿಸಿದ್ದರು. ನಿಷೇಧಿತ ಎಂಡಿಎಂಎ ಸಾಗಾಟ ಪ್ರಕರಣದಲ್ಲಿ ಬಂಧನ ಮಾಡಬೇಕಾಗುತ್ತದೆ. ಅಷ್ಟು ದೊಡ್ಡ ಪ್ರಮಾಣದಲ್ಲಿ ಡ್ರಗ್ಸ್ ಸಿಕ್ಕಿದೆ ಎಂದಿದ್ದರು. ಬಂಧನ ಮಾಡದೇ ಇರಬೇಕಾದರೆ ನಾವು ಕೇಳಿದಷ್ಟು ಹಣ ನೀಡುವಂತೆ ಕೇಳಿದ್ದರು. ಮೊದಲು ರು. 37 ಲಕ್ಷ ಪಾವತಿಸಿದ್ದು ಮರುದಿನ ನನ್ನ ಸೊತ್ತುಗಳ ವಿಚಾರಣೆಯನ್ನು ಆಡಿಟರ್ ಒಬ್ಬರು ನಡೆಸುತ್ತಾರೆ ಎಂದು ನಂಬಿಸಿ ಅದಕ್ಕೂ ರೂ. 2.30 ಲಕ್ಷವನ್ನು ಪಡೆದಿದ್ದಾರೆ.
ವಿಚಾರಣೆ ಪೂರ್ಣಗೊಂಡ ಬಳಿಕ ಪಡೆದ ಅಷ್ಟೂ ಹಣವನ್ನು ಸೆ.28 ರಂದು ಮರಳಿಸುವುದಾಗಿ ಭರವಸೆ ನೀಡಿದ್ದರು. ಆದರೆ ನಂತರ ಕರೆ ಮಾಡಿದರೆ ಅವರು ಸ್ವೀಕರಿಸುತ್ತಿಲ್ಲ. ನನಗೆ ಅಪರಿಚಿತರ ಮೋಸ ಮಾಡಿದ್ದಾರೆ ಎಂದು ಹಣ ಕಳಕೊಂಡ ವ್ಯಕ್ತಿ ದೂರು ನೀಡಿದ್ದಾರೆ.
Digital arrest scam in the name of drugs parcel, Mangalore man looses 39 lakhs rs.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am