ಬ್ರೇಕಿಂಗ್ ನ್ಯೂಸ್
10-12-20 10:46 pm Mantesh: Mysore Reporter ಕ್ರೈಂ
ಮೈಸೂರು, ಡಿ.10: ಕಾನೂನು ಪಾಲಿಸಿ, ಜನರಿಗೆ ಕಾನೂನಿನ ಪಾಠ ಹೇಳುವ ಪೊಲೀಸ್ ಅಧಿಕಾರಿಗಳೇ ಪ್ರೇಮ ಮತ್ತು ಕಾಮದಾಟ ಹೆಸರಲ್ಲಿ ಈಗ ಖಾಕಿಯ ಮರ್ಯಾದೆ ತೆಗೆಯುತ್ತಿರುವ ಪ್ರಸಂಗ ಬೆಳಕಿಗೆ ಬಂದಿದೆ. ನೊಂದವರಿಗೆ ನ್ಯಾಯ ಒದಗಿಸಬೇಕಾದ ಮಹಿಳಾ ಪೊಲೀಸ್ ಅಧಿಕಾರಿಯೇ ಈಗ ಸಂತ್ರಸ್ತೆಯಾಗಿ ಹಿರಿಯ ಅಧಿಕಾರಿಗಳ ಬಳಿ ನ್ಯಾಯಕ್ಕಾಗಿ ಮೊರೆ ಹೋಗಿದ್ದಾಳೆ.
ಸಾರ್ವಜನಿಕರಿಗೆ ರಕ್ಷಣೆಗಾಗಿ ಖಾಕಿ ತೊಟ್ಟ ಅಧಿಕಾರಿಯಿಂದಲೇ ಮಹಿಳಾ ಪೊಲೀಸ್ ಅಧಿಕಾರಿ ಮೇಲೆ ಅತ್ಯಾಚಾರ, ವಂಚನೆ, ಕೊಲೆ ಬೆದರಿಕೆ ಆರೋಪ ಕೇಳಿಬಂದಿದೆ. ಮೈಸೂರು ನಗರದ ಎನ್ಆರ್ ಪುರ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ ಆಗಿರುವ ಆನಂದ್ ವಿರುದ್ಧ ಈ ಗಂಭೀರ ಆರೋಪ ಕೇಳಿಬಂದಿದೆ. ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಈತ ತನ್ನ ಕರ್ತವ್ಯ ಮರೆತು, ಸ್ನೇಹಿತೆಯಾಗಿದ್ದ ವಿವಿ ಪುರಂ ಠಾಣೆಯ ಮಹಿಳಾ ಪೊಲೀಸ್ ಸಬ್ಇನ್ಸ್ಪೆಕ್ಟರ್ ಜೊತೆ ಪ್ರೇಮ್ ಕಹಾನಿ ಶುರು ಮಾಡಿಕೊಂಡಿದ್ದ. ಈ ಪ್ರೇಮ್ ಕಹಾನಿ ಲವ್ವಿ ಡವ್ವಿ ದೈಹಿಕ ಸಂಪರ್ಕದ ವರೆಗೂ ಬೆಳೆದು ಸ್ವಚ್ಚಂದ ಪ್ರೇಮಿಗಳಂತೆ ಮೈಸೂರು ತುಂಬಾ ವಿಹರಿಸಿದ್ದಾರೆ.

ಆದರೆ, ಮದುವೆ ವಿಚಾರ ಬರುವ ಮುನ್ನವೇ ಮಹಿಳಾ ಅಧಿಕಾರಿ ಗರ್ಭಿಣಿಯಾಗಿದ್ದಳು. ಯುವತಿ ಗರ್ಭಿಣಿಯಾಗಿ ಯಾವಾಗ ಮದುವೆ ಪ್ರಸ್ತಾಪ ಎತ್ತುತ್ತಿದ್ಲೋ ಪ್ರೇಯಸಿ ಅಧಿಕಾರಿಯನ್ನ ಆನಂದ್ ದೂರವಿಡಲು ಶುರು ಮಾಡಿದ್ದಾನೆ. ಅಲ್ಲದೆ, ಗರ್ಭಪಾತ ಮಾಡಿಸಿಕೊಳ್ಳುವಂತೆ ಬೆದರಿಕೆಯನ್ನೂ ಹಾಕಿದ್ದಾನೆ. ಒಪ್ಪದಿದ್ದಾಗ ಹಾರ್ಲಿಕ್ಸ್, ಡ್ರೈಫ್ರೂಟ್ಸ್ನಲ್ಲಿ ಮಾತ್ರೆಗಳನ್ನ ಹಾಕಿ ಬಲವಂತವಾಗಿ ಅಬಾರ್ಷನ್ ಮಾಡಿಸಿದ್ದಾನೆ. ಹೀಗೆಂದು ನೊಂದ ಮಹಿಳಾ ಅಧಿಕಾರಿ ಮೈಸೂರಿನ ವಿಜಯನಗರ ಠಾಣೆಗೆ ದೂರು ನೀಡಿ ನ್ಯಾಯ ಕೇಳಿದ್ದಾರೆ.

ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿರುವ ವಿಜಯನಗರ ಪೊಲೀಸರು ಐಪಿಸಿ ಸೆಕ್ಷನ್ 306, 406, 313, 354, 417, 504, 506 ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಈ ನಡುವೆ ಆನಂದ್, ಬೇರೊಂದು ಯುವತಿಯ ಜೊತೆ ಮದುವೆಗೆ ಸಿದ್ದತೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಸದ್ಯ ಆನಂದ್ ವಿರುದ್ಧ ಕೊಲೆ ಬೆದರಿಕೆ, ವಂಚನೆ, ಅತ್ಯಾಚಾರದ ಗಂಭೀರ ಆರೋಪ ಮಾಡುತ್ತಿರುವ ಮಹಿಳಾ ಎಸ್ಐ ನ್ಯಾಯಕ್ಕಾಗಿ ಹೋರಾಟ ಆರಂಭಿಸಿದ್ದಾರೆ.
ಯುವ ಪೊಲೀಸ್ ಅಧಿಕಾರಿಗಳಿಬ್ಬರ ಪ್ರೇಮದಾಟ ಮೈಸೂರಿನಲ್ಲಿ ಪೊಲೀಸ್ ಇಲಾಖೆಯ ಘನತೆ, ಗೌರವಕ್ಕೆ ಮಸಿ ಬಳಿದಿದೆ. ಪ್ರಕರಣ ಸಂಬಂಧ ಸತ್ಯಾಸತ್ಯತೆಗಳನ್ನ ಅರಿಯಲು ಹಿರಿಯ ಅಧಿಕಾರಿಗಳೇ ಮಧ್ಯ ಪ್ರವೇಶಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
Mysore N R Nagar Police sub-inspector Anand alleged of love sex and dhoka to V V Puram Police station woman Sub Inspector. A case has been registered aginst Anand at Vijayanagar Police Station.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm