ಬ್ರೇಕಿಂಗ್ ನ್ಯೂಸ್
05-10-24 08:26 pm Mangalore Correspondent ಕ್ರೈಂ
ಮಂಗಳೂರು, ಅ.5: ಪಾವೂರು ಉಳಿಯ ದ್ವೀಪದಲ್ಲಿ ಅಕ್ರಮ ಮರಳುಗಾರಿಕೆ ವಿರೋಧಿಸಿ ಹೋರಾಟಕ್ಕೆ ನೇತೃತ್ವ ನೀಡಿದ್ದ ಕೆಥೋಲಿಕ್ ಸಭಾ ಮುಖಂಡ ಆಲ್ವಿನ್ ಡಿಸೋಜ ಅವರ ಮೇಲೆ ಹಲ್ಲೆ ನಡೆಸಲಾಗಿದೆ.
ಆಲ್ವಿನ್ ಡಿಸೋಜ ಅವರು ಯೂಟ್ಯೂಬ್ ಚಾನೆಲ್ಲಿನ ಪತ್ರಕರ್ತರೊಬ್ಬರನ್ನು ಕರೆತಂದು ಅಕ್ರಮ ಮರಳುಗಾರಿಕೆ ಬಗ್ಗೆ ಕವರೇಜ್ ಮಾಡಿಸುತ್ತಿದ್ದರು. ದ್ವೀಪದ ಆಸುಪಾಸಿನಲ್ಲಿ ವಿಡಿಯೋ ಮಾಡಿದ ಬಳಿಕ ಇವರು ಹಿಂತಿರುಗುತ್ತಿದ್ದಾಗ ರಸ್ತೆ ಬದಿಯಲ್ಲಿ ಅಡ್ಡ ಹಾಕಿದ ತಂಡವೊಂದು ಆಲ್ವಿನ್ ಮೇಲೆ ಹಲ್ಲೆ ನಡೆಸಿದೆ. ಹಲ್ಲೆಯಿಂದ ಗಾಯಗೊಂಡ ಆಲ್ವಿನ್ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.



ಆಲ್ವಿನ್ ಡಿಸೋಜ ಮೇಲೆ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದವರೇ ಸೇರಿಕೊಂಡು ಹಲ್ಲೆ ನಡೆಸಿದ್ದಾರೆಂದು ಆರೋಪ ಕೇಳಿಬಂದಿದೆ. ಆಲ್ವಿನ್ ಕೂಡ ಬೇರೆ ಪ್ರದೇಶದಲ್ಲಿ ಮರಳುಗಾರಿಕೆ ನಡೆಸುತ್ತಿದ್ದಾರೆ ಎನ್ನಲಾಗಿದ್ದು ಪಾವೂರು ಉಳಿಯದಲ್ಲಿ ಮರಳುಗಾರಿಕೆ ವಿರೋಧಿಸಿ ಹೋರಾಟ ನಡೆಸುತ್ತಿರುವುದಕ್ಕೆ ಅಲ್ಲಿನ ದಂಧೆಕೋರರು ಆಕ್ಷೇಪಿಸಿದ್ದಾರೆ. ನೀನು ಬೇರೆ ಕಡೆ ಮಾಡ್ತೀಯಲ್ಲಾ.. ಇಲ್ಲಿ ಯಾಕೆ ವಿರೋಧ ಮಾಡ್ತೀಯಾ ಎಂದು ಪ್ರಶ್ನೆ ಮಾಡಿ ಹಲ್ಲೆ ನಡೆಸಿದ್ದಾರೆ. ಒಂದು ದಿನದ ಹಿಂದೆ ನೇತ್ರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಬೋಟುಗಳನ್ನು ಗಣಿ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದಿದ್ದರು.
ಪಾವೂರು ಉಳಿಯ ದ್ವೀಪದ ಸುತ್ತ ಮಣ್ಣನ್ನು ಅಗೆದು ಮರಳುಗಾರಿಕೆ ನಡೆಸಲಾಗುತ್ತಿದ್ದು ಇದರಿಂದ ದ್ವೀಪದ ಅಸ್ತಿತ್ವಕ್ಕೆ ತೊಂದರೆಯಾಗಿದೆ. ದ್ವೀಪದ ವ್ಯಾಪ್ತಿ ಕಿರಿದಾಗಿದ್ದು ಇದನ್ನು ವಿರೋಧಿಸಿ ಕೆಥೋಲಿಕ್ ಸಭಾದಿಂದ ಇತ್ತೀಚೆಗೆ ಬೃಹತ್ ಪ್ರತಿಭಟನೆ ನಡೆದಿತ್ತು. ದ್ವೀಪದಲ್ಲಿ 40ರಷ್ಟು ಕ್ರಿಸ್ತಿಯನ್ ಕುಟುಂಬಗಳು ವಾಸವಿದ್ದು ಇವರ ಗೋಳು ಅರಣ್ಯ ರೋದನವಾಗಿದೆ.
Mangalore Alwyn DSouza president of Catholic Sabha attacked thrashed by illegal sand goons for taking youtube journalist to film the illegal sand mining at Pavoor uliya. Alwyn DSouza was beaten near Adyar by miscreants. A case has been registered at the Kankandy rural police station.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm