ಬ್ರೇಕಿಂಗ್ ನ್ಯೂಸ್
17-10-24 11:03 pm Mangalore Correspondent ಕ್ರೈಂ
ಮಂಗಳೂರು, ಅ.17: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿ ಭಾರೀ ಲಾಭ ಗಳಿಸುವ ಆಸೆಯಿಂದ ವ್ಯಕ್ತಿಯೊಬ್ಬ ರು ಅಪರಿಚಿತ ವ್ಯಕ್ತಿಗಳ ಮಾತನ್ನು ನಂಬಿ ವಿವಿಧ ಬ್ಯಾಂಕ್ ಖಾತೆಗಳಿಗೆ ಕೋಟಿಗೂ ಹೆಚ್ಚು (ಒಟ್ಟು 1,12,48,240 ರೂ.) ಮೊತ್ತವನ್ನು ವರ್ಗಾಯಿಸಿ ಮೋಸ ಹೋಗಿದ್ದಾರೆ.
ಡೇಟಿಂಗ್ ಆ್ಯಪ್ನಲ್ಲಿ ದೂರುದಾರರಿಗೆ ಲೀನಾ ಜೋಸ್ ಎಂಬವರ ಸಂಪರ್ಕವಾಗಿತ್ತು. ಬಳಿಕ ಟೆಲಿಗ್ರಾಂ ಮೂಲಕ ಚಾಟ್ ಮಾಡತೊಡಗಿದ್ದು ಆಗ ಲೀನಾ ಆಡ್ಮಿರಲ್ ಮಾರ್ಕೆಟ್ ಫೋರೆಕ್ಸ್ ಟ್ರೇಡಿಂಗ್ ನಲ್ಲಿ ಹಣ ಹೂಡಿಕೆ ಮಾಡಿದರೆ ಹಣ ಡಬಲ್ ಆಗುತ್ತೆ ಎಂದು ನಂಬಿಸಿದ್ದು, ಅದರಂತೆ ದೂರುದಾರರು ನಕಲಿ ವೇವ್ ಜಿಪಿಟೆಕ್ಸಾ ಎಂಬ ಆಪ್ ಡೌನ್ಲೋಡ್ ಮಾಡಿ ಲಾಗಿನ್ ಆಗಿದ್ದರು. ಬಳಿಕ 50 ಸಾವಿರ ರೂ. ಮೊತ್ತವನ್ನು ನೆಫ್ಟ್ ಮೂಲಕ ಅದರ ಖಾತೆಗೆ ವರ್ಗಾಯಿಸಿದರು.
ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಬರುತ್ತದೆ ಎಂಬ ಮಾತನ್ನು ನಂಬಿದ ದೂರುದಾರರು ಜುಲೈ 3ರಿಂದ 23ರ ವರೆಗೆ 10 ಲಕ್ಷ ರೂ. ಮೊತ್ತವನ್ನು ಆರೋಪಿಗಳು ಕೊಟ್ಟ ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿದ್ದರು. ನಂತರ ವೇವ್ಜಿಪಿಟೆಕ್ಸಾ ಆಪ್ ಖಾತೆಯಲ್ಲಿ 80 ಲಕ್ಷ ರೂ. ಆಗಿರೋದಾಗಿ ತೋರಿಸಿತ್ತು. ಹಣವನ್ನು ಹಿಂಪಡೆಯಲು ಹೋದಾಗ ಆರೋಪಿಗಳು ಶೇ. 30ರಷ್ಟು ತೆರಿಗೆ ಮೊತ್ತ ಪಾವತಿಸಲು ಸೂಚಿಸಿದ್ದಾರೆ. ಅದರಂತೆ 19,26,560 ರೂ. ಮೊತ್ತವನ್ನು ವಂಚಕರು ಹೇಳಿದ ವಿವಿಧ ಖಾತೆಗಳಿಗೆ ವರ್ಗಾಯಿಸಿದ್ದಾರೆ.
ನಂತರ ಡಾಲರ್ ರೂಪದಲ್ಲಿರುವ ಮೊತ್ತವನ್ನು ಭಾರತೀಯ ರೂಪಾಯಿಗೆ ವರ್ಗಾಯಿಸಲು ಬ್ಯಾಂಕ್ ವಹಿವಾಟು ಶುಲ್ಕ ಶೇ.10 ಪಾವತಿಸಲು ವಂಚಕರು ಸೂಚಿಸಿದ್ದು, ಅದರಂತೆ ದೂರುದಾರರು 7,36,880 ರೂ. ವರ್ಗಾಯಿಸಿದ್ದಾರೆ. ಇಷ್ಟಾದ ಬಳಿಕವೂ 50 ಲಕ್ಷ ರೂ. ಮೊತ್ತ ವರ್ಗಾವಣೆ ಮಾಡಲು ಹೋದಾಗ ಆರೋಪಿಗಳು ಮತ್ತೆ ಮರುಳು ಮಾಡಿದ್ದು ನಮ್ಮ ರಿಸ್ಕ್ ಕಂಟ್ರೋಲ್ ವಿಭಾಗದವರು ಇಷ್ಟು ದೊಡ್ಡ ಮೊತ್ತವನ್ನು ಹಿಂಪಡೆಯುವುದನ್ನೇ ಹೋಲ್ಡ್ ಮಾಡಿದ್ದಾರೆ. ಹಿಂಪಡೆಯಬೇಕಿದ್ದರೆ ಶೇ.50ರಷ್ಟನ್ನು ಠೇವಣಿ ಇರಿಸಬೇಕು ಎಂದು ಸೂಚಿಸಿದ್ದಾರೆ. ಅದರಂತೆ ಮತ್ತೆ ದೂರುದಾರರು 26,84,800 ರೂ. ವರ್ಗಾಯಿಸಿದ್ದಾರೆ. ಇಷ್ಟಾದ ನಂತರವೂ ಆರೋಪಿಗಳು ದೂರುದಾರರಲ್ಲಿ ನಿಮ್ಮ ಕ್ರೆಡಿಟ್ ಸ್ಕೋರ್ ಕಡಿಮೆ ಇದೆ, ಅದು ಏರಿಕೆಯಾಗಬೇಕಾದರೆ ಹಣ ಹಾಕಲು ತಿಳಿಸಿದ್ದಾರೆ. ಈ ರೀತಿ ದೂರುದಾರರು ಒಟ್ಟಾರೆ 1 ಕೋಟಿ ರೂ. ಗೂ ಅಧಿಕ ಮೊತ್ತವನ್ನು ಆನ್ ಲೈನ್ ಮೂಲಕ ಪಾವತಿಸಿದ್ದಾರೆ. ಇಷ್ಟೆಲ್ಲ ಆದ ಬಳಿಕ ವ್ಯಕ್ತಿಗೆ ತಾನು ಮೋಸ ಹೋಗಿರುವ ಅರಿವಾಗಿದೆ. ಮಂಗಳೂರಿನ ಸೆನ್ ಪೊಲೀಸ್ ಠಾಣೆಗೆ ನೀಡಿರುವ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Share market fraud, Mangalore man looses 1 crore to online frauds. A case has been registered at the cyber crime police station
25-03-26 03:25 pm
HK News Staffer
ಹಿಂದು, ಸಿಖ್, ಬೌದ್ಧರಲ್ಲಿ ಮಾತ್ರ ಪರಿಶಿಷ್ಟ ಮೀಸಲು,...
24-03-26 02:55 pm
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
25-03-26 06:15 pm
HK News Staffer
ಟ್ರಂಪ್ ಯುದ್ಧ ವಿರಾಮ ನಡುವೆಯೂ ಇಸ್ರೇಲ್ ದಾಳಿ ಮುಂದು...
24-03-26 04:43 pm
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
25-03-26 05:23 pm
HK News Staffer
ಟೋಲ್ ಪ್ಲಾಜಾಗಳ ಮೇಲ್ಛಾವಣಿಯಲ್ಲಿ ಸೌರ ವಿದ್ಯುತ್ ಘಟಕ...
25-03-26 03:49 pm
ಗುಡ್ಡದಲ್ಲಿ ಹೊಳೆ ಬರುತ್ತಾ? ನಿವೇಶನ ರಹಿತರ ಜಮೀನು ಹ...
25-03-26 12:15 pm
ಹಣಕಾಸು ಮಸೂದೆ ಮೇಲಿನ ಚರ್ಚೆ ; ರಾಷ್ಟ್ರೀಯ ಭದ್ರತೆ,...
24-03-26 09:29 pm
ಟ್ಯಾಕ್ಸಿ ಕಾರುಗಳಿಗೆ ಪ್ಯಾನಿಕ್ ಬಟನ್ ಹಣ ಮಾಡುವ ದಂಧ...
24-03-26 08:29 pm
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm