ಬ್ರೇಕಿಂಗ್ ನ್ಯೂಸ್
12-12-20 10:57 am Mangalore Correspondent ಕ್ರೈಂ
ಬಂಟ್ವಾಳ, ಡಿ.12 : ಮದುವೆ ಹಾಲ್ ಗಳಲ್ಲಿ ಮಹಿಳೆಯರ ಬ್ಯಾಗ್, ಮಕ್ಕಳ ಕತ್ತಿನಿಂದ ಚಿನ್ನಾಭರಣ ಲಪಟಾಯಿಸುವುದನ್ನೇ ಕಾಯಕ ಮಾಡಿಕೊಂಡಿದ್ದ ಆರೋಪದಲ್ಲಿ ಫಾತಿಮಾ ಶಹನಾಝ್ ಎಂಬಾಕೆಯನ್ನು ಬಂಟ್ವಾಳ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಮದುವೆ ಹಾಲ್ ಗಳಲ್ಲಿ ಮಹಿಳೆಯರ ಬ್ಯಾಗ್, ಚಿಕ್ಕ ಮಕ್ಕಳ ಕತ್ತಿನಿಂದ ಚಿನ್ನದ ಸರ ಕಳವಾಗುತ್ತಿರುವ ಬಗ್ಗೆ ಬಿ.ಸಿ.ರೋಡಿನ ಹಾಲ್ ಮಾಲೀಕರೊಬ್ಬರು ಬಂಟ್ವಾಳ ನಗರ ಠಾಣೆಗೆ ದೂರು ನೀಡಿದ್ದರು. ಎರಡು ದಿನಗಳ ಹಿಂದೆ ಪಾಣೆಮಂಗಳೂರಿನ ಆಡಿಟೋರಿಯಂ ಒಂದರಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಹೆಣ್ಣು ಮಗುವನ್ನು ಪುಸಲಾಯಿಸಿ ಕತ್ತಿನಿಂದ ಚಿನ್ನದ ಸರ ಕಸಿಯಲು ಮಹಿಳೆಯೊಬ್ಬಳು ಯತ್ನಿಸಿದಾಗ ಮಗು ಕಿರುಚಿತ್ತು. ತಕ್ಷಣ ಅಲ್ಲಿ ಸೇರಿದ್ದವರು ಮಹಿಳೆಯನ್ನು ಹಿಡಿದು ಬಂಟ್ವಾಳ ನಗರ ಠಾಣೆ ಪೊಲೀಸರಿಗೆ ಒಪ್ಪಿಸಿದ್ದರು. ಬಳಿಕ ಅಪರಾಧ ವಿಭಾಗದ ಎಸ್ ಐ ಕಲೈಮಾರ್ ಮತ್ತವರ ಸಿಬ್ಬಂದಿ ಮಹಿಳೆಯನ್ನು ವಿಚಾರಣೆಗೆ ಒಳಪಡಿಸಿದಾಗ ಹಲವು ಕಡೆ ಈ ಕೃತ್ಯ ನಡೆಸಿರುವುದನ್ನು ಬಾಯಿಬಿಟ್ಟಿದ್ದಾಳೆ.
ಕಳವುಗೈದ ಚಿನ್ನಾಭರಣ ಕರಗಿಸಿ ಹೊಸ ರೂಪ ನೀಡಿದ್ದ ಸುಮಾರು 234 ಗ್ರಾಂ ಚಿನ್ನವನ್ನು ಫಾತಿಮಾಳಿಂದ ವಶಕ್ಕೆ ಪಡೆಯಲಾಗಿದೆ. ಉಳಿದಂತೆ ಒಂದಷ್ಟು ಚಿನ್ನ ಮಾರಿದ ಹಣವನ್ನು ಬ್ಯಾಂಕ್ ಖಾತೆಯಲ್ಲಿ ಜಮೆ ಮಾಡಿದ್ದು ತಿಳಿದು ಬಂದಿದೆ. 10 ವರ್ಷಗಳಿಂದ ಆಕೆ ಈ ಕೃತ್ಯದಲ್ಲಿ ತೊಡಗಿರುವುದು ಪೊಲೀಸರ ತನಿಖೆ ವೇಳೆ ಬಯಲಾಗಿದೆ. ಆರೋಪಿಯನ್ನು ಕೋರ್ಟ್ ಗೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ದ.ಕ ಜಿಲ್ಲಾ ಎಸ್ಪಿ ಲಕ್ಷ್ಮೀನಾರಾಯಣ ಮಾರ್ಗದರ್ಶನ, ಡಿವೈಎಸ್ಪಿ ವೆಲೆಂಟಿನ್ ಡಿಸೋಜ,ಇನ್ಸ್ ಪೆಕ್ಟರ್ ನಾಗರಾಜ್ ಅವರ ನಿರ್ದೇಶನದಂತೆ ಅಪರಾಧ ವಿಭಾಗದ ಎಸ್ ಐ ಕಲೈಮಾರ್ ಮತ್ತವರ ತಂಡ ಮುಂದಿನ ತನಿಖೆ ನಡೆಸುತ್ತಿದ್ದಾರೆ.
Bantwal town police personnel have arrested a woman who is accused of stealing jewellery from the necks of the children and ornaments from women's handbags at wedding functions.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am