ಬ್ರೇಕಿಂಗ್ ನ್ಯೂಸ್
12-12-20 10:57 am Mangalore Correspondent ಕ್ರೈಂ
ಬಂಟ್ವಾಳ, ಡಿ.12 : ಮದುವೆ ಹಾಲ್ ಗಳಲ್ಲಿ ಮಹಿಳೆಯರ ಬ್ಯಾಗ್, ಮಕ್ಕಳ ಕತ್ತಿನಿಂದ ಚಿನ್ನಾಭರಣ ಲಪಟಾಯಿಸುವುದನ್ನೇ ಕಾಯಕ ಮಾಡಿಕೊಂಡಿದ್ದ ಆರೋಪದಲ್ಲಿ ಫಾತಿಮಾ ಶಹನಾಝ್ ಎಂಬಾಕೆಯನ್ನು ಬಂಟ್ವಾಳ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಮದುವೆ ಹಾಲ್ ಗಳಲ್ಲಿ ಮಹಿಳೆಯರ ಬ್ಯಾಗ್, ಚಿಕ್ಕ ಮಕ್ಕಳ ಕತ್ತಿನಿಂದ ಚಿನ್ನದ ಸರ ಕಳವಾಗುತ್ತಿರುವ ಬಗ್ಗೆ ಬಿ.ಸಿ.ರೋಡಿನ ಹಾಲ್ ಮಾಲೀಕರೊಬ್ಬರು ಬಂಟ್ವಾಳ ನಗರ ಠಾಣೆಗೆ ದೂರು ನೀಡಿದ್ದರು. ಎರಡು ದಿನಗಳ ಹಿಂದೆ ಪಾಣೆಮಂಗಳೂರಿನ ಆಡಿಟೋರಿಯಂ ಒಂದರಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಹೆಣ್ಣು ಮಗುವನ್ನು ಪುಸಲಾಯಿಸಿ ಕತ್ತಿನಿಂದ ಚಿನ್ನದ ಸರ ಕಸಿಯಲು ಮಹಿಳೆಯೊಬ್ಬಳು ಯತ್ನಿಸಿದಾಗ ಮಗು ಕಿರುಚಿತ್ತು. ತಕ್ಷಣ ಅಲ್ಲಿ ಸೇರಿದ್ದವರು ಮಹಿಳೆಯನ್ನು ಹಿಡಿದು ಬಂಟ್ವಾಳ ನಗರ ಠಾಣೆ ಪೊಲೀಸರಿಗೆ ಒಪ್ಪಿಸಿದ್ದರು. ಬಳಿಕ ಅಪರಾಧ ವಿಭಾಗದ ಎಸ್ ಐ ಕಲೈಮಾರ್ ಮತ್ತವರ ಸಿಬ್ಬಂದಿ ಮಹಿಳೆಯನ್ನು ವಿಚಾರಣೆಗೆ ಒಳಪಡಿಸಿದಾಗ ಹಲವು ಕಡೆ ಈ ಕೃತ್ಯ ನಡೆಸಿರುವುದನ್ನು ಬಾಯಿಬಿಟ್ಟಿದ್ದಾಳೆ.
ಕಳವುಗೈದ ಚಿನ್ನಾಭರಣ ಕರಗಿಸಿ ಹೊಸ ರೂಪ ನೀಡಿದ್ದ ಸುಮಾರು 234 ಗ್ರಾಂ ಚಿನ್ನವನ್ನು ಫಾತಿಮಾಳಿಂದ ವಶಕ್ಕೆ ಪಡೆಯಲಾಗಿದೆ. ಉಳಿದಂತೆ ಒಂದಷ್ಟು ಚಿನ್ನ ಮಾರಿದ ಹಣವನ್ನು ಬ್ಯಾಂಕ್ ಖಾತೆಯಲ್ಲಿ ಜಮೆ ಮಾಡಿದ್ದು ತಿಳಿದು ಬಂದಿದೆ. 10 ವರ್ಷಗಳಿಂದ ಆಕೆ ಈ ಕೃತ್ಯದಲ್ಲಿ ತೊಡಗಿರುವುದು ಪೊಲೀಸರ ತನಿಖೆ ವೇಳೆ ಬಯಲಾಗಿದೆ. ಆರೋಪಿಯನ್ನು ಕೋರ್ಟ್ ಗೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ದ.ಕ ಜಿಲ್ಲಾ ಎಸ್ಪಿ ಲಕ್ಷ್ಮೀನಾರಾಯಣ ಮಾರ್ಗದರ್ಶನ, ಡಿವೈಎಸ್ಪಿ ವೆಲೆಂಟಿನ್ ಡಿಸೋಜ,ಇನ್ಸ್ ಪೆಕ್ಟರ್ ನಾಗರಾಜ್ ಅವರ ನಿರ್ದೇಶನದಂತೆ ಅಪರಾಧ ವಿಭಾಗದ ಎಸ್ ಐ ಕಲೈಮಾರ್ ಮತ್ತವರ ತಂಡ ಮುಂದಿನ ತನಿಖೆ ನಡೆಸುತ್ತಿದ್ದಾರೆ.
Bantwal town police personnel have arrested a woman who is accused of stealing jewellery from the necks of the children and ornaments from women's handbags at wedding functions.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm