ಬ್ರೇಕಿಂಗ್ ನ್ಯೂಸ್
25-10-24 06:26 pm Udupi Correspondent ಕ್ರೈಂ
ಉಡುಪಿ, ಅ 25: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರಿನಲ್ಲಿ ಪ್ರಿಯಕರನ ಜೊತೆ ಸೇರಿ ಪತ್ನಿಯೇ ಪತಿಯನ್ನು ಹತ್ಯೆ ಮಾಡಿದ್ದಾಳೆ.
ಪತ್ನಿ ಪ್ರತಿಮಾ ಪತಿ 44 ವರ್ಷದ ಬಾಲಕೃಷ್ಣ ಪೂಜಾರಿಗೆ ಊಟದಲ್ಲಿ ವಿಷ ಬೆರೆಸಿ ಬಳಿಕ ಬೆಡ್ ಶೀಟ್ ನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ. ಈ ಸಂಬಂದ ಪ್ರತಿಮಾ ಹಾಗೂ ಪ್ರಿಯಕರ ದಿಲೀಪ್ ಹೆಗ್ಡೆಯನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಕಳೆದ 25 ದಿನಗಳಿಂದ ಬಾಲಕೃಷ್ಣ ಪೂಜಾರಿ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಆತನಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಮಂಗಳೂರಿನ ವೆನ್ಲಾಕ್ ಆಸ್ಪತ್ರೆ ಬಳಿಕ ಬೆಂಗಳೂರಿನ ನಿಮಾನ್ಸ್, ವಿಕ್ಟೋರಿಯಾ ಆಸ್ಪತ್ರೆಯಲ್ಲೂ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಅ.20ರಂದು ಬಾಲಕೃಷ್ಣ ಮನೆಯಲ್ಲಿ ಸಾವನ್ನಪ್ಪಿದ್ದರು. ಈ ಸಾವಿನ ಬಗ್ಗೆ ಪ್ರತಿಮಾಳ ಸಹೋದರ ಶಂಕೆ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಿದ್ದರು. ಈ ಸಂಬಂಧ ಅಜೆಕಾರು ಠಾಣೆ ಪೊಲೀಸರು ಪ್ರತಿಮಾ ಮತ್ತು ಆಕೆಯ ಪ್ರಿಯಕರನ ದಿಲೀಪ್ ನನ್ನು ವಿಚಾರಣೆಗೆ ಒಳಪಡಿಸಿದ್ದರು. ಈ ವೇಳೆ ಆರೋಪಿಗಳು ಕೊಲೆ ರಹಸ್ಯ ಬಾಯಿಬಿಟ್ಟಿದ್ದಾರೆ.
ಪ್ರತಿಮಾಗೆ ರೀಲ್ಸ್ ಗೀಳು ಹಿಡಿದಿತ್ತು. ಬಲವಂತವಾಗಿ ಪತಿ ಬಾಲಕೃಷ್ಣ ಪೂಜಾರಿ ಜೊತೆ ಪ್ರತಿಮಾ ಹಲವು ರೀಲ್ಸ್ ಗಳನ್ನು ಮಾಡಿದ್ದಾಳೆ. ಈ ರೀಲ್ಸ್ ಗಳನ್ನು ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಳು. ಇದೇ ಇನ್ ಸ್ಟಾಗ್ರಾಂನಲ್ಲಿ ದಿಲೀಪ್ ಹೆಗ್ಡೆ ಮತ್ತು ಪ್ರತಿಮಾ ನಡುವೆ ಪರಿಚವಾಗಿತ್ತು.
ಮದುವೆಯಾಗಿ ಸುಖ ಸಂಸಾರ ಮಾಡುತ್ತಿದ್ದ ದಂಪತಿಗೆ ಅದೊಂದು ಅನೈತಿಕ ಸಂಬಂಧದ ಶುರುವಾಗಿದೆ. ಮನೆಯಲ್ಲಿ ಮನ್ಮಥನಂತಹ ಗಂಡನಿದ್ದರೂ ಮನದರಸಿ ಮಾತ್ರ ಪರ ಪರುಷನಿಗೆ ತನ್ನ ಮನಸ್ಸು ಹಾಗೂ ಮೈಯನ್ನು ಒಪ್ಪಿಸಲು ಮುಂದಾಗಿದ್ದಳು. ಆದರೆ, ತಮ್ಮ ಅನೈತಿಕ ಸಂಬಂಧಕ್ಕೆ ಸ್ವತಃ ತನ್ನ ಪತಿಯೇ ಅಡ್ಡಿಯಾಗುತ್ತಾನೆ ಎಂದು ಆತನನ್ನು ಕೊಲೆ ಮಾಡುವುದಕ್ಕೆ ನಿರ್ಧಾರ ಮಾಡಿದ್ದಾಳೆ. ಹೇಗಾದರೂ ಮಾಡಿ ಗಂಡನನ್ನು ಕೊನೆಗಾಣಿಸಿದರೆ, ಪ್ರಿಯಕರನೊಂದಿಗೆ ಜೀವನಪೂರ್ತಿ ನೆಮ್ಮದಿಯಾಗಿ ಇರಬಹುದು ಎಂದು ಆಲೋಚನೆ ಮಾಡಿದ್ದಾಳೆ.
ಹೆಂಡತಿಯೊಂದಿಗೆ ಸಂಸಾರ ಮಾಡಿಕೊಂಡಿದ್ದ ಬಾಲಕೃಷ್ಣ ಪೂಜಾರಿಗೆ ತನ್ನ ಹೆಂಡತಿ ಪ್ರತಿಮಾ ಮುಹೂರ್ತ ಇಟ್ಟಿದ್ದ ಬಗ್ಗೆ ಒಂಚೂರೂ ಅನುಮಾನ ಬಂದಿಲ್ಲ. ಹೆಂಡತಿ ಐಷಾರಾಮಿಯಾಗಿ ಜೀವನ ಮಾಡುವುದಕ್ಕೆ ಹಾಗೂ ಮಾರ್ಡನ್ ಹೆಣ್ಣುಮಕ್ಕಳಂತೆ ಫ್ಯಾಷನ್ ಮಾಡಲು ಕೂಡ ಅವಕಾಶ ನೀಡಿದ್ದಾನೆ. ಹೆಂಡತಿಯ ಪ್ರತಿಯೊಂದು ಆಸಕ್ತಿ, ಅಭಿರುಚಿಗೆ ಪ್ರೋತ್ಸಾಹ ನೀಡುತ್ತಿದ್ದ ಗಂಡನ ಜೀವವನ್ನೇ ಹೆಂಡತಿ ಕೊನೆಗಾಣಿಸಿದ್ದಾಳೆ.
ಮಾರ್ಡನ್ ಡ್ರೆಸ್ ಹಾಕಿಕೊಂಡು ಹುಡುಗಿಯಂತೆ ಕಾಣುತ್ತಿದ್ದ ಹೆಂಡತಿ ತನ್ನ ಸೌಂದರ್ಯವನ್ನು ತೋರಿಸಲು ಸಾಮಾಜಿಕ ಜಾಲತಾಣದಲ್ಲಿ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಫೋಟೋ ಹಾಗೂ ವಿಡಿಯೋಗಳನ್ನು ಹಂಚಿಕೊಂಡಿದ್ದಾಳೆ. ಮುಂದುವರೆದು ಗಂಡನ ಅನುಮತಿಯೊಂದಿಗೆ ರೀಲ್ಸ್ ಮಾಡಲು ಆರಂಭಿಸಿದ್ದಾಳೆ. ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಹಂಚಿಕೊಂಡ ಪ್ರತಿಮಾಗೆ ಪ್ರಪೋಸ್ ಮಾಡುವವರ ಸಂಖ್ಯೆಯೂ ಹೆಚ್ಚಾಗಿದೆ. ಅದ್ಯಾವಾಗ ಪ್ರೇಮಿಯೊಬ್ಬ ಸಿಕ್ಕಿದನೋ ಆಗ ಗಂಡನ ಮುಂದೆ ಬಂದು 'ಕರಿಮಣಿ ಮಾಲೀಕ ನೀನಲ್ಲ...' ಎಂದು ರೀಲ್ಸ್ ಮಾಡಿದ್ದಾಳೆ. ಆದರೆ, ಗಂಡ ಈ ರೀಲ್ಸ್ನ ಒಳಮರ್ಮವನ್ನು ಅರಿತುಕೊಂಡಿಲ್ಲ. ರೀಲ್ಸ್ಗೋಸ್ಕರ ಹೀಗೆ ಮಾಡಿದ್ದಾಳೆ, ಹೆಂಡತಿಯ ಖುಷಿಯೇ ತನ್ನ ಖುಷಿ ಎಂದು ಗಂಡ ಸುಮ್ಮನಿದ್ದಾನೆ.
ಇದ್ದಕ್ಕಿದ್ದಂತೆ ಮಾರ್ಡನ್ ಬ್ಯೂಟಿ ಪ್ರತಿಮಾಳ ಗಂಡ ಬಾಲಕೃಷ್ಣನಿಗೆ ಅನಾರೋಗ್ಯ ಉಂಟಾಗುತ್ತದೆ. ಕಳೆದ 25 ದಿನಗಳಿಂದ ವಾಂತಿ, ಬೇಧಿ ಶುರುವಾಗಿದ್ದು, ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಗಂಡನಿಗೆ ಕಾಮಾಲೆ ರೋಗವಿದೆ ಎಂದು ಸಂಬಂಧಿಕರಿಗೆ ತಿಳಿಸಿ, ಆತನನ್ನು ಕಾರ್ಕಳದ ಆಸ್ಪತ್ರೆಗೆ ದಾಖಲಿಸುತ್ತಾರೆ. ನಂತರ, ಮಣಿಪಾಲ ಕೆಎಂಸಿ, ಬೆಂಗಳೂರಿನ ನಿಮ್ಹಾನ್ಸ್, ವಿಕ್ಟೋರಿಯಾ ಆಸ್ಪತ್ರೆ, ಮಂಗಳೂರಿನ ವೆಲ್ಲಾಕ್ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ಕೊಡಿಸುತ್ತಾರೆ. ಆದರೆ ಯಾವುದೇ ಆಸ್ಪತ್ರೆಯಲ್ಲಿಯೂ ಬಾಲಕೃಷ್ಣ ಮಾತ್ರ ಚೇತರಿಕೆ ಕಾಣಿಸಿಕೊಳ್ಳಲೇ ಇಲ್ಲ.
ರಾಜ್ಯದ ವಿವಿಧ ಆಸ್ಪತ್ರೆಗಳನ್ನು ಸುತ್ತಿದರೂ ಬಾಲಕೃಷ್ಣ ಮಾತ್ರ ಗುಣಮುಖ ಆಗಲಿಲ್ಲ. ಚಿಕಿತ್ಸೆ ಪಡೆದು ಗುಣಮುಖರಾಗುತ್ತಾರೆ ಎಂದು ಔಷಧಿ ಕೊಟ್ಟರೆ ಅದನ್ನು ಗಂಡನಿಗೆ ಕೊಡುತ್ತಿದ್ದರೋ ಅಥವಾ ಬೇರೆ ಔಷಧಿ ಕೊಟ್ಟು ಗಂಡನನ್ನು ಕೊಲೆ ಮಾಡಬೇಕು ಎಂದುಕೊಂಡಿದ್ದಳೋ ಗೊತ್ತಿಲ್ಲ. ಎಷ್ಟೇ ಚಿಕಿತ್ಸೆ ಕೊಡಿಸಿದರೂ ಗುಣಮುಖ ಆಗದ ಬಾಲಕೃಷ್ಣ ಪೂಜಾರಿ (44) ಅಕ್ಟೋಬರ್ 20ರಂದು ಮೃತಪಟ್ಟಿದ್ದಾರೆ. ಆದರೆ, ಬಾಲಕೃಷ್ಣನ ಸಾವಿನ ಬಗ್ಗೆ ಮನೆಯವರಿಗೆ ಸಂಶಯ ಶುರುವಾಗಿದ್ದು, ಈ ಸಂಬಂಧಪಟ್ಟಂತೆ ಮೃತ ಬಾಲಕೃಷ್ಣ ಸಹೋದರ ರಾಮಕೃಷ್ಣ ಅವರು ಅಜೆಕಾರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಆರೋಗ್ಯಕ್ಕೆ ತುತ್ತಾಗಿದ್ದ ಬಾಲಕೃಷ್ಣ ಏಕಾಏಕಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಪ್ರತಿಮಾ ಮೇಲೆ ದೂರು ದಾಖಲಾಗುತ್ತಿದ್ದಂತೆ ಆಕೆಯ ಸಹೋದರ ಸಂದೀಪನಿಗೂ ಭಾವನ ಸಾವಿನ ಬಗ್ಗೆ ಅನುಮಾನ ಬಂದಿದೆ. ಆಗ ತನ್ನ ಸಹೋದರಿಗೆ ಯಾರೊಂದಿಗಾದರೂ ಅನೈತಿಕ ಸಂಬಂಧ ಇದೆಯೇ ಎಂಬುದರ ಬಗ್ಗೆ ಪತ್ತೆ ಮಾಡಿದಾಗ ಆಕೆಗೆ ದಿಲೀಪ್ ಹೆಗ್ಡೆ ಎಂಬ ಯುವಕನೊಂದಿಗೆ ಅನೈತಿಕ ಸಂಬಂಧ ಇರುವುದು ಕಂಡುಬಂದಿದೆ. ಆಗ ತನ್ನ ಸಹೋದರನ ಮುಂದೆ ತಾನೇ ಗಂಡನನ್ನು ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾಳೆ.
ನನಗೆ ದಿಲೀಪ್ ಹೆಗ್ಡೆ ಬಿಟ್ಟು ಇರಲು ಸಾಧ್ಯವಾಗುತ್ತಿರಲಿಲ್ಲ. ಆದರೆ, ಪ್ರೀತಿಯಿಂದ ನೋಡಿಕೊಳ್ಳುತ್ತಿದ್ದ ಗಂಡನನ್ನು ದೂರ ಮಾಡಲೂ ಕಾರಣ ಇರಲಿಲ್ಲ. ಹೀಗಾಗಿ, ಗಂಡ ಬಾಲಕೃಷ್ಣ ಅನಾರೋಗ್ಯದಿಂದ ಬಳಲುತ್ತಿದ್ದಾಗ ಪ್ರಿಯಕರ ದಿಲೀಪ್ ಹೆಗ್ಡೆಯೊಂದಿಗೆ ಸೇರಿಕೊಂಡು ಬೆಡ್ಶೀಟ್ ಮತ್ತು ದಿಂಬನ್ನು ಮುಖದ ಮೇಲೆ ಒತ್ತಿ ಹಿಡಿದು ಉಸಿರುಗಟ್ಟಿಸಿ ಕೊಲೆ ಮಾಡಿದ್ದೇವೆ ಎಂದು ಸ್ವತಃ ಪ್ರತಿಮಾ ಒಪ್ಪಿಕೊಂಡಿದ್ದಾಳೆ. ಇದಾದ ನಂತರ ಪೊಲೀಸರಿಗೆ ಪ್ರತಿಮಾಳ ಸಹೋದರ ಮಾಹಿತಿ ನೀಡಿದ್ದು, ಕೊಲೆ ಆರೋಪಿಗಳಾದ ಪ್ರತಿಮಾ ಹಾಗೂ ದಿಲೀಪ್ ಹೆಗ್ಡೆಯನ್ನು ಪೊಲೀಸರು ಬಂಧಿಸಿದ್ದಾರೆ.
Karkala Wife and Lover Arrested for Allegedly Killing Husband in Ajekar Udupi. Pratima, and her alleged lover, Dilip from Hergaon, have been arrested for the murder of her husband, Balakrishna, aged 44. The couple is accused of poisoning and suffocating Balakrishna, who died under suspicious circumstances on the morning of April 20.
15-03-25 12:33 pm
HK News Desk
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
Ranya Rao Gold Smuggling, Ips Ramchandra Rao:...
14-03-25 02:20 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 01:47 pm
Mangalore Correspondent
Mangalore Student Missing, ,Kidnap, Hitein Bh...
15-03-25 12:35 pm
Mangalore, VHP, NIA, Illegal Arms: ಕರಾವಳಿಯಲ್ಲ...
14-03-25 10:35 pm
Mohan Gowda, Mangalore: ಬಿ.ಸಿ.ರೋಡಿನಲ್ಲಿ ಮಾ.16...
14-03-25 09:39 pm
Mangalore tulu Artist Vivek Madur death: ಕಲಾ...
14-03-25 11:02 am
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm