ಬ್ರೇಕಿಂಗ್ ನ್ಯೂಸ್
25-10-24 09:36 pm Mangalore Correspondent ಕ್ರೈಂ
ಮಂಗಳೂರು, ಅ.25: ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬ ಯುವತಿಗೆ ಲೈಂಗಿಕ ಕಿರುಕುಳ ನೀಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ ಘಟನೆ ನಡೆದಿದ್ದು ಆರೋಪಿ ವಿರುದ್ದ ಸಂತ್ರಸ್ತ ಯುವತಿ ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾರೆ.
15 ದಿನಗಳ ಹಿಂದೆ ಸ್ನೇಹಿತರ ಬಳಿ ಯುವತಿಯ ನಂಬರ್ ಪಡೆದುಕೊಂಡಿದ್ದ ರಿಯಲ್ ಎಸ್ಟೆಟ್ ಉದ್ಯಮಿ ರಶೀದ್ ಎಂಬಾತ ಯುವತಿಗೆ ಕರೆ ಮಾಡಿ ಕುಶಾಲನಗರದ ಸೈಟ್ ಬಗ್ಗೆ ವಿವರಿಸಿ ಖರೀದಿಸಲು ತಿಳಿಸಿದ್ದ. ಯುವತಿ ಅಲ್ಲಿನ ಸ್ಥಳೀಯ ನಿವಾಸಿ ಆದ ಕಾರಣ ಜಾಗ ಖರೀದಿಸಲು ಒಲವು ತೋರಿದ್ದರು. ಉದ್ಯಮಿ ಜಾಗ ನೋಡಲು ತನ್ನ ಕಾರಿನಲ್ಲೇ ಬಾ, ನಾನೇ ನಿನ್ನನ್ನು ಕರೆದುಕೊಂಡು ಹೋಗುತ್ತೇನೆ ಎಂದು ಹೇಳಿದಾಗ ಯುವತಿ ಒಪ್ಪಿಕೊಂಡಿದ್ದರು. ಹಾಗೆಯೇ ರಾತ್ರಿ 8 ಗಂಟೆ ಸುಮಾರಿಗೆ ಕೊಡಗಿನ ವಿರಾಜಪೇಟೆ ತಲುಪಿದ್ದು ಯುವತಿ ಉಳಿದುಕೊಳ್ಳಲು ಹೋಟೆಲ್ ನಲ್ಲಿ ಎರಡು ರೂಂ ಬುಕ್ ಮಾಡಿದ್ದರು. ಇದನ್ನು ಪ್ರಶ್ನಿಸಿದ ರಶೀದ್ ಒಂದೇ ರೂಮ್ ನಲ್ಲಿ ಇರಬಹುದು ಅಲ್ವಾ.. ಎರಡು ರೂಮ್ ಯಾಕೆ ಬುಕ್ ಮಾಡಿದ್ದು ಎಂದು ಹೇಳಿದಾಗ ಭಯಗೊಂಡ ಯುವತಿ ಅಲ್ಲಿಂದ ತೆರಳಿ ಸಮೀಪದ ತಂಗಿಯ ಮನೆಯಲ್ಲಿ ಉಳಿದುಕೊಂಡಿದ್ದರು.
ಮರುದಿನ ರಶೀದ್ ಕರೆ ಮಾಡಿ 12 ಗಂಟೆಗೆ ಸೈಟ್ ನೋಡಲು ಬಾ ಎಂದಿದ್ದಾನೆ. ನಿನ್ನೆ ಒಂದೇ ರೂಂ ನಲ್ಲಿ ಇರಬಹುದು ಇತ್ತು. ನಾನು ಏನೋ ನಿರೀಕ್ಷೆ ಮಾಡಿದ್ದೆ ಎಂದಾಗ ಯುವತಿ, ನೀವು ಹೀಗೆ ಮಾತಾನಾಡುವುದು ಸರೀ ಅಲ್ಲ. ನೀವು ವಯಸ್ಸಿನಲ್ಲಿ ನನ್ನ ತಂದೆ ಸಮಾನ ಎಂದಾಗ ತಪ್ಪಾಯಿತು ಎಂದು ಹೇಳಿದ್ದನು. ಮತ್ತೆ ಕಾರಿನಲ್ಲಿ ಸೈಟ್ ನೋಡಲು ತೆರಳಿದಾಗ, ದಾರಿ ಮಧ್ಯೆ ಕಾರು ನಿಲ್ಲಿಸಿ 1 ಲಕ್ಷ ನೋಟಿನ ಕಟ್ಟು ತೋರಿಸಿ ನನಗೆ ನೀನು ಬೇಕು, ನೀನು ನನ್ನ ಜೊತೆ ಸಹಕರಿಸಿದರೆ ಈ ಹಣ ನೀಡುತ್ತೇನೆ ಎಂದಾಗ ಯುವತಿ ವಿರೋಧಿಸಿದ್ದಾಳೆ. ಬಳಿಕವೂ ನೀನು ಸಹಕರಿಸಿದರೆ ಕುಶಾಲನಗರದಲ್ಲಿ ಇರುವ ತನ್ನ ಎರಡು ಫ್ಲಾಟ್ ಗಳನ್ನು ನಿನ್ನ ಹೆಸರಿಗೆ ಬರೆದು ಕೊಡುತ್ತೇನೆ ಎಂದು ಆಫರ್ ಮೇಲೆ ಆಫರ್ ಕೊಟ್ಟು ಯುವತಿಯ ಎದೆ, ಮೈಮೇಲೆ ಕೈ ಹಾಕಿದ್ದಾನೆ. ಇದರಿಂದ ಆತಂಕಗೊಂಡ ಯುವತಿ ಬೊಬ್ಬೆ ಹಾಕಿ ಕಾರಿನಿಂದ ಇಳಿದು ತಪ್ಪಿಸಿಕೊಂಡಿದ್ದಾಳೆ.
ಇದೀಗ ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಲೈಂಗಿಕ ಕಿರುಕುಳ ನೀಡಿ, ಹಲ್ಲೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾಗಿ ರಶೀದ್ ವಿರುದ್ಧ ದೂರು ನೀಡಿದ್ದಾರೆ. ರಶೀದ್ ಮಂಗಳೂರಿನಲ್ಲಿ ರಿಯಲ್ ಎಸ್ಟೇಟ್ ನಡೆಸುತ್ತಿದ್ದಾನೆ.
Mangalore builder booked over sexual harrasment case at pandeshwar police station. The builder has been identified as Rashid.
14-03-25 11:11 pm
Bangalore Correspondent
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
Ranya Rao Gold Smuggling, Ips Ramchandra Rao:...
14-03-25 02:20 pm
ಕುದುರೆಮುಖ ರಾಷ್ಟ್ರೀಯ ಅರಣ್ಯಕ್ಕೆ ಬೆಂಕಿ ; ಸ್ಥಳೀಯರ...
13-03-25 02:56 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
14-03-25 10:35 pm
Mangalore Correspondent
Mohan Gowda, Mangalore: ಬಿ.ಸಿ.ರೋಡಿನಲ್ಲಿ ಮಾ.16...
14-03-25 09:39 pm
Mangalore tulu Artist Vivek Madur death: ಕಲಾ...
14-03-25 11:02 am
Mangalore Accident, Kapikad, Murder: ನೆರೆಮನೆ...
13-03-25 09:20 pm
PFI, Mangalore Crime, Police: ಪಿಎಫ್ಐ ಮುಖಂಡರಿಗ...
13-03-25 08:46 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm