ಬ್ರೇಕಿಂಗ್ ನ್ಯೂಸ್
29-10-24 12:38 pm Mangalore Correspondent ಕ್ರೈಂ
ಮಂಗಳೂರು, ಅ.29: ಕಟೀಲು ಬಳಿಯ ಕೊಂಡೆಮೂಲ ಗ್ರಾಮದಲ್ಲಿ ತಾರನಾಥ (45) ಎಂಬ ವ್ಯಕ್ತಿಯೊಬ್ಬರು ಮನೆ ಬಳಿಯ ಗುಡ್ಡದಲ್ಲಿ ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಬಗ್ಗೆ ಮನೆಮಂದಿ ಕೊಲೆ ಶಂಕೆ ವ್ಯಕ್ತಪಡಿಸಿ ಬಜ್ಪೆ ಠಾಣೆಗೆ ದೂರು ನೀಡಿದ್ದಾರೆ.
ತಾರನಾಥ್ ತೀವ್ರ ಕುಡಿತದ ಚಟ ಹೊಂದಿದ್ದು, ಶನಿವಾರ ಸಂಜೆ ಮನೆಯಲ್ಲಿ ಪತ್ನಿ ಜೊತೆಗೆ ಗಲಾಟೆ ಮಾಡಿ ತೆರಳಿದ್ದರು ಎನ್ನಲಾಗಿದೆ. ಅಂದು ರಾತ್ರಿ ವೇಳೆ ಮನೆಗೆ ಮರಳಿರಲಿಲ್ಲ. ಹೀಗಾಗಿ ಮನೆಯ ಮಕ್ಕಳು ಹತ್ತಿರದ ಸಂಬಂಧಿಕರ ಮನೆಗಳಿಗೆ ಫೋನ್ ಮಾಡಿ, ತಂದೆ ಬಂದಿದ್ದಾರೆಯೇ ಎಂದು ವಿಚಾರಿಸಿದ್ದರು. ಮರುದಿನ ಬೆಳಗ್ಗೆ ಮನೆ ಬಳಿಯ ಗುಡ್ಡದಲ್ಲಿ ತಾರನಾಥ ಅವರ ಶವ ಪತ್ತೆಯಾಗಿದ್ದು, ಕುತ್ತಿಗೆ ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದೆ.
ಕುತ್ತಿಗೆಯನ್ನು ಕೇಬಲ್ ವಯರ್ ಮಾದರಿಯ ಹಗ್ಗದಿಂದ ಬಿಗಿದಿರುವಂತೆ ಕಂಡುಬಂದಿದ್ದು, ಹೀಗಾಗಿ ಯಾರೋ ಕೊಲೆ ಮಾಡಿರಬೇಕೆಂದು ಶಂಕಿಸಲಾಗಿದೆ. ಮುನ್ನಾ ದಿನ ಸಂಜೆ 6.30ರ ವೇಳೆಗೆ ಆ ದಾರಿಯಲ್ಲಿ ತೆರಳಿದ್ದನ್ನು ಇವರ ಅಣ್ಣ ನೋಡಿದ್ದರು. ಮರುದಿನ ಇವರ ಶವ ನಾಲಗೆ ಎಳೆದುಕೊಂಡು ಕುತ್ತಿಗೆಯನ್ನು ಕೇಬಲ್ ವಯರಿನಲ್ಲಿ ಬಿಗಿದ ರೀತಿ ಪತ್ತೆಯಾಗಿದೆ. ಈ ಬಗ್ಗೆ ತಾರನಾಥ ಅವರ ಪುತ್ರಿ ಬಜ್ಪೆ ಠಾಣೆಗೆ ದೂರು ನೀಡಿದ್ದು, ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ. ಪೊಲೀಸರು ಆಸುಪಾಸಿನವರನ್ನು ವಿಚಾರಣೆ ನಡೆಸಿದ್ದು, ಕೊಲೆಯೋ, ಆತ್ಮಹತ್ಯೆಯೋ ಎನ್ನುವ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಕುತ್ತಿಗೆ ಬಿಗಿದ ರೀತಿ ಇದ್ದು, ಆತ್ಮಹತ್ಯೆ ಆಗಿರಲಿಕ್ಕಿಲ್ಲ ಎಂದು ಹೇಳಲು ಬರುವುದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
Body of 45 year old man found in mysterious way at Kateel in Mangalore, murder suspected. The deceased has been identified as Taranath.
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
19-08-25 06:59 pm
HK News Desk
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
19-08-25 08:54 pm
Mangalore Correspondent
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
Unidentified Girl Body Found, Dharmasthala, R...
18-08-25 04:07 pm
19-08-25 10:30 pm
Mangalore Correspondent
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm
ಮನೆ ಕಳ್ಳತನ ಪ್ರಕರಣ ; 30 ಗ್ರಾಮ್ ಬಂಗಾರ ಸಹಿತ ಆರೋಪ...
17-08-25 10:07 pm