ಬ್ರೇಕಿಂಗ್ ನ್ಯೂಸ್
29-10-24 12:38 pm Mangalore Correspondent ಕ್ರೈಂ
ಮಂಗಳೂರು, ಅ.29: ಕಟೀಲು ಬಳಿಯ ಕೊಂಡೆಮೂಲ ಗ್ರಾಮದಲ್ಲಿ ತಾರನಾಥ (45) ಎಂಬ ವ್ಯಕ್ತಿಯೊಬ್ಬರು ಮನೆ ಬಳಿಯ ಗುಡ್ಡದಲ್ಲಿ ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಬಗ್ಗೆ ಮನೆಮಂದಿ ಕೊಲೆ ಶಂಕೆ ವ್ಯಕ್ತಪಡಿಸಿ ಬಜ್ಪೆ ಠಾಣೆಗೆ ದೂರು ನೀಡಿದ್ದಾರೆ.
ತಾರನಾಥ್ ತೀವ್ರ ಕುಡಿತದ ಚಟ ಹೊಂದಿದ್ದು, ಶನಿವಾರ ಸಂಜೆ ಮನೆಯಲ್ಲಿ ಪತ್ನಿ ಜೊತೆಗೆ ಗಲಾಟೆ ಮಾಡಿ ತೆರಳಿದ್ದರು ಎನ್ನಲಾಗಿದೆ. ಅಂದು ರಾತ್ರಿ ವೇಳೆ ಮನೆಗೆ ಮರಳಿರಲಿಲ್ಲ. ಹೀಗಾಗಿ ಮನೆಯ ಮಕ್ಕಳು ಹತ್ತಿರದ ಸಂಬಂಧಿಕರ ಮನೆಗಳಿಗೆ ಫೋನ್ ಮಾಡಿ, ತಂದೆ ಬಂದಿದ್ದಾರೆಯೇ ಎಂದು ವಿಚಾರಿಸಿದ್ದರು. ಮರುದಿನ ಬೆಳಗ್ಗೆ ಮನೆ ಬಳಿಯ ಗುಡ್ಡದಲ್ಲಿ ತಾರನಾಥ ಅವರ ಶವ ಪತ್ತೆಯಾಗಿದ್ದು, ಕುತ್ತಿಗೆ ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದೆ.
ಕುತ್ತಿಗೆಯನ್ನು ಕೇಬಲ್ ವಯರ್ ಮಾದರಿಯ ಹಗ್ಗದಿಂದ ಬಿಗಿದಿರುವಂತೆ ಕಂಡುಬಂದಿದ್ದು, ಹೀಗಾಗಿ ಯಾರೋ ಕೊಲೆ ಮಾಡಿರಬೇಕೆಂದು ಶಂಕಿಸಲಾಗಿದೆ. ಮುನ್ನಾ ದಿನ ಸಂಜೆ 6.30ರ ವೇಳೆಗೆ ಆ ದಾರಿಯಲ್ಲಿ ತೆರಳಿದ್ದನ್ನು ಇವರ ಅಣ್ಣ ನೋಡಿದ್ದರು. ಮರುದಿನ ಇವರ ಶವ ನಾಲಗೆ ಎಳೆದುಕೊಂಡು ಕುತ್ತಿಗೆಯನ್ನು ಕೇಬಲ್ ವಯರಿನಲ್ಲಿ ಬಿಗಿದ ರೀತಿ ಪತ್ತೆಯಾಗಿದೆ. ಈ ಬಗ್ಗೆ ತಾರನಾಥ ಅವರ ಪುತ್ರಿ ಬಜ್ಪೆ ಠಾಣೆಗೆ ದೂರು ನೀಡಿದ್ದು, ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ. ಪೊಲೀಸರು ಆಸುಪಾಸಿನವರನ್ನು ವಿಚಾರಣೆ ನಡೆಸಿದ್ದು, ಕೊಲೆಯೋ, ಆತ್ಮಹತ್ಯೆಯೋ ಎನ್ನುವ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಕುತ್ತಿಗೆ ಬಿಗಿದ ರೀತಿ ಇದ್ದು, ಆತ್ಮಹತ್ಯೆ ಆಗಿರಲಿಕ್ಕಿಲ್ಲ ಎಂದು ಹೇಳಲು ಬರುವುದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
Body of 45 year old man found in mysterious way at Kateel in Mangalore, murder suspected. The deceased has been identified as Taranath.
02-02-26 09:52 pm
HK News Desk
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm