ಬ್ರೇಕಿಂಗ್ ನ್ಯೂಸ್
29-10-24 12:38 pm Mangalore Correspondent ಕ್ರೈಂ
ಮಂಗಳೂರು, ಅ.29: ಕಟೀಲು ಬಳಿಯ ಕೊಂಡೆಮೂಲ ಗ್ರಾಮದಲ್ಲಿ ತಾರನಾಥ (45) ಎಂಬ ವ್ಯಕ್ತಿಯೊಬ್ಬರು ಮನೆ ಬಳಿಯ ಗುಡ್ಡದಲ್ಲಿ ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಬಗ್ಗೆ ಮನೆಮಂದಿ ಕೊಲೆ ಶಂಕೆ ವ್ಯಕ್ತಪಡಿಸಿ ಬಜ್ಪೆ ಠಾಣೆಗೆ ದೂರು ನೀಡಿದ್ದಾರೆ.
ತಾರನಾಥ್ ತೀವ್ರ ಕುಡಿತದ ಚಟ ಹೊಂದಿದ್ದು, ಶನಿವಾರ ಸಂಜೆ ಮನೆಯಲ್ಲಿ ಪತ್ನಿ ಜೊತೆಗೆ ಗಲಾಟೆ ಮಾಡಿ ತೆರಳಿದ್ದರು ಎನ್ನಲಾಗಿದೆ. ಅಂದು ರಾತ್ರಿ ವೇಳೆ ಮನೆಗೆ ಮರಳಿರಲಿಲ್ಲ. ಹೀಗಾಗಿ ಮನೆಯ ಮಕ್ಕಳು ಹತ್ತಿರದ ಸಂಬಂಧಿಕರ ಮನೆಗಳಿಗೆ ಫೋನ್ ಮಾಡಿ, ತಂದೆ ಬಂದಿದ್ದಾರೆಯೇ ಎಂದು ವಿಚಾರಿಸಿದ್ದರು. ಮರುದಿನ ಬೆಳಗ್ಗೆ ಮನೆ ಬಳಿಯ ಗುಡ್ಡದಲ್ಲಿ ತಾರನಾಥ ಅವರ ಶವ ಪತ್ತೆಯಾಗಿದ್ದು, ಕುತ್ತಿಗೆ ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದೆ.
ಕುತ್ತಿಗೆಯನ್ನು ಕೇಬಲ್ ವಯರ್ ಮಾದರಿಯ ಹಗ್ಗದಿಂದ ಬಿಗಿದಿರುವಂತೆ ಕಂಡುಬಂದಿದ್ದು, ಹೀಗಾಗಿ ಯಾರೋ ಕೊಲೆ ಮಾಡಿರಬೇಕೆಂದು ಶಂಕಿಸಲಾಗಿದೆ. ಮುನ್ನಾ ದಿನ ಸಂಜೆ 6.30ರ ವೇಳೆಗೆ ಆ ದಾರಿಯಲ್ಲಿ ತೆರಳಿದ್ದನ್ನು ಇವರ ಅಣ್ಣ ನೋಡಿದ್ದರು. ಮರುದಿನ ಇವರ ಶವ ನಾಲಗೆ ಎಳೆದುಕೊಂಡು ಕುತ್ತಿಗೆಯನ್ನು ಕೇಬಲ್ ವಯರಿನಲ್ಲಿ ಬಿಗಿದ ರೀತಿ ಪತ್ತೆಯಾಗಿದೆ. ಈ ಬಗ್ಗೆ ತಾರನಾಥ ಅವರ ಪುತ್ರಿ ಬಜ್ಪೆ ಠಾಣೆಗೆ ದೂರು ನೀಡಿದ್ದು, ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ. ಪೊಲೀಸರು ಆಸುಪಾಸಿನವರನ್ನು ವಿಚಾರಣೆ ನಡೆಸಿದ್ದು, ಕೊಲೆಯೋ, ಆತ್ಮಹತ್ಯೆಯೋ ಎನ್ನುವ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಕುತ್ತಿಗೆ ಬಿಗಿದ ರೀತಿ ಇದ್ದು, ಆತ್ಮಹತ್ಯೆ ಆಗಿರಲಿಕ್ಕಿಲ್ಲ ಎಂದು ಹೇಳಲು ಬರುವುದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
Body of 45 year old man found in mysterious way at Kateel in Mangalore, murder suspected. The deceased has been identified as Taranath.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
15-08-26 04:19 pm
HK News Staffer
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm
Belthangady Couple Suicide, Bangalore: ಬೆಂಗಳೂ...
15-08-26 01:28 pm
ಕೋಟೆಕಾರಿನಲ್ಲಿ ಕಟ್ಟಡದಿಂದ ಬಿದ್ದು ಗಾಯಗೊಂಡ ವಲಸೆ ಕ...
14-08-26 09:09 pm
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm