ಬ್ರೇಕಿಂಗ್ ನ್ಯೂಸ್
29-10-24 01:01 pm Mangalore Correspondent ಕ್ರೈಂ
ಮಂಗಳೂರು, ಅ.29: IIFL Securities Ltd ಕಂಪನಿಯ ಪ್ರತಿನಿಧಿಯೆಂದು ಹೇಳಿಕೊಂಡು ವಾಟ್ಸಪ್ ನಲ್ಲಿ ಪರಿಚಯವಾಗಿದ್ದ ಅಪರಿಚಿತ ವ್ಯಕ್ತಿಯ ಮಾತು ಕೇಳಿ ಮಂಗಳೂರಿನ ವ್ಯಕ್ತಿಯೊಬ್ಬರು ಷೇರು ಮಾರುಕಟ್ಟೆ ಹೆಸರಲ್ಲಿ 43 ಲಕ್ಷ ರೂಪಾಯಿ ಹೂಡಿಕೆ ಮಾಡಿ ಮೋಸ ಹೋಗಿದ್ದು, ಸೈಬರ್ ಠಾಣೆಯಲ್ಲಿ ದೂರು ದಾಖಲಾಗಿದೆ.
IIFL Securities ನಲ್ಲಿ ಹಣ ತೊಡಗಿಸಿದರೆ, ದೊಡ್ಡ ಮಟ್ಟದಲ್ಲಿ ಲಾಭ ಗಳಿಸಬಹುದೆಂದು ನಂಬಿಕೆ ಹುಟ್ಟಿಸಿದ್ದು, ಇದಕ್ಕಾಗಿ ಷೇರು ಮಾರುಕಟ್ಟೆಯ ಲಿಂಕ್ ಗಳನ್ನು ಕಳಿಸಿಕೊಟ್ಟಿದ್ದ. ಇನ್ವೆಸ್ಟ್ ಮೆಂಟ್ಸ್ ಪ್ಲಾನ್ ಬಗ್ಗೆ ಹೇಳಿ ಈ ಲಿಂಕ್ ಮೂಲಕ ಏಪ್ ಡೌನ್ಲೋಡ್ ಮಾಡಿ, ಹಣ ಹೂಡಿಕೆ ಮಾಡುವಂತೆ ಪ್ರೇರೇಪಿಸಿದ್ದು, ಇದರಂತೆ ಮಂಗಳೂರಿನ ವ್ಯಕ್ತಿ ಏಪ್ ಡೌನ್ಲೋಡ್ ಮಾಡಿ ಹಣ ಹೂಡಿಕೆ ಮಾಡಿದ್ದಾರೆ. ಮಂಜು ಪಚಿಸಿಯಾ ಎಂದು ತನ್ನನ್ನು ಪರಿಚಯ ಮಾಡಿಕೊಂಡಿದ್ದ ವ್ಯಕ್ತಿ ಆನಂತರ ಟೆಲಿಗ್ರಾಂ ಏಪ್ ಲಿಂಕ್ ಕಳುಹಿಸಿದ್ದ. ಟೆಲಿಗ್ರಾಂ ಮೂಲಕ ಇಬ್ಬರು ನಿರಂತರ ಸಂಪರ್ಕದಲ್ಲಿದ್ದರು.
ಅಪರಿಚಿತನ ಸೂಚನೆಯಂತೆ, ಸೆ.26ರಿಂದ ಅ.23ರ ವರೆಗೆ ನಿರಂತರವಾಗಿ ಹಣ ಹೂಡಿಕೆ ಮಾಡಿದ್ದಾರೆ. ತನ್ನ ಬರೋಡಾ ಬ್ಯಾಂಕ್ ಖಾತೆಯಿಂದ 22 ಲಕ್ಷ, ಎಸ್ ಬಿಐ ಖಾತೆಯಿಂದ 19.18 ಲಕ್ಷ, ಏಕ್ಸಿಸ್ ಖಾತೆಯಿಂದ 1.50 ಲಕ್ಷ ರೂ. ಹಣವನ್ನು ಐಐಎಫ್ಎಲ್ ಸೆಕ್ಯುರಿಟೀಸ್ ಹೆಸರಲ್ಲಿ ಅಪರಿಚಿತ ವ್ಯಕ್ತಿ ನೀಡಿದ್ದ ಖಾತೆಗಳಿಗೆ ವರ್ಗಾವಣೆ ಮಾಡಿದ್ದರು. ಏಪ್ ನಲ್ಲಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿರುವಂತೆ ತೋರಿಸುತ್ತಿದ್ದುದರಿಂದ ಅಧಿಕೃತ ಷೇರು ವಹಿವಾಟು ಎಂದು ನಂಬಿದ್ದರು. ಆದರೆ, ಹಣವನ್ನು ಹಿಂತೆಗೆಯಲು ಯತ್ನಿಸಿದಾಗ, ಅಪರಿಚಿತ ವ್ಯಕ್ತಿ 25 ಶೇಕಡಾ ಕಮಿಷನ್ ನೀಡುವಂತೆ ಒತ್ತಡ ಹೇರಿದ್ದಾನೆ. ಕೊನೆಗೆ, ಹಣವನ್ನು ಹಿಂತೆಗೆಯಲು ಸಾಧ್ಯವಾಗದೇ ಇದ್ದಾಗ, ತಾನು ಮೋಸ ಹೋಗಿದ್ದೇನೆ ಎಂದು ತಿಳಿದು ಸೈಬರ್ ಠಾಣೆಗೆ ಬಂದು ದೂರು ನೀಡಿದ್ದಾರೆ.
Fake share market group opened in the name of IIFL Securities, Mangalore man looses 43 lakhs for cyber fraud. Case has been registered at the cyber police station in Mangalore
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am