ಬ್ರೇಕಿಂಗ್ ನ್ಯೂಸ್
02-11-24 10:35 pm Udupi Correspondent ಕ್ರೈಂ
ಉಡುಪಿ, ನ.2: ಐಟಿ ಅಧಿಕಾರಿಗಳು ದಾಳಿ ನಡೆಸುತ್ತಾರೆ ಎಂದು ನಂಬಿಸಿ ಮನೆ ಯಜಮಾನಿಯನ್ನು ಕೆಲಸದಾಕೆಯೇ ಯಾಮಾರಿಸಿ, 7.50 ಲಕ್ಷ ರೂ. ನಗದು ಹಾಗೂ 3 ಲಕ್ಷ ಬೆಲೆಬಾಳುವ ಡೈಮಂಡ್ ನಕ್ಲೇಸನ್ನು ತೆಗೆದುಕೊಂಡು ಹೋಗಿ ಮೋಸ ಮಾಡಿರುವ ಘಟನೆ ಮಣಿಪಾಲದಲ್ಲಿ ನಡೆದಿದೆ.
ಶಿವಳ್ಳಿ ಗ್ರಾಮದ ನಿವಾಸಿ ಜ್ಯೂಲಿಯಟ್ ಎಂಬವರು 4 ತಿಂಗಳಿನಿಂದ ಪೆರಂಪಳ್ಳಿಯ ಸುನೀತಾ ಅವರನ್ನು ಮನೆ ಕೆಲಸಕ್ಕೆ ಇಟ್ಟುಕೊಂಡಿದ್ದರು. ಕೆಲಸದಾಕೆ ಬಳಿ ಮನೆಯ ಯಜಮಾನಿ ತನ್ನ ಮತ್ತು ಗಂಡನ ನಡುವೆ ಇದ್ದ ಮನಸ್ತಾಪದ ಬಗ್ಗೆ ಹೇಳಿಕೊಂಡಿದ್ದರು. ಸುನೀತಾ ಅವರು ಜೂಲಿಯೆಟ್ಗೆ ಗಂಡನಿಗೆ ವಿಚ್ಛೇದನ ಕೊಡುವಂತೆ ಸಲಹೆ ನೀಡಿದ್ದರು. ಬೇಸರಗೊಂಡ ಜ್ಯೂಲಿಯೆಟ್ ಮನೆ ಬಿಟ್ಟು ಹೋಗಲು ನಿರ್ಧರಿಸಿದ್ದರು. ಈ ನಡುವೆ, ತಾಯಿಯನ್ನು ಮನೆಗೆ ಬರಲು ಹೇಳಿ ಅ.10ರಂದು ತಾಯಿಯಲ್ಲಿ ಬಟ್ಟೆಬರೆ ಹಾಗೂ ಸ್ವಲ್ಪ ಚಿನ್ನ ಹಾಗೂ ಗಂಡನ ಮನೆಯ ಲಾಕರ್ನಲ್ಲಿ ಇರಿಸಿದ್ದ 10 ಲಕ್ಷ ರೂಪಾಯಿಯಲ್ಲಿ 1 ಲಕ್ಷ ರೂ. ಹಣವನ್ನು ನೀಡಿದ್ದರು.
ಅ.29ರಂದು ಬೆಳಗ್ಗೆ ಜ್ಯೂಲಿಯೆಟ್ ಮನೆಯಲ್ಲಿದ್ದಾಗಲೇ ಸುನೀತಾ ಅವರು ಸ್ಟ್ಯಾನಿ ಎಂಬವರೊಂದಿಗೆ ಮನೆಗೆ ಬಂದು ಐ.ಟಿ. ಅಧಿಕಾರಿಗಳು ಬಂದಿದ್ದಾರೆ. ನಿಮ್ಮ ಮನೆಗೆ ರೈಡ್ ಮಾಡುತ್ತಾರೆ. ಲಾಕರ್ನಲ್ಲಿ ಇದ್ದ ಹಣ ಹಾಗೂ ಒಡವೆಯನ್ನು ತೆಗೆದುಕೊಡಿ, ಇಲ್ಲಾಂದ್ರೆ ಎತ್ಕೊಂಡು ಹೋಗುತ್ತಾರೆ ಎಂದು ಹೇಳಿ ಲಾಕರ್ ಕೀ ಪಡೆದಿದ್ದಾಳೆ. ಬಳಿಕ ಲಾಕರಿನಲ್ಲಿದ್ದ ಹಣದಲ್ಲಿ 1.50 ಲಕ್ಷ ರೂ.ಗಳನ್ನು ಜ್ಯೂಲಿಯೆಟ್ ಅವರ ಬ್ಯಾಗ್ ಗೆ ಹಾಕಿ ಉಳಿದ 7 ಲಕ್ಷ 50 ಸಾವಿರ ರೂ. ಹಾಗೂ 3 ಲಕ್ಷ ಬೆಲೆಬಾಳುವ ಡೈಮಂಡ್ ನೆಕ್ಲೆಸ್ ಅನ್ನು ತನ್ನ ಚೀಲದಲ್ಲಿ ಹಾಕಿಕೊಂಡು, ಸದ್ಯಕ್ಕೆ ಇದು ನನ್ನಲ್ಲಿ ಇರಲಿ, ಆನಂತರ ಕೊಡುತ್ತೇನೆ ಎಂದು ಹೇಳಿ ಒಯ್ದಿದ್ದರು.
ಐ.ಟಿ. ಅಧಿಕಾರಿಗಳು ದಾಳಿ ನಡೆಸುತ್ತಾರೆ ಎಂದು ನಂಬಿಸಿ ಸುನೀತಾ ಹಾಗೂ ಸ್ಟಾನಿ 7.50 ಲಕ್ಷ ರೂ. ನಗದು ಹಾಗೂ 3 ಲಕ್ಷ ಬೆಲೆಬಾಳುವ ಡೈಮಂಡ್ ಸರವನ್ನು ತೆಗೆದುಕೊಂಡು ಹೋಗಿ ಮೋಸ ಮಾಡಿರುವುದಾಗಿ ಜೂಲಿಯೆಟ್ ಪೊಲೀಸ್ ದೂರು ನೀಡಿದ್ದಾರೆ.
A housemaid allegedly made off with Rs 7.5 lac in cash and a diamond necklace valued at Rs 3 lac, deceiving her employer by claiming an impending IT raid at her residence under the jurisdiction of Manipal police station.
29-04-25 10:45 pm
Bangalore Correspondent
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
Praveen Nettaru, Mohsin Shukur, Karwar Police...
29-04-25 01:04 pm
29-04-25 03:45 pm
HK News Desk
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಎದುರೇ ಬಾಂಬ್ ಸ್ಫೋ...
28-04-25 05:53 pm
ಪಾಕ್ ವಿರುದ್ಧ ಯುದ್ದಕ್ಕೆ ಕರೆ ನೀಡಿದ ಕಾಶ್ಮೀರ್ ಸಿಎ...
27-04-25 08:42 pm
Pak, Website Hacked, Indian Army : ಅಲ್ಲಾ ನಮ್ಮ...
27-04-25 07:38 pm
29-04-25 11:00 pm
Mangalore Correspondent
Mangalore, Ullal Nethravathi Bridge: ಉಳ್ಳಾಲ ನ...
29-04-25 05:45 pm
Mangalore, Dr Kalladka Bhat: ಹೆಣ್ಣು ಮಕ್ಕಳು ವ್...
29-04-25 12:40 pm
Vadiraj, Mangalore, B R Ambedkar: ಕಾಂಗ್ರೆಸ್ ಸ...
29-04-25 11:53 am
Highland Hospital Mangalore, FIR, Anti Nation...
29-04-25 11:38 am
29-04-25 09:59 pm
Mangalore Correspondent
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am
Mangalore crime, Murder, Kudupu: ಕುಡುಪು ಬಳಿಯಲ...
27-04-25 10:59 pm