ಬ್ರೇಕಿಂಗ್ ನ್ಯೂಸ್
02-11-24 10:35 pm Udupi Correspondent ಕ್ರೈಂ
ಉಡುಪಿ, ನ.2: ಐಟಿ ಅಧಿಕಾರಿಗಳು ದಾಳಿ ನಡೆಸುತ್ತಾರೆ ಎಂದು ನಂಬಿಸಿ ಮನೆ ಯಜಮಾನಿಯನ್ನು ಕೆಲಸದಾಕೆಯೇ ಯಾಮಾರಿಸಿ, 7.50 ಲಕ್ಷ ರೂ. ನಗದು ಹಾಗೂ 3 ಲಕ್ಷ ಬೆಲೆಬಾಳುವ ಡೈಮಂಡ್ ನಕ್ಲೇಸನ್ನು ತೆಗೆದುಕೊಂಡು ಹೋಗಿ ಮೋಸ ಮಾಡಿರುವ ಘಟನೆ ಮಣಿಪಾಲದಲ್ಲಿ ನಡೆದಿದೆ.
ಶಿವಳ್ಳಿ ಗ್ರಾಮದ ನಿವಾಸಿ ಜ್ಯೂಲಿಯಟ್ ಎಂಬವರು 4 ತಿಂಗಳಿನಿಂದ ಪೆರಂಪಳ್ಳಿಯ ಸುನೀತಾ ಅವರನ್ನು ಮನೆ ಕೆಲಸಕ್ಕೆ ಇಟ್ಟುಕೊಂಡಿದ್ದರು. ಕೆಲಸದಾಕೆ ಬಳಿ ಮನೆಯ ಯಜಮಾನಿ ತನ್ನ ಮತ್ತು ಗಂಡನ ನಡುವೆ ಇದ್ದ ಮನಸ್ತಾಪದ ಬಗ್ಗೆ ಹೇಳಿಕೊಂಡಿದ್ದರು. ಸುನೀತಾ ಅವರು ಜೂಲಿಯೆಟ್ಗೆ ಗಂಡನಿಗೆ ವಿಚ್ಛೇದನ ಕೊಡುವಂತೆ ಸಲಹೆ ನೀಡಿದ್ದರು. ಬೇಸರಗೊಂಡ ಜ್ಯೂಲಿಯೆಟ್ ಮನೆ ಬಿಟ್ಟು ಹೋಗಲು ನಿರ್ಧರಿಸಿದ್ದರು. ಈ ನಡುವೆ, ತಾಯಿಯನ್ನು ಮನೆಗೆ ಬರಲು ಹೇಳಿ ಅ.10ರಂದು ತಾಯಿಯಲ್ಲಿ ಬಟ್ಟೆಬರೆ ಹಾಗೂ ಸ್ವಲ್ಪ ಚಿನ್ನ ಹಾಗೂ ಗಂಡನ ಮನೆಯ ಲಾಕರ್ನಲ್ಲಿ ಇರಿಸಿದ್ದ 10 ಲಕ್ಷ ರೂಪಾಯಿಯಲ್ಲಿ 1 ಲಕ್ಷ ರೂ. ಹಣವನ್ನು ನೀಡಿದ್ದರು.
ಅ.29ರಂದು ಬೆಳಗ್ಗೆ ಜ್ಯೂಲಿಯೆಟ್ ಮನೆಯಲ್ಲಿದ್ದಾಗಲೇ ಸುನೀತಾ ಅವರು ಸ್ಟ್ಯಾನಿ ಎಂಬವರೊಂದಿಗೆ ಮನೆಗೆ ಬಂದು ಐ.ಟಿ. ಅಧಿಕಾರಿಗಳು ಬಂದಿದ್ದಾರೆ. ನಿಮ್ಮ ಮನೆಗೆ ರೈಡ್ ಮಾಡುತ್ತಾರೆ. ಲಾಕರ್ನಲ್ಲಿ ಇದ್ದ ಹಣ ಹಾಗೂ ಒಡವೆಯನ್ನು ತೆಗೆದುಕೊಡಿ, ಇಲ್ಲಾಂದ್ರೆ ಎತ್ಕೊಂಡು ಹೋಗುತ್ತಾರೆ ಎಂದು ಹೇಳಿ ಲಾಕರ್ ಕೀ ಪಡೆದಿದ್ದಾಳೆ. ಬಳಿಕ ಲಾಕರಿನಲ್ಲಿದ್ದ ಹಣದಲ್ಲಿ 1.50 ಲಕ್ಷ ರೂ.ಗಳನ್ನು ಜ್ಯೂಲಿಯೆಟ್ ಅವರ ಬ್ಯಾಗ್ ಗೆ ಹಾಕಿ ಉಳಿದ 7 ಲಕ್ಷ 50 ಸಾವಿರ ರೂ. ಹಾಗೂ 3 ಲಕ್ಷ ಬೆಲೆಬಾಳುವ ಡೈಮಂಡ್ ನೆಕ್ಲೆಸ್ ಅನ್ನು ತನ್ನ ಚೀಲದಲ್ಲಿ ಹಾಕಿಕೊಂಡು, ಸದ್ಯಕ್ಕೆ ಇದು ನನ್ನಲ್ಲಿ ಇರಲಿ, ಆನಂತರ ಕೊಡುತ್ತೇನೆ ಎಂದು ಹೇಳಿ ಒಯ್ದಿದ್ದರು.
ಐ.ಟಿ. ಅಧಿಕಾರಿಗಳು ದಾಳಿ ನಡೆಸುತ್ತಾರೆ ಎಂದು ನಂಬಿಸಿ ಸುನೀತಾ ಹಾಗೂ ಸ್ಟಾನಿ 7.50 ಲಕ್ಷ ರೂ. ನಗದು ಹಾಗೂ 3 ಲಕ್ಷ ಬೆಲೆಬಾಳುವ ಡೈಮಂಡ್ ಸರವನ್ನು ತೆಗೆದುಕೊಂಡು ಹೋಗಿ ಮೋಸ ಮಾಡಿರುವುದಾಗಿ ಜೂಲಿಯೆಟ್ ಪೊಲೀಸ್ ದೂರು ನೀಡಿದ್ದಾರೆ.
A housemaid allegedly made off with Rs 7.5 lac in cash and a diamond necklace valued at Rs 3 lac, deceiving her employer by claiming an impending IT raid at her residence under the jurisdiction of Manipal police station.
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm