ಬ್ರೇಕಿಂಗ್ ನ್ಯೂಸ್
10-11-24 10:53 pm Mangalore Correspondent ಕ್ರೈಂ
ಮಂಗಳೂರು, ನ.10: ಹುಡುಗಿ ಹುಡುಕಿ ಬಂದನೆಂಬ ಕಾರಣಕ್ಕೆ ಮುಸ್ಲಿಂ ಯುವಕನೊಬ್ಬನಿಗೆ ಯುವಕರ ತಂಡವೊಂದು ಕಟ್ಟಿ ಹಾಕಿ ಥಳಿಸಿ ಚಿತ್ರಹಿಂಸೆ ಕೊಟ್ಟು ನೈತಿಕ ಪೊಲೀಸ್ ಗೂಂಡಾಗಿರಿ ಮೆರೆದ ಘಟನೆ ಬಂಟ್ವಾಳ ಗ್ರಾಮಾಂತರ ಠಾಣೆ ವ್ಯಾಪ್ತಿಯ ಕಂಚಿನಡ್ಕ ಪದವಿನಲ್ಲಿ ನಡೆದಿದೆ.
ಮಹಮ್ಮದ್ ಮುಸ್ತಾಫ (21) ಎಂಬ ಯುವಕನಿಗೆ ಕಟ್ಟಿ ಹಾಕಿ ಅರೆಬೆತ್ತಲೆ ಮಾಡಿ ಚಿತ್ರಹಿಂಸೆ ನೀಡಿದ್ದು ಇದರ ವಿಡಿಯೋ ವೈರಲ್ ಆಗಿದೆ. ನ.8ರಂದು ಘಟನೆ ನಡೆದಿದ್ದು ರಾತ್ರಿ ವೇಳೆ ಸ್ಥಳೀಯರು ಗುಂಪು ಸೇರಿ ಹಲ್ಲೆಗೈದಿದ್ದಾರೆ. ಮಹಮ್ಮದ್ ಮುಸ್ತಾಫ ದೂರಿನಂತೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಮ್ಮದ್ ಮುಸ್ತಾಫನಿಗೆ ದೂರದ ಸಂಬಂಧಿಯಾಗಿರುವ ಹುಡುಗಿಯೊಬ್ಬಳು ಕಂಚಿನಡ್ಕ ಪದವಿನ ತನ್ನ ಮನೆಗೆ ಬರಹೇಳಿದ್ದು ಅದರಂತೆ ತೆರಳಿದ್ದ ಯುವಕನಿಗೆ ಸ್ಥಳೀಯ ಯುವಕರು ಸೇರಿ ಕಟ್ಟಿ ಹಾಕಿ ಥಳಿಸಿದ್ದಾರೆ. ಮುಖ, ಕೈಯಲ್ಲಿ ರಕ್ತ ಬರುವಷ್ಟು ಥಳಿಸಿದ್ದು ಆತ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ.
ಗುಂಪು ಹಲ್ಲೆ ನಡೆಸಿದ ಕಂಚಿನಡ್ಕಪದವು ನಿವಾಸಿಗಳಾದ ಮಹಮ್ಮದ್ ಸಫ್ವಾನ್ (25), ಮಹಮ್ಮದ್ ರಿಜ್ವಾನ್ (25), ಇರ್ಫಾನ್ (27), ಅನೀಸ್ ಅಹ್ಮದ್(19), ನಾಸೀರ್ (27) ಮತ್ತು ಶಾಕೀರ್ (18) ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಯುವಕನನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿರುವ ವಿಡಿಯೋ ವೈರಲ್ ಆಗಿದೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯಡಿ ಕಲಂ 115(2), 126(2), 189(2), 190, 191(2), 351 (2), 352, 109, 117 (4) ಸೆಕ್ಷನ್ ಪ್ರಕಾರ ಕೇಸು ದಾಖಲಾಗಿದೆ.
Youth stripped naked, assulted for visiting girls house at night at bengare in Mangalore, Video viral. Mohammed Mustafa, a resident of Bengare in Mangaluru, was reportedly attacked by a mob who tied him to a pole, stripped him half-naked.
02-02-26 08:14 pm
HK News Desk
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm