ಬ್ರೇಕಿಂಗ್ ನ್ಯೂಸ್
10-11-24 10:53 pm Mangalore Correspondent ಕ್ರೈಂ
ಮಂಗಳೂರು, ನ.10: ಹುಡುಗಿ ಹುಡುಕಿ ಬಂದನೆಂಬ ಕಾರಣಕ್ಕೆ ಮುಸ್ಲಿಂ ಯುವಕನೊಬ್ಬನಿಗೆ ಯುವಕರ ತಂಡವೊಂದು ಕಟ್ಟಿ ಹಾಕಿ ಥಳಿಸಿ ಚಿತ್ರಹಿಂಸೆ ಕೊಟ್ಟು ನೈತಿಕ ಪೊಲೀಸ್ ಗೂಂಡಾಗಿರಿ ಮೆರೆದ ಘಟನೆ ಬಂಟ್ವಾಳ ಗ್ರಾಮಾಂತರ ಠಾಣೆ ವ್ಯಾಪ್ತಿಯ ಕಂಚಿನಡ್ಕ ಪದವಿನಲ್ಲಿ ನಡೆದಿದೆ.
ಮಹಮ್ಮದ್ ಮುಸ್ತಾಫ (21) ಎಂಬ ಯುವಕನಿಗೆ ಕಟ್ಟಿ ಹಾಕಿ ಅರೆಬೆತ್ತಲೆ ಮಾಡಿ ಚಿತ್ರಹಿಂಸೆ ನೀಡಿದ್ದು ಇದರ ವಿಡಿಯೋ ವೈರಲ್ ಆಗಿದೆ. ನ.8ರಂದು ಘಟನೆ ನಡೆದಿದ್ದು ರಾತ್ರಿ ವೇಳೆ ಸ್ಥಳೀಯರು ಗುಂಪು ಸೇರಿ ಹಲ್ಲೆಗೈದಿದ್ದಾರೆ. ಮಹಮ್ಮದ್ ಮುಸ್ತಾಫ ದೂರಿನಂತೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಮ್ಮದ್ ಮುಸ್ತಾಫನಿಗೆ ದೂರದ ಸಂಬಂಧಿಯಾಗಿರುವ ಹುಡುಗಿಯೊಬ್ಬಳು ಕಂಚಿನಡ್ಕ ಪದವಿನ ತನ್ನ ಮನೆಗೆ ಬರಹೇಳಿದ್ದು ಅದರಂತೆ ತೆರಳಿದ್ದ ಯುವಕನಿಗೆ ಸ್ಥಳೀಯ ಯುವಕರು ಸೇರಿ ಕಟ್ಟಿ ಹಾಕಿ ಥಳಿಸಿದ್ದಾರೆ. ಮುಖ, ಕೈಯಲ್ಲಿ ರಕ್ತ ಬರುವಷ್ಟು ಥಳಿಸಿದ್ದು ಆತ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ.
ಗುಂಪು ಹಲ್ಲೆ ನಡೆಸಿದ ಕಂಚಿನಡ್ಕಪದವು ನಿವಾಸಿಗಳಾದ ಮಹಮ್ಮದ್ ಸಫ್ವಾನ್ (25), ಮಹಮ್ಮದ್ ರಿಜ್ವಾನ್ (25), ಇರ್ಫಾನ್ (27), ಅನೀಸ್ ಅಹ್ಮದ್(19), ನಾಸೀರ್ (27) ಮತ್ತು ಶಾಕೀರ್ (18) ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಯುವಕನನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿರುವ ವಿಡಿಯೋ ವೈರಲ್ ಆಗಿದೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯಡಿ ಕಲಂ 115(2), 126(2), 189(2), 190, 191(2), 351 (2), 352, 109, 117 (4) ಸೆಕ್ಷನ್ ಪ್ರಕಾರ ಕೇಸು ದಾಖಲಾಗಿದೆ.
Youth stripped naked, assulted for visiting girls house at night at bengare in Mangalore, Video viral. Mohammed Mustafa, a resident of Bengare in Mangaluru, was reportedly attacked by a mob who tied him to a pole, stripped him half-naked.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
17-06-25 11:02 pm
HK News Desk
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
18-06-25 10:24 am
Mangalore Correspondent
Mangalore DC Mullai Muhilan Transferred, Dars...
17-06-25 09:57 pm
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm