ಬ್ರೇಕಿಂಗ್ ನ್ಯೂಸ್
12-11-24 07:02 pm Mangalore Correspondent ಕ್ರೈಂ
ಮಂಗಳೂರು, ನ.12: ಪತ್ನಿ, ಮಗುವನ್ನು ಕೊಂದು ಪತಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಮುಲ್ಕಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಮನೆಯ ಒಳಗಡೆ ಪೊಲೀಸರು ತಪಾಸಣೆ ನಡೆಸಿದ್ದು, ಕಾರ್ತಿಕ್ ಭಟ್ ಮತ್ತು ಪತ್ನಿ ಪ್ರಿಯಾಂಕಳ ಎರಡು ಮೊಬೈಲ್ ಹಾಗೂ ಎರಡು ಚೂರಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಪೊಲೀಸರು ಮನೆಯನ್ನು ಸೀಜ್ ಮಾಡಿದ್ದು, 2-3 ದಿನ ಯಾರು ಕೂಡ ವಾಸ ಇರಬಾರದು ಎಂದು ಸೂಚನೆ ನೀಡಿದ್ದಾರೆ.
ಒಂದೇ ಮನೆಯ ಬೇರೆ ಬೇರೆ ಕೋಣೆಯಲ್ಲಿ ಕಾರ್ತಿಕ್ ಭಟ್ ದಂಪತಿ ಮತ್ತು ಕಾರ್ತಿಕ್ ತಂದೆ ಜನಾರ್ದನ ಭಟ್ ದಂಪತಿ ವಾಸವಿದ್ದರು. ಜನಾರ್ದನ ಭಟ್ ಬೆಳಗ್ಗೆದ್ದು ನೇರವಾಗಿ ಹೊಟೇಲಿಗೆ ಹೋಗುತ್ತಿದ್ದರೆ, ಕಾರ್ತಿಕ್ ಮತ್ತು ಪತ್ನಿ, ಮಗು ಹೊರಗಡೆ ಹೋಗಿಯೇ ಊಟ, ತಿಂಡಿ ಮಾಡುತ್ತಿದ್ದರು. ಇದಲ್ಲದೆ, ಮನೆಯೊಳಗಿನ ಕೋಣೆಯಲ್ಲಿ ನೇತು ಹಾಕಿದ್ದ ಫೋಟೋಗೆ ಮಸಿ ಬಳಿಯಲಾಗಿದೆ. ಕಾರ್ತಿಕ್, ಪತ್ನಿ ಪ್ರಿಯಾಂಕ ಮತ್ತು ಮಗು ಇದ್ದ ಫೋಟೋವನ್ನು ಸ್ವತಃ ಕಾರ್ತಿಕ್ ಸಾಯಲು ಹೋಗುವುದಕ್ಕೂ ಮುನ್ನ ಮಸಿ ಬಳಿದಿದ್ದನೇ ಎಂಬ ಶಂಕೆ ಮೂಡಿದೆ.
ತನಿಖೆ ಸಂದರ್ಭದಲ್ಲಿ ಪೊಲೀಸರು ಸಿಸಿಟಿವಿಗಳನ್ನು ಪರಿಶೀಲನೆ ನಡೆಸಿದ್ದು, ಶುಕ್ರವಾರ ಕೊಲೆ ಕೃತ್ಯದ ಬಳಿಕ ಕಾರ್ತಿಕ್ ಭಟ್ ತನ್ನ ದ್ವಿಚಕ್ರ ವಾಹನವನ್ನು ಮುಲ್ಕಿ ಬಳಿಯ ಕಲ್ಲಾಪು ದೇವಸ್ಥಾನದ ಬಳಿ ಇಟ್ಟು ಹೋಗಿರುವುದು ಸಿಸಿಟಿವಿಯಲ್ಲಿ ದಾಖಲಾಗಿದೆ. ರೈಲು ಹಳಿಯ ಮೇಲೆ ಕೈಗೆ ಬಟ್ಟೆ ಸುತ್ತಿಕೊಂಡು ಹೋಗುವ ದೃಶ್ಯವೂ ಸೆರೆಯಾಗಿದ್ದು ಪೊಲೀಸರು ಈ ನಿಟ್ಟಿನಲ್ಲಿ ತನಿಖೆ ಮುಂದುವರಿಸಿದ್ದಾರೆ. ಇದೇ ವೇಳೆ, ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿ ಪೊಲೀಸರ ಕೈಸೇರಿದ್ದು ಏನಿದೆ ಎನ್ನುವುದು ಗೊತ್ತಾಗಿಲ್ಲ.
ತಲೆತಿರುಗಿ ಆಸ್ಪತ್ರೆ ಸೇರಿದ ತಾಯಿ, ಮಗಳು !
ಈ ನಡುವೆ, ಪ್ರಿಯಾಂಕ ತಾಯಿ ನೀಡಿದ ದೂರಿನಂತೆ ಕಾರ್ತಿಕ್ ಭಟ್ ತಾಯಿ ಶ್ಯಾಮಲಾ ಮತ್ತು ಅಕ್ಕ ಕಣ್ಮಣಿ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಕೇಸು ದಾಖಲಿಸಿದ್ದಾರೆ. ಸೋಮವಾರ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಅಲ್ಲಿಂದ ಜೈಲಿನತ್ತ ಕರೆದೊಯ್ಯುತ್ತಿದ್ದಾಗಲೇ ಶ್ಯಾಮಲಾ ಮತ್ತು ಕಣ್ಮಣಿ ತಲೆತಿರುಗಿದ ರೀತಿ ನೆಲಕ್ಕೆ ಬಿದ್ದಿದ್ದು, ಅಸ್ವಸ್ಥರಾದ ರೀತಿ ನಟಿಸಿದ್ದಾರೆ. ಹೀಗಾಗಿ ಆರೋಪಿಗಳಿಬ್ಬರನ್ನೂ ಮೂಡುಬಿದಿರೆಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.
ಶೋಕಿ ಜೀವನವೇ ಮುಳುವಾಯಿತೇ?
ಸ್ಥಳೀಯರ ಪ್ರಕಾರ, ಮನೆಯಲ್ಲಿ ತಂದೆ- ತಾಯಿ ಜೊತೆಗೆ ಮಾತು ಬಿಟ್ಟಿದ್ದ ಕಾರ್ತಿಕ್ ಭಟ್ ಸ್ನೇಹಿತರ ಬಳಿ ಸಾಕಷ್ಟು ಕೈಸಾಲ ಮಾಡಿಕೊಂಡಿದ್ದ ಎನ್ನಲಾಗುತ್ತಿದೆ. ಆದರೂ, ಶೋಕಿ ಜೀವನ ಮಾಡುತ್ತಿದ್ದ. ದಿನವೂ ಪತ್ನಿ, ಮಗುವಿನ ಜೊತೆಗೆ ಹೊಟೇಲಿಗೆ ತೆರಳಿ ಊಟ, ತಿಂಡಿ ಮಾಡುತ್ತಿದ್ದ. ಸರಿಯಾದ ಕೆಲಸ ಇಲ್ಲದ ಕಾರಣ ಮನೆಯಲ್ಲಿ ತಂದೆ, ತಾಯಿ ಜೊತೆಗೂ ಮಾತು ಬಿಟ್ಟಿದ್ದರಿಂದ ಖರ್ಚಿಗಾಗಿ ಸಾಲ ಮಾಡಿಕೊಂಡಿದ್ದ. ಆದರೂ ಮೊನ್ನೆ ದೀಪಾವಳಿಗೆ ಪತ್ನಿ, ಮಕ್ಕಳ ಜೊತೆಗೆ ಫ್ಲಾಟ್ ಕೆಳಗೆ ಬಂದು ಪಟಾಕಿ ಸಿಡಿಸಿ ಸಂಭ್ರಮಿಸಿದ್ದ. ಇದೇ ವೇಳೆ, ಪತ್ನಿ ಜೊತೆಗೂ ಜಗಳ ಮಾಡಿಕೊಂಡು ಹಣದ ಚಿಂತೆಯ ನಡುವೆ ಅವರು ಮಲಗಿದ್ದಾಗಲೇ ಚೂರಿಯಿಂದ ತಿವಿದು ಕೊಂದಿದ್ದನೇ ಎನ್ನುವ ಶಂಕೆಯಿದೆ.
Mangalore Mulki murde case, both mother and sister of karthik bhat arrested, admitted to hospital. The house of karthik bhat has been seized, two three knifes also have been seized by the police team.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
11-05-26 06:20 pm
HK News Staffer
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm