ಬ್ರೇಕಿಂಗ್ ನ್ಯೂಸ್
17-11-24 09:54 pm Bangalore Correspondent ಕ್ರೈಂ
ಬೆಂಗಳೂರು, ನ 17: ವಿದೇಶಕ್ಕೆ ಮಾದಕದ್ರವ್ಯ ಸಾಗಾಟದ ಪ್ರಕರಣದಲ್ಲಿ ಸಿಲುಕಿರುವಂತೆ ನಂಬಿಸಿ, ಪೊಲೀಸರ ಸೋಗಿನಲ್ಲಿ ಸಹಾಯ ಮಾಡುವುದಾಗಿ ಸಾಫ್ಟ್ವೇರ್ ಉದ್ಯೋಗಿಯೊಬ್ಬರಿಗೆ ವಂಚಿಸಿರುವ ಘಟನೆ ನಗರದಲ್ಲಿ ನಡೆದಿದೆ. 30 ವರ್ಷ ವಯಸ್ಸಿನ ಯುವತಿಯೊಬ್ಬರು ನೀಡಿರುವ ದೂರಿನನ್ವಯ ಮುಂಬೈ ಏರ್ ಕಸ್ಟಮ್ಸ್ ಅಧಿಕಾರಿಗಳ ಹೆಸರಿನಲ್ಲಿ 40.18 ಲಕ್ಷ ರೂ. ವರ್ಗಾಯಿಸಿಕೊಂಡು ವಂಚಿಸಿರುವ ವಂಚಕರ ವಿರುದ್ಧ ಬೆಂಗಳೂರು ಪಶ್ಚಿಮ ವಿಭಾಗದ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನವೆಂಬರ್ 7ರಂದು ಅಪರಿಚಿತ ನಂಬರ್ನಿಂದ ದೂರುದಾರ ಯುವತಿಗೆ ಕರೆ ಮಾಡಿದ್ದ ವಂಚಕನೊಬ್ಬ ತನ್ನನ್ನು ಕೋರಿಯರ್ ಕಂಪನಿಯೊಂದರ ಪ್ರತಿನಿಧಿ ಎಂದು ಪರಿಚಯಿಸಿಕೊಂಡಿದ್ದ. ಬಳಿಕ "ನಿಮ್ಮ ಹೆಸರಿನಲ್ಲಿ ಮುಂಬೈನಿಂದ ಇರಾನ್ಗೆ ಕಳುಹಿಸಿರುವ ಪಾರ್ಸೆಲ್ನಲ್ಲಿ ಎಂಡಿಎಂಎ ಸೇರಿದಂತೆ ಇತರೆ ಮಾದಕ ಪದಾರ್ಥಗಳಿವೆ. ನಿಮ್ಮ ವೈಯಕ್ತಿಕ ದಾಖಲಾತಿಗಳು ಮತ್ತು ಫೋನ್ ನಂಬರ್ ಕೋರಿಯರ್ಗೆ ಲಿಂಕ್ ಆಗಿದೆ. ಈ ಕುರಿತು ನಿಮಗೆ ಏನಾದರೂ ಗೊತ್ತಾ?" ಎಂದು ಕೇಳಿದ್ದಾನೆ. ದೂರುದಾರ ಯುವತಿ ತನಗೆ ಗೊತ್ತಿಲ್ಲ ಎಂದಾಗ "ಮುಂಬೈ ಏರ್ ಕಸ್ಟಮ್ಸ್ ಕಂಟ್ರೋಲ್ ರೂಂಗೆ ಕರೆ ಕನೆಕ್ಟ್ ಮಾಡುತ್ತೇನೆ" ಎಂದು ಮತ್ತೋರ್ವ ವಂಚಕನಿಗೆ ಕರೆಯನ್ನು ವರ್ಗಾಯಿಸಿದ್ದನು.
ಏರ್ ಕಸ್ಟಮ್ಸ್ ಅಧಿಕಾರಿಯ ಸೋಗಿನಲ್ಲಿ ಮಾತನಾಡಿದ ಮತ್ತೋರ್ವ ವಂಚಕ, ದೂರುದಾರಳಿಗೆ ಟೆಲಿಗ್ರಾಂ ಆ್ಯಪ್ ಡೌನ್ಲೋಡ್ ಮಾಡಿಸಿ ವಿಡಿಯೋ ಕರೆ ಮಾಡಿದ್ದಾನೆ. ನಂತರ "ನಾವು 6 ತಿಂಗಳ ಹಿಂದೆ ಬಂಧಿಸಿದ್ದ ಓರ್ವ ಕ್ರಿಮಿನಲ್ ವ್ಯಕ್ತಿ ಸಾರ್ವಜನಿಕರ ದಾಖಲೆಗಳನ್ನು ಪಡೆದು ಕೋರಿಯರ್/ಪಾರ್ಸೆಲ್ ರವಾನೆಗೆ ಬಳಸುತ್ತಿದ್ದ. ನಿಮಗೂ ಸಹ ಹಾಗೆಯೇ ಆಗಿರಬಹುದು. ನಾವು 3 ರೀತಿಯಲ್ಲಿ ತನಿಖೆ ನಡೆಸಿ ನಿಮಗೆ PCC (ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೆಟ್) ಕೊಡುತ್ತೇವೆ" ಎಂದು ನಂಬಿಸಿದ್ದ. ನಂತರ ದೂರುದಾರಳ ವೈಯಕ್ತಿಕ ದಾಖಲೆಗಳು, ಕುಟುಂಬ ಸದಸ್ಯರ ವಿವರ, ಬ್ಯಾಂಕ್ ಖಾತೆಯ ವಿವರಗಳನ್ನು ಪಡೆದುಕೊಂಡು, "ನಿಮ್ಮ ಖಾತೆಯಲ್ಲಿರುವ ಹಣವನ್ನು ನಾವು ಹೇಳಿದ ಖಾತೆಗೆ ವರ್ಗಾಯಿಸಿ, ಆರ್ಬಿಐನಿಂದ ಪರಿಶೀಲನೆ ನಡೆಸಿ ವಾಪಸ್ ನಿಮ್ಮ ಖಾತೆಗೆ ಮರು ವರ್ಗಾವಣೆ ಮಾಡಲಿದ್ದೇವೆ" ಎಂದು ತಿಳಿಸಿದ್ದ.
ಆರೋಪಿಗಳ ಮಾತು ನಿಜವೆಂದು ನಂಬಿದ್ದ ದೂರುದಾರ ಯುವತಿ ತನ್ನ ಮೂರು ವಿವಿಧ ಬ್ಯಾಂಕ್ ಖಾತೆಗಳಲ್ಲಿದ್ದ ಒಟ್ಟು 40.18 ಲಕ್ಷ ರೂ. ಹಣವನ್ನು ಅವರು ಹೇಳಿದ ಖಾತೆಗಳಿಗೆ ವರ್ಗಾಯಿಸಿದ್ದರು. ತನ್ನ ಖಾತೆಗೆ ಹಣ ಮರು ವರ್ಗಾವಣೆಯಾಗದಿದ್ದಾಗ ತಾನು ವಂಚನೆಗೊಳಗಾಗಿರುವುದು ತಿಳಿದ ಯುವತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿರುವ ಬೆಂಗಳೂರು ಪಶ್ಚಿಮ ವಿಭಾಗದ ಸಿಇಎನ್ ಪೊಲೀಸರು ತನಿಖೆ ಆರಂಭಿಸಿದ್ದು, ಹಣ ಜಮೆಯಾದ ಖಾತೆಗಳ ವಿವರಗಳನ್ನು ಕಲೆಹಾಕುತ್ತಿರುವುದಾಗಿ ತಿಳಿಸಿದ್ದಾರೆ.
Bangalore software engineer girl cheated of 40 lakhs in the name of fake police by online fraud. A case has been registered at the CEN Police station in Bangalore
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am