ಬ್ರೇಕಿಂಗ್ ನ್ಯೂಸ್
17-11-24 09:54 pm Bangalore Correspondent ಕ್ರೈಂ
ಬೆಂಗಳೂರು, ನ 17: ವಿದೇಶಕ್ಕೆ ಮಾದಕದ್ರವ್ಯ ಸಾಗಾಟದ ಪ್ರಕರಣದಲ್ಲಿ ಸಿಲುಕಿರುವಂತೆ ನಂಬಿಸಿ, ಪೊಲೀಸರ ಸೋಗಿನಲ್ಲಿ ಸಹಾಯ ಮಾಡುವುದಾಗಿ ಸಾಫ್ಟ್ವೇರ್ ಉದ್ಯೋಗಿಯೊಬ್ಬರಿಗೆ ವಂಚಿಸಿರುವ ಘಟನೆ ನಗರದಲ್ಲಿ ನಡೆದಿದೆ. 30 ವರ್ಷ ವಯಸ್ಸಿನ ಯುವತಿಯೊಬ್ಬರು ನೀಡಿರುವ ದೂರಿನನ್ವಯ ಮುಂಬೈ ಏರ್ ಕಸ್ಟಮ್ಸ್ ಅಧಿಕಾರಿಗಳ ಹೆಸರಿನಲ್ಲಿ 40.18 ಲಕ್ಷ ರೂ. ವರ್ಗಾಯಿಸಿಕೊಂಡು ವಂಚಿಸಿರುವ ವಂಚಕರ ವಿರುದ್ಧ ಬೆಂಗಳೂರು ಪಶ್ಚಿಮ ವಿಭಾಗದ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನವೆಂಬರ್ 7ರಂದು ಅಪರಿಚಿತ ನಂಬರ್ನಿಂದ ದೂರುದಾರ ಯುವತಿಗೆ ಕರೆ ಮಾಡಿದ್ದ ವಂಚಕನೊಬ್ಬ ತನ್ನನ್ನು ಕೋರಿಯರ್ ಕಂಪನಿಯೊಂದರ ಪ್ರತಿನಿಧಿ ಎಂದು ಪರಿಚಯಿಸಿಕೊಂಡಿದ್ದ. ಬಳಿಕ "ನಿಮ್ಮ ಹೆಸರಿನಲ್ಲಿ ಮುಂಬೈನಿಂದ ಇರಾನ್ಗೆ ಕಳುಹಿಸಿರುವ ಪಾರ್ಸೆಲ್ನಲ್ಲಿ ಎಂಡಿಎಂಎ ಸೇರಿದಂತೆ ಇತರೆ ಮಾದಕ ಪದಾರ್ಥಗಳಿವೆ. ನಿಮ್ಮ ವೈಯಕ್ತಿಕ ದಾಖಲಾತಿಗಳು ಮತ್ತು ಫೋನ್ ನಂಬರ್ ಕೋರಿಯರ್ಗೆ ಲಿಂಕ್ ಆಗಿದೆ. ಈ ಕುರಿತು ನಿಮಗೆ ಏನಾದರೂ ಗೊತ್ತಾ?" ಎಂದು ಕೇಳಿದ್ದಾನೆ. ದೂರುದಾರ ಯುವತಿ ತನಗೆ ಗೊತ್ತಿಲ್ಲ ಎಂದಾಗ "ಮುಂಬೈ ಏರ್ ಕಸ್ಟಮ್ಸ್ ಕಂಟ್ರೋಲ್ ರೂಂಗೆ ಕರೆ ಕನೆಕ್ಟ್ ಮಾಡುತ್ತೇನೆ" ಎಂದು ಮತ್ತೋರ್ವ ವಂಚಕನಿಗೆ ಕರೆಯನ್ನು ವರ್ಗಾಯಿಸಿದ್ದನು.
ಏರ್ ಕಸ್ಟಮ್ಸ್ ಅಧಿಕಾರಿಯ ಸೋಗಿನಲ್ಲಿ ಮಾತನಾಡಿದ ಮತ್ತೋರ್ವ ವಂಚಕ, ದೂರುದಾರಳಿಗೆ ಟೆಲಿಗ್ರಾಂ ಆ್ಯಪ್ ಡೌನ್ಲೋಡ್ ಮಾಡಿಸಿ ವಿಡಿಯೋ ಕರೆ ಮಾಡಿದ್ದಾನೆ. ನಂತರ "ನಾವು 6 ತಿಂಗಳ ಹಿಂದೆ ಬಂಧಿಸಿದ್ದ ಓರ್ವ ಕ್ರಿಮಿನಲ್ ವ್ಯಕ್ತಿ ಸಾರ್ವಜನಿಕರ ದಾಖಲೆಗಳನ್ನು ಪಡೆದು ಕೋರಿಯರ್/ಪಾರ್ಸೆಲ್ ರವಾನೆಗೆ ಬಳಸುತ್ತಿದ್ದ. ನಿಮಗೂ ಸಹ ಹಾಗೆಯೇ ಆಗಿರಬಹುದು. ನಾವು 3 ರೀತಿಯಲ್ಲಿ ತನಿಖೆ ನಡೆಸಿ ನಿಮಗೆ PCC (ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೆಟ್) ಕೊಡುತ್ತೇವೆ" ಎಂದು ನಂಬಿಸಿದ್ದ. ನಂತರ ದೂರುದಾರಳ ವೈಯಕ್ತಿಕ ದಾಖಲೆಗಳು, ಕುಟುಂಬ ಸದಸ್ಯರ ವಿವರ, ಬ್ಯಾಂಕ್ ಖಾತೆಯ ವಿವರಗಳನ್ನು ಪಡೆದುಕೊಂಡು, "ನಿಮ್ಮ ಖಾತೆಯಲ್ಲಿರುವ ಹಣವನ್ನು ನಾವು ಹೇಳಿದ ಖಾತೆಗೆ ವರ್ಗಾಯಿಸಿ, ಆರ್ಬಿಐನಿಂದ ಪರಿಶೀಲನೆ ನಡೆಸಿ ವಾಪಸ್ ನಿಮ್ಮ ಖಾತೆಗೆ ಮರು ವರ್ಗಾವಣೆ ಮಾಡಲಿದ್ದೇವೆ" ಎಂದು ತಿಳಿಸಿದ್ದ.
ಆರೋಪಿಗಳ ಮಾತು ನಿಜವೆಂದು ನಂಬಿದ್ದ ದೂರುದಾರ ಯುವತಿ ತನ್ನ ಮೂರು ವಿವಿಧ ಬ್ಯಾಂಕ್ ಖಾತೆಗಳಲ್ಲಿದ್ದ ಒಟ್ಟು 40.18 ಲಕ್ಷ ರೂ. ಹಣವನ್ನು ಅವರು ಹೇಳಿದ ಖಾತೆಗಳಿಗೆ ವರ್ಗಾಯಿಸಿದ್ದರು. ತನ್ನ ಖಾತೆಗೆ ಹಣ ಮರು ವರ್ಗಾವಣೆಯಾಗದಿದ್ದಾಗ ತಾನು ವಂಚನೆಗೊಳಗಾಗಿರುವುದು ತಿಳಿದ ಯುವತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿರುವ ಬೆಂಗಳೂರು ಪಶ್ಚಿಮ ವಿಭಾಗದ ಸಿಇಎನ್ ಪೊಲೀಸರು ತನಿಖೆ ಆರಂಭಿಸಿದ್ದು, ಹಣ ಜಮೆಯಾದ ಖಾತೆಗಳ ವಿವರಗಳನ್ನು ಕಲೆಹಾಕುತ್ತಿರುವುದಾಗಿ ತಿಳಿಸಿದ್ದಾರೆ.
Bangalore software engineer girl cheated of 40 lakhs in the name of fake police by online fraud. A case has been registered at the CEN Police station in Bangalore
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm