ಬ್ರೇಕಿಂಗ್ ನ್ಯೂಸ್
13-12-20 12:40 pm Headline Karnataka News Network ಕ್ರೈಂ
ಮುಂಬೈ, ಡಿಸೆಂಬರ್ 13: ಟಿಆರ್ಪಿ ರೇಟಿಂಗ್ ತಿರುಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಪಬ್ಲಿಕ್ ಟಿವಿಯ ಸಿಇಒ ವಿಕಾಸ್ ಖಾಂಚಂದಾನಿ ಬಂಧಿಸಲಾಗಿದೆ. ವಿಕಾಸ್ ಪ್ರಕರಣದಲ್ಲಿ ಬಂಧಿತರಾಗಿರುವ 13ನೇ ಆರೋಪಿ.
ಭಾನುವಾರ ಮುಂಬೈ ಪೊಲೀಸರು ರಿಪಬ್ಲಿಕ್ ಟಿವಿ ಸಿಇಒ ವಿಕಾಸ್ ಖಾಂಚಂದಾನಿ ಬಂಧಿಸಿದ್ದಾರೆ. ಅಕ್ಟೋಬರ್ 6ರಂದು ಮುಂಬೈ ಪೊಲೀಸರು ರೇಟಿಂಗ್ ತಿರುಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಹಂಸ ರಿಸರ್ಚ್ ಅಧಿಕಾರಿ ನಿತಿನ್ ದೇವೂಕರ್ ನೀಡಿದ ದೂರಿನ ಅನ್ವಯ ಪೊಲೀಸರು ಎಫ್ಐಆರ್ ದಾಖಲು ಮಾಡಿಕೊಂಡಿದ್ದರು. ಒಟ್ಟು 140 ಸಾಕ್ಷಿಗಳನ್ನು ಪೊಲೀಸರು ಇದುವರೆಗೂ ವಿಚಾರಣೆ ಮಾಡಿದ್ದಾರೆ. ಇದೇ ಪ್ರಕರಣದಲ್ಲಿ ವಿಕಾಸ್ ಖಾಂಚಂದಾನಿ ಬಂಧನವಾಗಿದೆ.
ಪ್ರಕರಣದಲ್ಲಿ ವಿಕಾಸ್ ಖಾಂಚಂದಾನಿ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿಯನ್ನು ಸಲ್ಲಿಸಿದ್ದರು. ಸೋಮವಾರ ಅರ್ಜಿಯ ವಿಚಾರಣೆ ನಡೆಯಬೇಕಿತ್ತು. ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಇದು ಮುಂಬಯ ಪೊಲೀಸರು ಶೋಷಣೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಿಪಬ್ಲಿಕ್ ಟಿವಿ ವಿಕಾಸ್ ಖಾಂಚಂದಾನಿ ಬಂಧನ ಪ್ರಶ್ನಿಸಿ ಮುಂಬೈ ಹೈಕೋರ್ಟ್ ರಜೆ ಪೀಠಕ್ಕೆ ಅರ್ಜಿಯನ್ನು ಸಲ್ಲಿಸಲು ಮುಂದಾಗಿದೆ. ಕೆಲವು ದಿನಗಳ ಹಿಂದೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ನಬ್ ಗೋಸ್ವಾಮಿಯನ್ನು ಪೊಲೀಸರು ಬಂಧಿಸಿದ್ದರು. ಟಿಆರ್ಪಿ ರೇಟಿಂಗ್ ತಿರುಚಿದ ಪ್ರಕರಣದಲ್ಲಿ ವಿಕಾಸ್ ಖಾಂಚಂದಾನಿ ಪೊಲೀಸರ ವಿಚಾರಣೆಗೆ ಸಹಕರಿಸಿದ್ದರು. ಸುಮಾರು 100 ಗಂಟೆಗಳ ಕಾಲ ಅವರ ವಿಚಾರಣೆಯನ್ನು ನಡೆಸಲಾಗಿತ್ತು. ಭಾನುವಾರ ಯಾವುದೇ ಕಾನೂನು ಪ್ರಕ್ರಿಯೆಯನ್ನು ಪಾಲಿಸದೆ ಅವರನ್ನು ಬಂಧಿಸಲಾಗಿದೆ ಎಂದು ಆರೋಪಿಸಲಾಗುತ್ತಿದೆ.
Republic TV chief Vikas Khanchandani has been arrested by the Mumbai Police in the fake ratings scam -- the 13th person to be arrested in the case so far.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
19-06-25 10:58 pm
HK News Desk
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
19-06-25 10:08 pm
Mangalore Correspondent
ಜಪ್ಪಿನಮೊಗರು ಕಾರು ಅಪಘಾತಕ್ಕೆ ಮದ್ಯ ಸೇವನೆ, ಅತಿ ವೇ...
19-06-25 07:48 pm
Mangalore Police, Sudheer Kumar Reddy: ಕೋಮು ಸ...
19-06-25 01:05 pm
Udupi Bus Driver: ಅಡ್ಡಾದಿಡ್ಡಿ ಬಸ್ ಚಲಾಯಿಸಿ ರಂಪ...
18-06-25 10:57 pm
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
19-06-25 04:37 pm
Mangalore Correspondent
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm