ಬ್ರೇಕಿಂಗ್ ನ್ಯೂಸ್
24-11-24 04:33 pm Bangalore Correspondent ಕ್ರೈಂ
ಬೆಂಗಳೂರು, ನ 24: ಪ್ರೊಫೆಸರ್ಗೆ ಒಬ್ಬರಿಗೆ ಹನಿಟ್ರ್ಯಾಪ್ ಮಾಡಿ 3 ಕೋಟಿ ರೂ.ವಸೂಲಿ ಮಾಡಿ ಮತ್ತೆ ಹಣಕ್ಕೆ ಬೇಡಿಕೆಯಿಟ್ಟಿದ್ದ ಮಹಿಳೆ ಅಂಡ್ ಗ್ಯಾಂಗ್ ಸೇರಿದಂತೆ ಮೂವರನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಉಡುಪಿ ಮೂಲದ ತಬಸುಂ ಬೇಗಂ (38), ಕಾರ್ಕಳದ ಅಜೀಂ ಉದ್ದೀನ್ (41), ಹಾಗೂ ಅಭಿಷೇಕ್ (33) ಬಂಧಿತರು. ಬೆಂಗಳೂರಿನ 46 ವರ್ಷದ ಪ್ರೊಫೆಸರ್ ಹನಿಟ್ರ್ಯಾಪ್ಗೆ ಒಳಗಾಗಿ ನರಕ ಅನುಭವಿಸಿದವರು
2018ರಲ್ಲಿ ಆರ್.ಟಿ. ನಗರದಲ್ಲಿ ಆರೋಪಿ ತಬಸಂ ಬೇಗಂ ಸಹೋದರ ಅಜೀಂ ಉದ್ದೀನ್ ಮಾಲಿಕತ್ವದ ಜಿಮ್ಗೆ ಪ್ರೊಫೆಸರ್ ಸೇರಿಕೊಂಡಿದ್ದರು. ಆ ವೇಳೆ ತಬುಸಂನ ಪರಿಚಯವಾಗಿತ್ತು. ಇಬ್ಬರ ನಡುವೆ ಆತ್ಮೀಯತೆ ಜೋರಾಗಿತ್ತು. ನಾನು ಹೆಚ್ಚಿನ ವ್ಯಾಸಂಗವನ್ನು ಮಾಡುತ್ತೇನೆ. ಅದಕ್ಕೆ ಹಣಕಾಸಿನ ಸಹಾಯ ಮಾಡುವಂತೆ ಪ್ರೊಫೆಸರ್ ಬಲಿ ಹಣ ಕೇಳಿದ್ಲು. ಇದಕ್ಕೆ ಪ್ರೊಫೆಸರ್ ಸಹಾಯ ಮಾಡುವುದಾಗಿ ಹೇಳಿದ್ದರು. ನಾನು ತಜೀಮ್ ಎಂಬ ಮಗುವನ್ನ ದತ್ತು ಪಡೆದು ಸಾಕುತ್ತಿರುವುದಾಗಿ ತಬಸಂ ಪ್ರೊಫೆಸರ್ ಬಳಿ ಹೇಳಿಕೊಂಡಿದ್ದಾಳೆ.
2018ರ ಅಕ್ಟೋಬರ್ನಲ್ಲಿ ಜಿಮ್ಗೆ ಬರುವುದನ್ನು ಬೇಗಂ ನಿಲ್ಲಿಸಿದಳು. ಈ ಬಗ್ಗೆ ಆಕೆಯ ಅಣ್ಣನ ಬಳಿ ಪ್ರೊಫೆಸರ್ ವಿಚಾರಿಸಿದಾಗ, ತಬಸಂಳನ್ನ ಆಕೆಯ ಪತಿ ಕರೆದುಕೊಂಡು ಹೋಗಿರುವುದಾಗಿ ತಿಳಿಸಿದ್ದ. ಆಕೆಗೆ ಮದುವೆಯಾಗಿ ಮಗು ಇರುವ ವಿಷಯ ತಿಳಿದ ಪ್ರೊಫೆಸರ್, ಆತಂಕಗೊಂಡು ತಬಸಂಗೆ ಕರೆ ಮಾಡಿ ವಿಚಾರಿಸಿ, ಮದುವೆಯಾಗಿ ಮಗು ಇರುವ ವಿಚಾರವನ್ನು ಮರೆಮಾಚಿರುವ ಬಗ್ಗೆ ಪ್ರಶ್ನಿಸಿದ್ದಾರೆ. ಇದರಿಂದಾಗಿ ತಬಸಂ ಆಕ್ರೋಶಗೊಂಡು ಆಕೆಯೊಂದಿಗೆ ಖಾಸಗಿಯಾಗಿ ಇರುವ ಪೋಟೋ ಮತ್ತು ವಿಡಿಯೋಗಳನ್ನು ದೂರುದಾರರಿಗೆ ಕಳುಹಿಸಿ ಇವುಗಳನ್ನು ನಿನ್ನ ಕಚೇರಿಗೆ ಹಾಗೂ ಕುಟುಂಬಸ್ಥರಿಗೆ ಶೇರ್ ಮಾಡಿ ನಿನ್ನ ಮರ್ಯಾದೆ ತೆಗಿತೀನಿ ಎಂದು ಧಮ್ಕಿ ಹಾಕಿದ್ದಾಳೆ. ನಂತರ ಹಣಕ್ಕೆ ಬೇಡಿಕೆ ಇಟ್ಟು ಬ್ಲಾಕ್ ಮೇಲ್ ಮಾಡಲು ಆರಂಭಿಸಿದ್ದಾಳೆ.
ಇನ್ನು 2019ರಲ್ಲಿ ಆಕೆಯ ಸಹೋದರ ಅಜೀಂ ಪ್ರೊಫೆಸರ್ ನಿಂದ ಇದೇ ವಿಚಾರಕ್ಕೆ ಹಣ ಪಡೆದಿದ್ದ. ಈ ನಡುವೆ ಪೊಲೀಸ್ ಸೋಗಿನಲ್ಲಿ ಆರೋಪಿ ಅಭಿಷೇಕ್, ತಬಸಂಪರವಾಗಿ ಆಕೆ ಕೇಳುವಷ್ಟು ಹಣ ಕೊಡದಿದ್ದರೆ ಜೈಲಿಗೆ ಕಳುಹಿಸುವುದಾಗಿ ಬೆದರಿಸಿದ್ದ. ಆತಂಕಗೊಂಡ ದೂರುದಾರರು ಸಾಲಗಳನ್ನು ಮಾಡಿ ಹಂತ ಹಂತವಾಗಿ 3 ಕೋಟಿ ರೂ. ನೀಡಿದ್ದರು. ಪಡೆದಿರುವ ಸಾಲಕ್ಕೆ ಪ್ರತಿ ತಿಂಗಳು 1.25 ಲಕ್ಷ ಇಎಂಐ ಕಟ್ಟುತ್ತಿದ್ದಾರೆ. ಮೂರು ಕೋಟಿ ಹಣ ಲೂಟಿ ಮಾಡಿಯು ಇವರ ಹಣದ ದಾಹ ತೀರಲಿಲ್ಲ. ಆರೋಪಿಗಳು ಮತ್ತೆ ಮತ್ತೆ ಹಣಕ್ಕಾಗಿ ಬೇಡಿಕೆ ಇಟ್ಟು ಹಿಂಸೆ ಮಾಡುತ್ತಿದ್ದರು, ಇದರಿಂದ ಹಿಂಸೆ ತಾಳಲಾರದೆ ಸಿಸಿಬಿ ಪೊಲೀಸರ ಬಳಿ ಹೋಗಿ ದೂರು ನೀಡಿದ್ದರು.
ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿದ್ದ ಸಿಸಿಬಿ ಪೊಲೀಸರು, ಸದ್ಯ ಮೂವರು ಆರೋಪಿಗಳನ್ನು ಬಂಧಿಸಿದ್ದು, ಹೆಚ್ಚಿನ ವಿಚಾರಣೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.
Honeytrap to professor in Bangalore, Udupi lady and gang loot three crores, three arrested. Tabasam Begum from Udupi and two others from karkala have been arrested on this case based on the compaint of the professor.
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 05:09 pm
Mangalore Correspondent
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm