ಬ್ರೇಕಿಂಗ್ ನ್ಯೂಸ್
25-11-24 06:17 pm HK News Desk ಕ್ರೈಂ
ಹುಬ್ಬಳ್ಳಿ, ನ.25: ಮಂಗಳೂರು ಮೂಲದ ಇಬ್ಬರು ದರೋಡೆಕೋರರು ಪೊಲೀಸರಿಗೆ ಹಲ್ಲೆ ನಡೆಸಲೆತ್ನಿಸಿ ಪರಾರಿಯಾಗಲು ನೋಡಿದ್ದು, ಹುಬ್ಬಳ್ಳಿ ಸಿಸಿಬಿ ಪೊಲೀಸರು ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ. ಇಲ್ಲಿಯ ಹಳೇಗಬ್ಬೂರ ಬಳಿ ಆರೋಪಿಗಳನ್ನು ಸ್ಥಳ ಮಹಜರಿಗೆ ಕರೆದೊಯ್ದಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ.
ಮಂಗಳೂರಿನ ಉಳ್ಳಾಲ ಮಾಸ್ತಿಕಟ್ಟೆ ನಿವಾಸಿ ಫಾರೂಕ್ ಸಿ.ಕೆ ಬಾವ ಹಾಗೂ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಭರತ್ ಕುಮಾರ್ ಶೆಟ್ಟಿ ಎಂಬವರನ್ನು ಬಂಧಿಸಿ ಸ್ಥಳ ಮಹಜರಿಗೆ ಒಯ್ದಿದ್ದ ವೇಳೆ ಸಿಸಿಬಿ ಪಿಐ ಮಾರುತಿ ಗುಳ್ಳಾರಿ ಹಾಗೂ ಧಾರವಾಡ ಶಹರ ಠಾಣೆ ಪಿಎಸ್ಐ ಸ್ವಾತಿ ಮುರಾರಿ ಗುಂಡು ಹಾರಿಸಿದ್ದಾರೆ.

ಆರೋಪಿಗಳ ಹಲ್ಲೆಯಿಂದ ಗಾಯಗೊಂಡ ಪಿಎಸ್ಐ ಸ್ವಾತಿ ಮುರಾರಿ, ಸಿಸಿಬಿಯ ಮಹಾಂತೇಶ ಮಾದರ, ಶ್ರೀಕಾಂತ ತಲ್ಲೂರ ಹಾಗೂ ಗಾಯಗೊಂಡ ಆರೋಪಿಗಳನ್ನು ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ನ.8ರಂದು ನಸುಕಿನಲ್ಲಿ 3.30ರ ವೇಳೆಗೆ ಹುಬ್ಬಳ್ಳಿ ರೈಲು ನಿಲ್ದಾಣ ಬಳಿಯಲ್ಲಿ ಸಾಂಗ್ಲಿ ಮೂಲದ ರಾಹುಲ್ ಸುರ್ವೆ ಎಂಬವರು ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ 10-12 ಜನರಿದ್ದ ತಂಡ ಅಡ್ಡಗಟ್ಟಿ 6.50 ಲಕ್ಷ ರೂ. ನಗದು, ಮೊಬೈಲ್ ಹಾಗೂ ಇತರ ವಸ್ತುಗಳನ್ನು ದರೋಡೆಗೈದು ಪರಾರಿಯಾಗಿತ್ತು. ಈ ಕುರಿತು ಹುಬ್ಬಳ್ಳಿ ಶಹರ ಠಾಣೆಯಲ್ಲಿ ದರೋಡೆ ಪ್ರಕರಣ ದಾಖಲಾಗಿತ್ತು. ಆ ಪೈಕಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ತನಿಖೆ ನಡೆಸಲಾಗುತ್ತಿದೆ.
ಈ ಕುರಿತು ಮಾಹಿತಿ ನೀಡಿದ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್, ಪ್ರಕರಣ ತನಿಖೆಗಾಗಿ ಸಿಸಿಬಿ ಪೊಲೀಸರ ತಂಡವನ್ನು ನಿಯೋಜನೆ ಮಾಡಲಾಗಿತ್ತು. ಆರೋಪಿಗಳನ್ನು ಮಂಗಳೂರಿನಲ್ಲಿ ಬಂಧಿಸಿ ಕರೆತಂದಿದ್ದು, ದರೋಡೆ ಘಟನೆ ನಡೆದ ಹಳೇಗಬ್ಬೂರು ಎನ್ನುವ ಸ್ಥಳಕ್ಕೆ ಮಹಜರಿಗೆ ಕರೆದೊಯ್ಯಲಾಗಿತ್ತು. ಈ ವೇಳೆ, ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿ ಪರಾರಿಯಾಗಲು ನೋಡಿದ್ದಕ್ಕೆ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ. ಸಿಬಂದಿಗೂ ಗಾಯವಾಗಿದೆ ಎಂದು ಹೇಳಿದ್ದಾರೆ. ಆರೋಪಿಗಳಿಬ್ಬರ ವಿರುದ್ಧ ರಾಜ್ಯದ ವಿವಿಧ ಠಾಣೆಗಳಲ್ಲಿ ಹಲವಾರು ಕೇಸುಗಳಿವೆ. ಫಾರೂಕ್ ಮೇಲೆ 17ಕ್ಕೂ ಹೆಚ್ಚು ಕೇಸುಗಳಿವೆ ಎಂದವರು ತಿಳಿಸಿದ್ದಾರೆ. ದರೋಡೆ ತಂಡದಲ್ಲಿ ಮಂಗಳೂರು, ಕೇರಳದ ಕಾಸರಗೋಡು ಜಿಲ್ಲೆಯವರು ಇದ್ದಾರೆ ಎಂಬ ಮಾಹಿತಿಯಿದ್ದು ಪತ್ತೆಗಾಗಿ ಹುಬ್ಬಳ್ಳಿ ಪೊಲೀಸರು ಈ ಭಾಗದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
Two suspected robbers were shot at on Sunday when they tried to escape from police as they were taken for a spot inspection, Hubballi-Dharwad Police Commissioner N Shashikumar said. The two alleged robbers Bharath and Farooq from Mangaluru were shot in their leg when they assaulted three police officers including two women police officers, Shashikumar.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm