ಬ್ರೇಕಿಂಗ್ ನ್ಯೂಸ್
26-11-24 03:10 pm Mangalore Correspondent ಕ್ರೈಂ
ಉಳ್ಳಾಲ, ನ.26: ಪಜೀರು ಗ್ರಾಮದ ಕೈಗಾರಿಕಾ ಪ್ರದೇಶದಲ್ಲಿ ನಿಷೇಧಿತ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರನ್ನ ಎಸಿಪಿ ಧನ್ಯ ನಾಯಕ್ ನೇತೃತ್ವದ ಆಂಟಿ ಡ್ರಗ್ ಟೀಮ್ ಕಾರ್ಯಾಚರಣೆ ನಡೆಸಿ ಬಂಧಿಸಿದ್ದು, ಸುಮಾರು ಒಂದೂವರೆ ಲಕ್ಷ ರೂಪಾಯಿ ಮೌಲ್ಯದ ಎಂಡಿಎಂಎ ವಶ ಪಡಿಸಿಕೊಳ್ಳಲಾಗಿದೆ.
ತಲಪಾಡಿಯ ಮರಿಯ ಚರ್ಚ್ ಕಂಪೌಂಡ್ ನಿವಾಸಿ ಗೌತಮ್ (22) , ಕುಂಪಲ ಹನುಮಾನ್ ದೇವಸ್ಥಾನ ಬಳಿಯ ನಿವಾಸಿ ಕಾರ್ತಿಕ್ (27), ತೊಕ್ಕೊಟ್ಟು ಗಣೇಶ ನಗರದ ಗಣೇಶ ಮಂದಿರದ ಬಳಿ ನಿವಾಸಿ ನಿಖಿಲ್ (28) ಬಂಧಿತ ಆರೋಪಿಗಳು. ಸೋಮವಾರ ಕೊಣಾಜೆ ಠಾಣೆ ವ್ಯಾಪ್ತಿಯ ಪಜೀರಿನ ಕೈಗಾರಿಕಾ ನಿರ್ಜನ ಪ್ರದೇಶದಲ್ಲಿ ಆರೋಪಿಗಳು ಕಾರಿನಲ್ಲಿ ಎಂಡಿಎ ಡ್ರಗ್ಸ್ ಮಾರುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದಾರೆ.

ಬಂಧಿತರಿಂದ 1,50,000/- ಅಂದಾಜು ಮೌಲ್ಯದ 50 ಗ್ರಾಂ ತೂಕದ ಎಂಡಿಎಂಎ ಮಾದಕ ವಸ್ತು ಹಾಗೂ ಮಾರಾಟ ಮಾಡಲು ಉಪಯೋಗಿಸಿದ ಬಿಳಿ ಬಣ್ಣದ ಬೆಲೆನೋ ಕಾರು ಮತ್ತು 03 ಮೊಬೈಲ್ ಫೋನ್ಗಳು, ಡಿಜಿಟಲ್ ತೂಕ ಮಾಪನ ಹಾಗೂ ಗಾಜಿನ ನಳಿಕೆಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿದ ಸೊತ್ತಿನ ಒಟ್ಟು ಮೌಲ್ಯ 7,76,980/- ಮೌಲ್ಯ ಆಗಿದೆ. ಆರೋಪಿಗಳ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಅ.ಕ್ರ 138/2024 ಕಲಂ 8(c) 22(c) NDPS act 1985 ರಂತೆ ಪ್ರಕರಣ ದಾಖಲಾಗಿದೆ.
ಮಂಗಳೂರು ದಕ್ಷಿಣ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಧನ್ಯ ಎನ್.ನಾಯಕ್ ನೇತೃತ್ವದಲ್ಲಿ ಕೊಣಾಜೆ ಪೊಲೀಸ್ ಠಾಣೆಯ ನಿರೀಕ್ಷಕರಾದ ರಾಜೇಂದ್ರ,ಬಿ. ಪಿಎಸ್ಸೈ ನಾಗರಾಜ.ಎಸ್, ಮತ್ತು "ಆಂಟಿ ಡ್ರಗ್" ತಂಡದ ಪಿಎಸ್ಐ ಪುನೀತ್ , ಸಿಬ್ಬಂದಿಗಳಾದ ಸಾಜು ನಾಯರ್, ಮಹೇಶ್, ರೇಜಿ ,ಶಿವಕುಮಾರ್, ಅಕ್ಬರ್ ,ರೇಷ್ಮಾ, ರಾಮ ನಾಯಕ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
Acp Dhanya Nayak along with anti drugs team raid, three drug peddlers arrested in Pajir Mangalore. car and drugs worth 1.5 lakhs has been seized
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 04:52 pm
HK News Staffer
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
15-08-26 06:11 pm
HK News Staffer
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm
Belthangady Couple Suicide, Bangalore: ಬೆಂಗಳೂ...
15-08-26 01:28 pm