ಬ್ರೇಕಿಂಗ್ ನ್ಯೂಸ್
14-12-20 12:00 pm Mangalore Correspondent ಕ್ರೈಂ
ಸುಳ್ಯ, ಡಿ.14: ಎಂಟು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಕೊನೆಗೂ ಸುಬ್ರಹ್ಮಣ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರತಿಷ್ಠಿತ ಶಾಲೆಯ ಆಡಳಿತಾಧಿಕಾರಿ ಆಗಿರುವ ದೇವಚಳ್ಳ ಗ್ರಾಮದ ಅನಿಲ್ ಅಂಬೆಕಲ್ಲು ಎಂಬಾತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಡಿ.10ರಂದು ಮಧ್ಯಾಹ್ನ ಮೂರು ಗಂಟೆಗೆ ಘಟನೆ ನಡೆದಿದೆ. ಆರೋಪಿ ಬಾಲಕಿಯ ತಂದೆಯ ಪರಿಚಿತನಾಗಿದ್ದು ಶಾಲೆಯ ಬಳಿ ಬಂದಿದ್ದ ಬಾಲಕಿಗೆ ಸೈಕಲ್ ತೆಗೆಸಿಕೊಡುತ್ತೇನೆಂದು ಹೇಳಿ ಕೊಠಡಿಗೆ ಕರೆದೊಯ್ದು ಅಲ್ಲಿ ಅತ್ಯಾಚಾರ ನಡೆಸಿದ್ದಾನೆ. ಬಾಲಕಿ ಬಳಿಕ ಮನೆಗೆ ಹಿಂತಿರುಗಿದಾಗ, ದೈಹಕವಾಗಿ ಬಳಲಿದಂತೆ ಕಂಡುಬಂದಿದ್ದು ತಾಯಿ ವಿಚಾರಿಸಿದಾಗ ಕೃತ್ಯ ಬೆಳಕಿಗೆ ಬಂದಿತ್ತು.
ಮನೆಯವರು ಈ ಬಗ್ಗೆ ಶಾಲಾಡಳಿತ ಮಂಡಳಿಗೆ ದೂರು ನೀಡಿದ್ದರು ಎನ್ನಲಾಗಿದೆ. ಆದರೆ, ಈ ಬಗ್ಗೆ ಪೊಲೀಸ್ ದೂರು ನೀಡದಂತೆ ಮನವೊಲಿಸಿದ್ದರು ಎನ್ನಲಾಗಿದ್ದು ದೂರು ದಾಖಲಾಗಿರಲಿಲ್ಲ. ಆಡಳಿತಾಧಿಕಾರಿಯನ್ನು ಕೆಲಸದಿಂದ ವಜಾಗೊಳಿಸಲಾಗಿತ್ತು. ಈ ನಡುವೆ, ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಕೃತ್ಯದ ಬಗ್ಗೆ ಹೆಡ್ ಲೈನ್ ಕರ್ನಾಟಕ ಆರೋಪಿ ಹೆಸರು ಹಾಕದೆ ಘಟನೆ ಬಗ್ಗೆ ಸಾರ್ವಜನಿಕರ ಗಮನಸೆಳೆಯುವ ಸುದ್ದಿ ಮಾಡಿತ್ತು.
ಈ ನಡುವೆ, ಸುಳ್ಯ ಬಿಇಓ ಕಚೇರಿಯಿಂದ ಚೈಲ್ಡ್ ಲೈನ್ ಸಂಸ್ಥೆಗೆ ತನಿಖೆ ನಡೆಸುವಂತೆ ಸೂಚಿಸಲಾಗಿತ್ತು. ಚೈಲ್ಡ್ ಲೈನ್ ಸಂಸ್ಥೆಯವರು ಮನೆಗೆ ಬಂದು ಬಾಲಕಿಯ ತಪಾಸಣೆ ನಡೆಸಿ ವರದಿ ನೀಡಿದ್ದಾರೆ. ಅಲ್ಲದೆ, ಬಾಲಕಿ ತಾಯಿ ಬಳಿ ಸುಬ್ರಹ್ಮಣ್ಯ ಠಾಣೆಗೆ ದೂರು ನೀಡಲು ಸೂಚಿಸಿದ್ದಾರೆ. ಅದರಂತೆ, ಸುಬ್ರಹ್ಮಣ್ಯ ಠಾಣೆಯಲ್ಲಿ ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
Police have field a POCSO act against a private school administrator of sullia for sexually harassing a eight-year-old girl in the school.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
01-08-26 02:48 pm
HK News Staffer
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
01-08-26 02:50 pm
HK News Staffer
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm