ಬ್ರೇಕಿಂಗ್ ನ್ಯೂಸ್
14-12-20 12:00 pm Mangalore Correspondent ಕ್ರೈಂ
ಸುಳ್ಯ, ಡಿ.14: ಎಂಟು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಕೊನೆಗೂ ಸುಬ್ರಹ್ಮಣ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರತಿಷ್ಠಿತ ಶಾಲೆಯ ಆಡಳಿತಾಧಿಕಾರಿ ಆಗಿರುವ ದೇವಚಳ್ಳ ಗ್ರಾಮದ ಅನಿಲ್ ಅಂಬೆಕಲ್ಲು ಎಂಬಾತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಡಿ.10ರಂದು ಮಧ್ಯಾಹ್ನ ಮೂರು ಗಂಟೆಗೆ ಘಟನೆ ನಡೆದಿದೆ. ಆರೋಪಿ ಬಾಲಕಿಯ ತಂದೆಯ ಪರಿಚಿತನಾಗಿದ್ದು ಶಾಲೆಯ ಬಳಿ ಬಂದಿದ್ದ ಬಾಲಕಿಗೆ ಸೈಕಲ್ ತೆಗೆಸಿಕೊಡುತ್ತೇನೆಂದು ಹೇಳಿ ಕೊಠಡಿಗೆ ಕರೆದೊಯ್ದು ಅಲ್ಲಿ ಅತ್ಯಾಚಾರ ನಡೆಸಿದ್ದಾನೆ. ಬಾಲಕಿ ಬಳಿಕ ಮನೆಗೆ ಹಿಂತಿರುಗಿದಾಗ, ದೈಹಕವಾಗಿ ಬಳಲಿದಂತೆ ಕಂಡುಬಂದಿದ್ದು ತಾಯಿ ವಿಚಾರಿಸಿದಾಗ ಕೃತ್ಯ ಬೆಳಕಿಗೆ ಬಂದಿತ್ತು.
ಮನೆಯವರು ಈ ಬಗ್ಗೆ ಶಾಲಾಡಳಿತ ಮಂಡಳಿಗೆ ದೂರು ನೀಡಿದ್ದರು ಎನ್ನಲಾಗಿದೆ. ಆದರೆ, ಈ ಬಗ್ಗೆ ಪೊಲೀಸ್ ದೂರು ನೀಡದಂತೆ ಮನವೊಲಿಸಿದ್ದರು ಎನ್ನಲಾಗಿದ್ದು ದೂರು ದಾಖಲಾಗಿರಲಿಲ್ಲ. ಆಡಳಿತಾಧಿಕಾರಿಯನ್ನು ಕೆಲಸದಿಂದ ವಜಾಗೊಳಿಸಲಾಗಿತ್ತು. ಈ ನಡುವೆ, ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಕೃತ್ಯದ ಬಗ್ಗೆ ಹೆಡ್ ಲೈನ್ ಕರ್ನಾಟಕ ಆರೋಪಿ ಹೆಸರು ಹಾಕದೆ ಘಟನೆ ಬಗ್ಗೆ ಸಾರ್ವಜನಿಕರ ಗಮನಸೆಳೆಯುವ ಸುದ್ದಿ ಮಾಡಿತ್ತು.
ಈ ನಡುವೆ, ಸುಳ್ಯ ಬಿಇಓ ಕಚೇರಿಯಿಂದ ಚೈಲ್ಡ್ ಲೈನ್ ಸಂಸ್ಥೆಗೆ ತನಿಖೆ ನಡೆಸುವಂತೆ ಸೂಚಿಸಲಾಗಿತ್ತು. ಚೈಲ್ಡ್ ಲೈನ್ ಸಂಸ್ಥೆಯವರು ಮನೆಗೆ ಬಂದು ಬಾಲಕಿಯ ತಪಾಸಣೆ ನಡೆಸಿ ವರದಿ ನೀಡಿದ್ದಾರೆ. ಅಲ್ಲದೆ, ಬಾಲಕಿ ತಾಯಿ ಬಳಿ ಸುಬ್ರಹ್ಮಣ್ಯ ಠಾಣೆಗೆ ದೂರು ನೀಡಲು ಸೂಚಿಸಿದ್ದಾರೆ. ಅದರಂತೆ, ಸುಬ್ರಹ್ಮಣ್ಯ ಠಾಣೆಯಲ್ಲಿ ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
Police have field a POCSO act against a private school administrator of sullia for sexually harassing a eight-year-old girl in the school.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am