ಬ್ರೇಕಿಂಗ್ ನ್ಯೂಸ್
29-11-24 12:02 pm Mangalore Correspondent ಕ್ರೈಂ
ಮಂಗಳೂರು, ನ.29: ಸುರತ್ಕಲ್ ಬಳಿಯ ಶ್ರೀನಿವಾಸ್ ಮೆಡಿಕಲ್ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗೆ ರ್ಯಾಗಿಂಗ್ ನಡೆಸಿದ ಆರೋಪದಲ್ಲಿ ಅದೇ ವರ್ಷದ ಮೂರನೇ ವರ್ಷದ 9 ಮಂದಿ ಕೇರಳ ಮೂಲದ ಕಾಲೇಜು ವಿದ್ಯಾರ್ಥಿಗಳ ವಿರುದ್ಧ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂತ್ರಸ್ತ ವಿದ್ಯಾರ್ಥಿಯೊಬ್ಬ ದೂರು ನೀಡಿದ್ದು, ಸಿದಾಯತ್, ಅಮಲ್ ಕೃಷ್ಣ, ಸಾಜಿದ್, ಅಜೀಮ್ ಶಾ, ಆಡಮ್, ಫಯಾದ್, ಅತುಲ್ ಕೆ, ದಿಲೀಪ್, ಅಫ್ಜಲ್, ಶಿಬಿನ್ ಆರೋಪಿಗಳು. ಇಡ್ಯಾ ಗ್ರಾಮದಲ್ಲಿ ಆರೋಪಿ ಸಿದಾಯತ್ ಮಾಡಿಕೊಂಡಿದ್ದ ಬಾಡಿಗೆ ಮನೆಯಲ್ಲಿ ಘಟನೆ ನಡೆದಿದೆ. ವಿದ್ಯಾರ್ಥಿಗಳೆಲ್ಲ ಕೇರಳ ಮೂಲದವರಾಗಿದ್ದು, ಅಲೈಡ್ ಹೆಲ್ತ್ ಸೈನ್ಸ್ ವಿಭಾಗದಲ್ಲಿ ಸೈಕಾಲಜಿ ಓದುತ್ತಿದ್ದರು. ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಡಿಬಾರ್ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಕಾಲೇಜಿನ ಹಿರಿಯ ವಿದ್ಯಾರ್ಥಿ ಸಿದಾಯತ್ ನ.25ರಂದು ಸಂಜೆ 5.45ಕ್ಕೆ ಕರೆ ಮಾಡಿ, ಲೈವ್ ಲೊಕೇಶನ್ ಕಳಿಸಿ ತನ್ನ ಬಾಡಿಗೆ ಮನೆಗೆ ಬರಲು ಹೇಳಿದ್ದ. ಐವರು ಸ್ನೇಹಿತರ ಜೊತೆಗೆ ಅಲ್ಲಿದ್ದ ಕಟ್ಟಡದ ಮೊದಲ ಮಹಡಿಗೆ ಹೋದಾಗ ಅಲ್ಲಿ ಸಿದಾಯತ್, ಅಮಲ್ ಕೃಷ್ಣ ಹಾಗೂ ಸಾಜಿದ್ ಇದ್ದರು. ಅವರು ಅವಾಚ್ಯ ಶಬ್ದಗಳಿಂದ ಬೈದು ಬಾಗಿಲು ಮುಚ್ಚಿ ನನ್ನಲ್ಲಿ ಹಾಡಲು ಹೇಳಿ ಕುಣಿಯುವುದಕ್ಕೆ ಒತ್ತಡ ಹಾಕಿದ್ದರು. ಇದನ್ನು ವಿರೋಧಿಸಿದ್ದಕ್ಕೆ ಅಲ್ಲಿದ್ದ ಮೂವರು ಸೇರಿಕೊಂಡು ಕೆನ್ನೆಗೆ ಹೊಡೆದಿದ್ದಾರೆ ಎಂದು ಸಂತ್ರಸ್ತ ವಿದ್ಯಾರ್ಥಿ ದೂರಿನಲ್ಲಿ ತಿಳಿಸಿದ್ದಾರೆ.
ಬಳಿಕ ಶಿಬಿನ್, ಅಜೀಮ್ ಶಾ, ಆಡಮ್, ಫಹಾದ್, ಅತುಲ್, ದಿಲೀಪ್ ಕೊಠಡಿಗೆ ಬಂದಿದ್ದು, ಕಾಲೇಜು ಆಡಳಿತ ಮಂಡಳಿ ಅಥವಾ ಪೊಲೀಸರಿಗೆ ದೂರು ನೀಡಿದಲ್ಲಿ ಕೊಲ್ಲದೆ ಬಿಡುವುದಿಲ್ಲ ಎಂದು ಹೇಳಿ ಬೆದರಿಕೆ ಹಾಕಿದ್ದರು. ಮರುದಿನ ಬೆಳಗ್ಗೆ ನೋಡಿದಾಗ ತನ್ನ ಕಿವಿಯಲ್ಲಿ ರಕ್ತ ಸೋರುತ್ತಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದೇನೆ. ಕಾಲೇಜಿನ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಆಂಟಿ ರಾಗಿಂಗ್ ಕಮಿಟಿಗೆ ದೂರು ನೀಡಿದ್ದೇನೆ ಎಂದು ಸಂತ್ರಸ್ತ ವಿದ್ಯಾರ್ಥಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದು, ಸುರತ್ಕಲ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
Ragging and Assult on junior student at mukka srinivas medical College in Mangalore, case filed. The surathkal police are now investigating the case after a junior studnet was ragged assulted and later was issue like threat.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 04:52 pm
HK News Staffer
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
15-08-26 06:11 pm
HK News Staffer
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm
Belthangady Couple Suicide, Bangalore: ಬೆಂಗಳೂ...
15-08-26 01:28 pm