ಬ್ರೇಕಿಂಗ್ ನ್ಯೂಸ್
29-11-24 12:20 pm Mangalore Correspondent ಕ್ರೈಂ
ಬೆಳ್ತಂಗಡಿ, ನ.29: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದ ಕುಟುಂಬವೊಂದರ ಮಹಿಳೆಯ ಬ್ಯಾಗ್ ನಲ್ಲಿದ್ದ ನಗದು ಸಹಿತ ಸುಮಾರು 12.80 ಲಕ್ಷ ರೂ. ಮೌಲ್ಯದ 40 ಪವನ್ ಚಿನ್ನಾಭರಣಗಳನ್ನು ಕಳ್ಳರು ಎಗರಿಸಿದ ಘಟನೆ ನ.24ರಂದು ನಡೆದಿದ್ದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಜಿಲ್ಲೆಯ ಕಾಪು ಕೋಟೆ ಗ್ರಾಮದ ಜೋಗಿ ಕಂಪೌಂಡ್ ನಿವಾಸಿ ಗಾಯತ್ರಿ ಆರ್. ಜೋಗಿ ಅವರಿಗೆ ಸೇರಿದ ಬ್ಯಾಗ್ ನಲ್ಲಿದ್ದ 10 ಸಾವಿರ ರೂ. ನಗದು ಹಾಗೂ 12.80 ಲಕ್ಷ ರೂ. ಮೌಲ್ಯದ 40 ಪವನ್ ಚಿನ್ನಾಭರಣಗಳನ್ನು ಕಳ್ಳರು ಕಳವು ಮಾಡಿದ್ದಾರೆ.
ಗಾಯತ್ರಿ ಅವರು ತನ್ನ ಮಗಳು ರಜಿತಾ, ಆಕೆಯ 7 ತಿಂಗಳ ಮಗು ಹಾಗೂ ತಾಯಿ ತಾರಾ ಜೋಗಿ ಜೊತೆ ನ.24ರಂದು ಬೆಳಗ್ಗೆ 10 ಗಂಟೆಗೆ ಮನೆಯಿಂದ ಕಾರಿನಲ್ಲಿ ಧರ್ಮಸ್ಥಳಕ್ಕೆ ಬಂದಿದ್ದರು. ಬರುವಾಗ ತಮ್ಮ ಬ್ಯಾಗ್ ನಲ್ಲಿ ಮಗಳ ಹಾಗೂ ಮಗುವಿನ ಹಾಗೂ ತನಗೆ ಸೇರಿದ 40 ಪವನ್ ಚಿನ್ನಾಭರಣಗಳನ್ನು ಎರಡು ಪರ್ಸ್ ನಲ್ಲಿ ಇಟ್ಟು 10 ಸಾವಿರ ನಗದನ್ನು ಇನ್ನೊಂದು ಬ್ಯಾಗ್ ನಲ್ಲಿಟ್ಟು ಬಂದಿದ್ದರು. ಮಧ್ಯಾಹ್ನ 1.45ರ ಸುಮಾರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದು ಕಾರನ್ನು ವಾಹನ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದರು. ಬಳಿಕ ದೇವರ ದರ್ಶನಕ್ಕೆ ದೇವಸ್ಥಾನದ ಒಳಗಡೆ ಹೋಗಿ ದೇವರ ದರ್ಶನ ಮುಗಿಸಿ ಮಧ್ಯಾಹ್ನ 2.30 ಗಂಟೆಯ ಸಮಯಕ್ಕೆ ಬ್ಯಾಗನ್ನು ನೋಡಿದಾಗ, ಜಿಪ್ ತೆರೆದುಕೊಂಡಿರುವುದು ಕಂಡುಬಂದಿತ್ತು.
ಬ್ಯಾಗ್ ನಲ್ಲಿಟ್ಟಿದ್ದ ಸುಮಾರು 40 ಪವನ್ ಚಿನ್ನಾಭರಣಗಳನ್ನು ಇರಿಸಿದ್ದ ಎರಡು ಪರ್ಸ್ ಹಾಗೂ ನಗದು ನಾಪತ್ತೆಯಾಗಿತ್ತು. ಕೂಡಲೇ ಪಾರ್ಕ್ ಮಾಡಿದ್ದ ಕಾರಿನತ್ತ ತೆರಳಿ ಹುಡುಕಾಡಿದಾಗ ಅಲ್ಲಿಯೂ ಚಿನ್ನಾಭರಣ ಪತ್ತೆಯಾಗಿರಲಿಲ್ಲ. ದೇವರ ದರ್ಶನ ಸಂದರ್ಭದಲ್ಲಿಯೇ ಬ್ಯಾಗಿನಲ್ಲಿದ್ದ ಚಿನ್ನಾಭರಣವನ್ನು ಯಾರೋ ಕಳವುಗೈದಿರಬೇಕೆಂದು ಗಾಯತ್ರಿ ಜೋಗಿ ಅವರು ಧರ್ಮಸ್ಥಳ ಠಾಣೆಯಲ್ಲಿ ದೂರು ನೀಡಿದ್ದಾರೆ.
Family from Udupi lost 40 pound gold after robbers steal stolen gold during visit to Dharmasthala in Mangalore.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:19 pm
Mangalore Correspondent
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm