ಬ್ರೇಕಿಂಗ್ ನ್ಯೂಸ್
29-11-24 12:20 pm Mangalore Correspondent ಕ್ರೈಂ
ಬೆಳ್ತಂಗಡಿ, ನ.29: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದ ಕುಟುಂಬವೊಂದರ ಮಹಿಳೆಯ ಬ್ಯಾಗ್ ನಲ್ಲಿದ್ದ ನಗದು ಸಹಿತ ಸುಮಾರು 12.80 ಲಕ್ಷ ರೂ. ಮೌಲ್ಯದ 40 ಪವನ್ ಚಿನ್ನಾಭರಣಗಳನ್ನು ಕಳ್ಳರು ಎಗರಿಸಿದ ಘಟನೆ ನ.24ರಂದು ನಡೆದಿದ್ದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಜಿಲ್ಲೆಯ ಕಾಪು ಕೋಟೆ ಗ್ರಾಮದ ಜೋಗಿ ಕಂಪೌಂಡ್ ನಿವಾಸಿ ಗಾಯತ್ರಿ ಆರ್. ಜೋಗಿ ಅವರಿಗೆ ಸೇರಿದ ಬ್ಯಾಗ್ ನಲ್ಲಿದ್ದ 10 ಸಾವಿರ ರೂ. ನಗದು ಹಾಗೂ 12.80 ಲಕ್ಷ ರೂ. ಮೌಲ್ಯದ 40 ಪವನ್ ಚಿನ್ನಾಭರಣಗಳನ್ನು ಕಳ್ಳರು ಕಳವು ಮಾಡಿದ್ದಾರೆ.
ಗಾಯತ್ರಿ ಅವರು ತನ್ನ ಮಗಳು ರಜಿತಾ, ಆಕೆಯ 7 ತಿಂಗಳ ಮಗು ಹಾಗೂ ತಾಯಿ ತಾರಾ ಜೋಗಿ ಜೊತೆ ನ.24ರಂದು ಬೆಳಗ್ಗೆ 10 ಗಂಟೆಗೆ ಮನೆಯಿಂದ ಕಾರಿನಲ್ಲಿ ಧರ್ಮಸ್ಥಳಕ್ಕೆ ಬಂದಿದ್ದರು. ಬರುವಾಗ ತಮ್ಮ ಬ್ಯಾಗ್ ನಲ್ಲಿ ಮಗಳ ಹಾಗೂ ಮಗುವಿನ ಹಾಗೂ ತನಗೆ ಸೇರಿದ 40 ಪವನ್ ಚಿನ್ನಾಭರಣಗಳನ್ನು ಎರಡು ಪರ್ಸ್ ನಲ್ಲಿ ಇಟ್ಟು 10 ಸಾವಿರ ನಗದನ್ನು ಇನ್ನೊಂದು ಬ್ಯಾಗ್ ನಲ್ಲಿಟ್ಟು ಬಂದಿದ್ದರು. ಮಧ್ಯಾಹ್ನ 1.45ರ ಸುಮಾರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದು ಕಾರನ್ನು ವಾಹನ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದರು. ಬಳಿಕ ದೇವರ ದರ್ಶನಕ್ಕೆ ದೇವಸ್ಥಾನದ ಒಳಗಡೆ ಹೋಗಿ ದೇವರ ದರ್ಶನ ಮುಗಿಸಿ ಮಧ್ಯಾಹ್ನ 2.30 ಗಂಟೆಯ ಸಮಯಕ್ಕೆ ಬ್ಯಾಗನ್ನು ನೋಡಿದಾಗ, ಜಿಪ್ ತೆರೆದುಕೊಂಡಿರುವುದು ಕಂಡುಬಂದಿತ್ತು.
ಬ್ಯಾಗ್ ನಲ್ಲಿಟ್ಟಿದ್ದ ಸುಮಾರು 40 ಪವನ್ ಚಿನ್ನಾಭರಣಗಳನ್ನು ಇರಿಸಿದ್ದ ಎರಡು ಪರ್ಸ್ ಹಾಗೂ ನಗದು ನಾಪತ್ತೆಯಾಗಿತ್ತು. ಕೂಡಲೇ ಪಾರ್ಕ್ ಮಾಡಿದ್ದ ಕಾರಿನತ್ತ ತೆರಳಿ ಹುಡುಕಾಡಿದಾಗ ಅಲ್ಲಿಯೂ ಚಿನ್ನಾಭರಣ ಪತ್ತೆಯಾಗಿರಲಿಲ್ಲ. ದೇವರ ದರ್ಶನ ಸಂದರ್ಭದಲ್ಲಿಯೇ ಬ್ಯಾಗಿನಲ್ಲಿದ್ದ ಚಿನ್ನಾಭರಣವನ್ನು ಯಾರೋ ಕಳವುಗೈದಿರಬೇಕೆಂದು ಗಾಯತ್ರಿ ಜೋಗಿ ಅವರು ಧರ್ಮಸ್ಥಳ ಠಾಣೆಯಲ್ಲಿ ದೂರು ನೀಡಿದ್ದಾರೆ.
Family from Udupi lost 40 pound gold after robbers steal stolen gold during visit to Dharmasthala in Mangalore.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am