ಬ್ರೇಕಿಂಗ್ ನ್ಯೂಸ್
06-12-24 02:26 pm Mangalore Correspondent ಕ್ರೈಂ
ಮಂಗಳೂರು, ಡಿ.6: ಸಹಾಯ ಮಾಡುವ ನೆಪದಲ್ಲಿ ಮನೆಗೆ ಬಂದಿದ್ದ ಯುವಕನೊಬ್ಬ ಜ್ಯೂಸ್ನಲ್ಲಿ ಅಮಲಿನ ಔಷಧಿ ಬೆರೆಸಿ ತನ್ನ ಮೇಲೆ ಅತ್ಯಾಚಾರ ನಡೆಸಿದ್ದಾಗಿ ಯುವತಿಯೊಬ್ಬಳು ಮಂಗಳೂರಿನ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ.
ಜುಲೈ 21ರಂದು ಸಂತ್ರಸ್ತ ಯುವತಿ ಕಾರು ಚಲಾಯಿಸಿಕೊಂಡು ಹೋಗುತ್ತಿದ್ದಾಗ ಕದ್ರಿ ರಸ್ತೆಯ ಬಳಿ ಕಾರು ಕೆಟ್ಟು ಹೋಗಿತ್ತು. ಈ ವೇಳೆ ಅದೇ ರಸ್ತೆಯಲ್ಲಿ ಬಂದಿದ್ದ ಬೈಕ್ ಸವಾರ ಮೊಹಮ್ಮದ್ ಶಫಿನ್ ಎಂಬಾತ ಕಾರನ್ನು ಸರಿಪಡಿಸಿ, ಬಳಿಕ ಆಕೆಯನ್ನು ಅದೇ ಕಾರಿನಲ್ಲಿ ಕೊಡಿಯಾಲ ಬೈಲಿನ ಅಪಾರ್ಟ್ಮೆಂಟ್ ಒಂದಕ್ಕೆ ಬಿಟ್ಟು ಬಂದಿದ್ದ. ಈ ವೇಳೆ ಆಕೆಯ ಮೊಬೈಲ್ ನಂಬರ್ ಪಡೆದಿದ್ದು ಸಂಪರ್ಕದಲ್ಲಿದ್ದ. ಆ.8ರಂದು ಯುವತಿಯ ಮನೆ ಫ್ರಿಡ್ಜ್ ಕೆಟ್ಟು ಹೋಗಿದ್ದು, ಮನೆಯಲ್ಲಿ ಒಬ್ಬಳೇ ವಾಸವಿದ್ದುದರಿಂದ ಯುವತಿ ಸಹಾಯಕ್ಕಾಗಿ ಶಫಿನ್ಗೆ ಕರೆ ಮಾಡಿದ್ದಾಳೆ. ಆತ ತನ್ನ ಪರಿಚಿತ ರಿಪೇರಿಯವನನ್ನು ಯುವತಿಯ ಮನೆಗೆ ಕರೆದೊಯ್ದು ರಿಪೇರಿ ಮಾಡಿಸಿ ಬಳಿಕ ಮೆಕ್ಯಾನಿಕನ್ನು ಬಿಟ್ಟು ಬರುತ್ತೇನೆ ಎಂದು ಹೇಳಿದ್ದ. ಅಲ್ಲಿ ವರೆಗೆ ಫ್ರಿಡ್ಜ್ ಆನ್ ಮಾಡಬೇಡಿ ಎಂದು ಸೂಚಿಸಿದ್ದ. ಕೆಲವು ಹೊತ್ತಿನ ಬಳಿಕ ಶಫಿನ್ ವಾಪಸು ಬಂದಿದ್ದು, ಈ ವೇಳೆ ಹಣ್ಣು ಹಾಗೂ ಜ್ಯೂಸ್ ತಂದಿದ್ದ. ಜ್ಯೂಸ್ ಕುಡಿದ ಯುವತಿ ನಿದ್ದೆಗೆ ಜಾರಿದ್ದಳು. ಎಚ್ಚರಗೊಂಡಾಗ ಅನುಮಾನದಲ್ಲಿ ವಿಚಾರಿಸಿದಾಗ ದೈಹಿಕ ಸಂಪರ್ಕ ನಡೆಸಿರುವುದಾಗಿ ತಿಳಿಸಿದ್ದ. ಜತೆಗೆ ಮುಂದೆಯೂ ಸಹಕರಿಸಬೇಕು. ಇಲ್ಲದಿದ್ದರೆ ಸಾಮಾಜಿಕ ಮಾಧ್ಯಮಗಳಲ್ಲಿ ಈಗಾಗಲೇ ಮಾಡಿರುವ ವೀಡಿಯೋವನ್ನು ಹಾಕುವುದಾಗಿ ಬೆದರಿಕೆ ಹಾಕಿ ಬ್ಲ್ಯಾಕ್ಮೇಲ್ ಮಾಡಿದ್ದಾನೆ. ಮತ್ತು ಜತೆಗೆ ತನ್ನ ಕಾರನ್ನು ಕೂಡ ಆತ ಕೊಂಡೊಯ್ದಿದ್ದ ಎಂದು ಸಂತ್ರಸ್ತ ಯುವತಿ ಆರೋಪಿಸಿದ್ದಾಳೆ.
ಈ ನಡುವೆ ಯುವತಿ ಮನೆಯವರು ಕಾರನ್ನು ಕೇಳಿದ್ದು ಆತನಿಂದ ಕಾರನ್ನು ಪಡೆದುಕೊಳ್ಳಲು ಯುವತಿ ಅ.25ರಂದು ಆತನ ವಿಳಾಸವನ್ನು ಹುಡುಕಿ ಉಳ್ಳಾಲ ದೇರಳಕಟ್ಟೆಯ ಆತ ವಾಸವಿದ್ದ ಅಪಾರ್ಟ್ಮೆಂಟ್ಗೆ ಹೋಗಿದ್ದಾಗ ಕಾರು ಪಾರ್ಕಿಂಗ್ ಸ್ಥಳದಲ್ಲಿರುವುದು ಕಂಡುಬಂದಿದೆ. ವಾಚ್ಮನ್ ಬಳಿ ಮನೆಯ ವಿಳಾಸ ಪಡೆದು ಹೋಗಿ ಆತನ ತಾಯಿಯಲ್ಲಿ ಕಾರಿನ ಬಗ್ಗೆ ವಿನಂತಿಸಿದಾಗ ಅಲ್ಲಿದ್ದ ಶಫಿನ್ನ ಅಣ್ಣ ಮೊಹಮ್ಮದ್ ಶಿಯಾಬ್ ಕೂಡ ತನ್ನ ಮೇಲೆ ಕೈಮಾಡಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಜೊತೆಗೆ ಕೊಲೆ ಬೆದರಿಕೆಯನ್ನೂ ಹಾಕಿದ್ದಾನೆ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾಳೆ. ಅ. 27ರಂದು ರಾತ್ರಿ 9 ಗಂಟೆ ವೇಳೆ ಮೊಹಮ್ಮದ್ ಶಫೀನ್ ಅಕ್ರಮವಾಗಿ ಯುವತಿಯ ಮನೆಗೆ ಪ್ರವೇಶಿಸಿ, ಆಕೆಯ ಬ್ಯಾಗ್ನಲ್ಲಿದ್ದ 62 ಸಾವಿರ ರೂ. ಹಣವನ್ನು ಕಳವು ಮಾಡಿಕೊಂಡು ಹೋಗಿದ್ದ ಎಂದೂ ದೂರಿನಲ್ಲಿ ತಿಳಿಸಲಾಗಿದೆ. ಕದ್ರಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
A fridge repair technician in Mangalore has been accused of raping a girl at her home in Kadri. The victim filed a complaint after the incident, which occurred following the repair of her car in Kadri. It is alleged that the accused assisted her during the repair and subsequently went to her home, where the assault took place.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
11-05-26 06:20 pm
HK News Staffer
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm