ಬ್ರೇಕಿಂಗ್ ನ್ಯೂಸ್
06-12-24 10:42 pm Mangalore Correspondent ಕ್ರೈಂ
ಉಳ್ಳಾಲ, ಡಿ.6: ಉಳ್ಳಾಲ ಪೊಲೀಸ್ ಠಾಣೆಯೊಳಗಡೆ ಬಜರಂಗದಳ ಮುಖಂಡ ಅರ್ಜುನ್ ಮಾಡೂರು ಮೇಲೆ ಹಲ್ಲೆಗೈದಿದ್ದ ಆರೋಪಿ ಹೊಸಂಗಡಿ ,ಕಡಂಬಾರು ನಿವಾಸಿ ಮಹಮ್ಮದ್ ಆಸಿಫ್ ಜಾಮೀನಿನಲ್ಲಿ ಜೈಲಿನಿಂದ ಹೊರ ಬರುತ್ತಲೇ ಆತನ ಮೇಲೆ ಪ್ರತೀಕಾರ ತೀರಿಸಲು ತಲವಾರು ದಾಳಿಗೆ ಯತ್ನಿಸಿದ್ದರೆನ್ನಲಾದ ನಾಲ್ವರು ಆರೋಪಿಗಳನ್ನ ಉಳ್ಳಾಲ ಪೊಲೀಸರು ಬಂಧಿಸಿದ್ದರು. ಇದೀಗ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮತ್ತೋರ್ವ ಆರೋಪಿಯೆನ್ನಲಾದ ಅರ್ಜುನ್ ಮಾಡೂರನ್ನು ಉಳ್ಳಾಲ ಪೊಲೀಸರು ಶುಕ್ರವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ತೊಕ್ಕೊಟ್ಟುವಿನ ಮೇಲ್ಸೇತುವೆಯಲ್ಲಿ ಅ.16 ರ ರಾತ್ರಿ ಕುಂಪಲದ ಶರತ್, ಕೇರಳದ ಇಬ್ರಾಹಿಂ ಖಲೀಲ್ ಅವರ ಕಾರುಗಳ ಮಧ್ಯೆ ನಡೆದಿದ್ದ ಸಣ್ಣ ಅಪಘಾತ ಪ್ರಕರಣವು ಉಳ್ಳಾಲ ಪೊಲೀಸ್ ಠಾಣೆಯ ಮೆಟ್ಟಿಲೇರಿತ್ತು. ಶರತ್ ಅವರ ಸ್ನೇಹಿತ ಅರ್ಜುನ್ ಮಾಡೂರು ಅವರು ಉಳ್ಳಾಲ ಪೊಲೀಸ್ ಠಾಣೆಗೆ ಭೇಟಿ ನೀಡಿ ಇನ್ಸ್ ಪೆಕ್ಟರ್ ಕೊಠಡಿಯೊಳಗೆ ಕಾರು ಚಾಲಕರಾದ ಶರತ್ ,ಖಲೀಲ್ ಜತೆ ರಾಜಿ ಮಾತುಕತೆ ನಡೆಸುತ್ತಿದ್ದ ವೇಳೆ ಖಲೀಲ್ ಸಹೋದರ ಆಸಿಫ್ ಎಂಬಾತ ಅರ್ಜುನ್ ಮಾಡೂರಿಗೆ ಏಕಾಏಕಿ ಹಲ್ಲೆ ನಡೆಸಿದ್ದ.
ಅರ್ಜುನ್ ಮಾಡೂರು ಮೇಲಿನ ಹಲ್ಲೆ ಖಂಡಿಸಿ ಮಧ್ಯರಾತ್ರಿಯೇ ಹಿಂದೂ ಸಂಘಟನೆ ಕಾರ್ಯಕರ್ತರು ಉಳ್ಳಾಲ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ್ದರು. ಪೊಲೀಸರು ಆರೋಪಿ ಆಸಿಫ್ ನನ್ನ ವಶಕ್ಕೆ ಪಡೆದು ಕೇಸು ಹಾಕಿ ಜೈಲಿಗೆ ತಳ್ಳಿದ್ದರು. ಕಳೆದ ನ.8ರಂದು ಆರೋಪಿ ಮಹಮ್ಮದ್ ಆಸಿಫ್ ಗೆ ಜಾಮೀನು ದೊರೆತಿತ್ತು. ಆಸಿಫ್ ತನ್ನ ಕುಟುಂಬಸ್ಥರ ಜೊತೆ ಕಾರಿನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ತಲಪಾಡಿ ಬಳಿಯ ಕೆ.ಸಿ ರೋಡ್ ನಿಂದ ಆಗಂತುಕರು ಮಾರಕಾಯುಧಗಳಿಂದ ಬೆನ್ನಟ್ಟಿದ್ದಾರೆಂದು ಆರೋಪಿಸಿ ಉಳ್ಳಾಲ ಠಾಣೆಗೆ ದೂರು ನೀಡಲಾಗಿತ್ತು.
ತನಿಖೆ ನಡೆಸಿದ್ದ ಉಳ್ಳಾಲ ಪೊಲೀಸರು ಇಡ್ಯ ಈಶ್ವರ ನಗರದ ಅಣ್ಣಪ್ಪ ಸ್ವಾಮಿ ಯಾನೆ ಮನು (24), ಪಡೀಲ್ ನಾರ್ಲದ ಸಚಿನ್ (24), ಪಜೀರು ಪಾದಲ್ ಕೋಡಿಯ ಕುಶಿತ್(18) ಮತ್ತು ಕಾನೂನಿನೊಂದಿಗೆ ಸಂಘರ್ಷಕ್ಕೆ ಒಳಗಾದ ಅಪ್ರಾಪ್ತನನ್ನ ಬಂಧಿಸಿದ್ದರು. ಆರೋಪಿಗಳಲ್ಲಿ ಕುಶಿತ್ ಜಾಮೀನಿನಲ್ಲಿ ಬಿಡುಗಡೆಯಾಗಿದ್ದ. ಇದೀಗ ಪ್ರಕರಣದಲ್ಲಿ ಮತ್ತೋರ್ವ ಆರೋಪಿ ಎನ್ನಲಾದ ಅರ್ಜುನ್ ಮಾಡೂರನ್ನ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
Bajrang dal activist Arjun Madoor arrested over attempt to murder by ullal police in Mangalore. A youth from Kerala assaulted a leader of a Hindu organization inside a police inspector’s room during an inquiry into a car collision, leading to his arrest. Hindu organization workers gathered outside the police station at midnight in protest.
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 05:09 pm
Mangalore Correspondent
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm